Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...