Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...