Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...