Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...