Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...