Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...