Homeಅಂತರಾಷ್ಟ್ರೀಯಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

- Advertisement -
- Advertisement -

ವಿಶ್ವಸಂಸ್ಥೆ ಹಕ್ಕುಗಳ ಕಚೇರಿಯ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್ ಶಾಂತಿಯುತ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಲು ಮ್ಯಾನ್ಮಾರ್ ಭದ್ರತಾ ಪಡೆಗಳನ್ನು ಒತ್ತಾಯಿಸಿದ್ದಾರೆ.

ಮ್ಯಾನ್ಮಾರ್‌ನ ಫೆಬ್ರವರಿ 1 ರ ದಂಗೆಯ ನಂತರ ಕನಿಷ್ಠ 54 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 1,700 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹಕ್ಕುಗಳ ಮುಖ್ಯಸ್ಥರು ಗುರುವಾರ ಹೇಳಿದ್ದಾರೆ. ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲ್ಲುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಮ್ಯಾನ್ಮಾರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯ ನಂತರ ಈ ಪ್ರತಿಕ್ರಿಯೆಗಳು ಬಂದಿವೆ. ಪ್ರತಿಭಟನಾನಿರತ ಜನಸಂದಣಿಯ ಮೇಲೆ ಭದ್ರತಾ ಪಡೆಗಳು ಗುಂಡುಗಳನ್ನು ಹಾರಿಸಿದ ಪರಿಣಾಮ ಬುಧವಾರ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ.

“ಮ್ಯಾನ್ಮಾರ್‌ನ ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲೆ ಮಾಡುವುದು ಮತ್ತು ಜೈಲಿಗೆ ಹಾಕುವುದನ್ನು ನಿಲ್ಲಿಸಬೇಕು” ಎಂದು ಮಿಚೆಲ್ ಬ್ಯಾಚೆಲೆಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಭದ್ರತಾ ಪಡೆಗಳು ದೇಶಾದ್ಯಂತ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ನೇರ ಮದ್ದುಗುಂಡುಗಳನ್ನು ಹಾರಿಸುತ್ತಿರುವುದು ಸಂಪೂರ್ಣವಾಗಿ ಅಸಹ್ಯಕರವಾಗಿದೆ. ತುರ್ತು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್‌ಗಳ ವಿರುದ್ಧ ನಡೆದ ದಾಳಿಗಳ ಬಗ್ಗೆಯೂ ದಿಗಿಲುಗೊಂಡಿದ್ದೇವೆ” ಎಂದು ಅವರು ಹೇಳಿದರು.

‘ಫೆಬ್ರವರಿ 1 ರಿಂದ ಕನಿಷ್ಠ 54 ಜನರನ್ನು ಪೊಲೀಸ್ ಮತ್ತು ಮಿಲಿಟರಿ ಅಧಿಕಾರಿಗಳು ಕೊಂದಿದ್ದಾರೆ ಎಂಬ ಮಾಹಿತಿಯನ್ನು ದೃಢಪಡಿಸಲಾಗಿದೆ ಎಂದು ಯುಎನ್ ಹಕ್ಕುಗಳ ಕಚೇರಿ ತಿಳಿಸಿದೆ. ಆದರೂ ನಿಜವಾದ ಸಾವಿನ ಸಂಖ್ಯೆ ಹೆಚ್ಚಿರನಹುದು. ಈಗ ಲಭ್ಯವಾದ ಅಂಕಿಸಂಖ್ಯೆಯನ್ನು ಮಾತ್ರ ಪರಿಶೀಲಿಸಲು ಸಾಧ್ಯವಾಗಿದೆ’ ಎಂದು ಅದು ಒತ್ತಿ ಹೇಳಿದೆ.

ಯುಎನ್‌ನ ಇತರ ಸಂಸ್ಥೆಗಳು ಬುಧವಾರ ವರದಿ ಮಾಡಿದ 38 ಸಾವುಗಳಲ್ಲಿ 30 ಪ್ರಕರಣಗಳನ್ನು ಹಕ್ಕುಗಳ ಕಚೇರಿ ಪರಿಶೀಲಿಸಿದೆ. ಭದ್ರತಾ ಪಡೆಗಳ ಹತ್ಯೆಗಳು ಯಾಂಗೊನ್, ಮಾಂಡಲೆ, ಸಾಗಿಂಗ್, ಮ್ಯಾಗ್ವೇ ಮತ್ತು ಸೋಮಗಳಲ್ಲಿ ನಡೆದಿವೆ ಎಂದು ಅದು ಹೇಳಿದೆ.
ಇನ್ನೊಬ್ಬ ವ್ಯಕ್ತಿಯನ್ನು ಮಂಗಳವಾರ ಮತ್ತು 18 ಜನರನ್ನು ಭಾನುವಾರ ಕೊಲ್ಲಲಾಗಿದೆ ಎಂದು ದಾಖಲಿಸಲಾಗಿದೆ.

ದಂಗೆಯ ನಂತರ, 1,700 ಕ್ಕೂ ಹೆಚ್ಚು ಜನರನ್ನು “ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಥವಾ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಆರೋಪದಲ್ಲಿ ನಿರಂಕುಶವಾಗಿ ಬಂಧಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ಸೈನಿಕರು ಮತ್ತು ಪೊಲೀಸರು ಮನೆ ಮನೆಗೆ ತೆರಳಿ ಶೋಧ ನಡೆಸಿದ್ದರಿಂದ ಕನಿಷ್ಠ 700 ಜನರನ್ನು ಬುಧವಾರ ಒಂದೇ ದಿನ ವಶಕ್ಕೆ ಪಡೆಯಲಾಗಿದೆ.

ಮಿಲಿಟರಿ ದೌರ್ಜನ್ಯ ಕೊನೆಗೊಳಿಸಿ ಪ್ರತಿಭಟನೆಯ ಬಂಧಿತರಲ್ಲಿ ಸಂಸದರು, ರಾಜಕೀಯ ಮತ್ತು ಹಕ್ಕುಗಳ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಪತ್ರಕರ್ತರು ಮತ್ತು ಸನ್ಯಾಸಿಗಳು ಸೇರಿದ್ದಾರೆ ಎಂದು ಅದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಕನಿಷ್ಠ 29 ಪತ್ರಕರ್ತರನ್ನು ಬಂಧಿಸಲಾಗಿದೆ, ಅವರಲ್ಲಿ ಎಂಟು ಮಂದಿಯ ಮೇಲೆ ಸರ್ಕಾರದ ವಿರೋಧ ಅಥವಾ ದ್ವೇಷವನ್ನು ಪ್ರಚೋದಿಸುವುದು ಮತ್ತು ಕಾನೂನುಬಾಹಿರ ಸಭೆಗಳಿಗೆ ಹಾಜರಾಗುವುದು ಸೇರಿದಂತೆ ಇತರ ಅಪರಾಧದ ಆರೋಪಗಳನ್ನು ಹೊರಿಸಲಾಗಿದೆ.

“ಮಾಹಿತಿ ಮತ್ತು ಪ್ರಭಾವ ಹೊಂದಿರುವ ಎಲ್ಲರನ್ನೂ ನಾನು ಕೋರುತ್ತೇನೆ … ಈಗ ಮತ್ತು ಹಿಂದೆ ನಡೆದಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಮಿಲಿಟರಿ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವ ಅಂತರರಾಷ್ಟ್ರೀಯ ಪ್ರಯತ್ನಗಳನ್ನು ಬೆಂಬಲಿಸಬೇಕು” ಎಂದು ಬ್ಯಾಚೆಲೆಟ್ ಹೇಳಿದರು.

“ಆಡಳಿತವನ್ನು ನ್ಯಾಯದ ಕಡೆಗೆ ತಿರುಗಿಸಲು ಮತ್ತು ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವದ ಮೇಲೆ ಮಿಲಿಟರಿಯ ಕತ್ತು ಹಿಸುಕುವಿಕೆಯನ್ನು ಕೊನೆಗೊಳಿಸಲು ಇದು ಸೂಕ್ತ ಸಂದರ್ಭವಾಗಿದೆ’ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಆಧಾರರಹಿತ ಕ್ಷುಲ್ಲಕ ದೇಶದ್ರೋಹ ಪ್ರಕರಣಗಳ ಇತ್ತೀಚಿನ 10 ಉದಾಹರಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...