Homeಅಂತರಾಷ್ಟ್ರೀಯಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

- Advertisement -
- Advertisement -

ವಿಶ್ವಸಂಸ್ಥೆ ಹಕ್ಕುಗಳ ಕಚೇರಿಯ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್ ಶಾಂತಿಯುತ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಲು ಮ್ಯಾನ್ಮಾರ್ ಭದ್ರತಾ ಪಡೆಗಳನ್ನು ಒತ್ತಾಯಿಸಿದ್ದಾರೆ.

ಮ್ಯಾನ್ಮಾರ್‌ನ ಫೆಬ್ರವರಿ 1 ರ ದಂಗೆಯ ನಂತರ ಕನಿಷ್ಠ 54 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 1,700 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹಕ್ಕುಗಳ ಮುಖ್ಯಸ್ಥರು ಗುರುವಾರ ಹೇಳಿದ್ದಾರೆ. ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲ್ಲುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಮ್ಯಾನ್ಮಾರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯ ನಂತರ ಈ ಪ್ರತಿಕ್ರಿಯೆಗಳು ಬಂದಿವೆ. ಪ್ರತಿಭಟನಾನಿರತ ಜನಸಂದಣಿಯ ಮೇಲೆ ಭದ್ರತಾ ಪಡೆಗಳು ಗುಂಡುಗಳನ್ನು ಹಾರಿಸಿದ ಪರಿಣಾಮ ಬುಧವಾರ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ.

“ಮ್ಯಾನ್ಮಾರ್‌ನ ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲೆ ಮಾಡುವುದು ಮತ್ತು ಜೈಲಿಗೆ ಹಾಕುವುದನ್ನು ನಿಲ್ಲಿಸಬೇಕು” ಎಂದು ಮಿಚೆಲ್ ಬ್ಯಾಚೆಲೆಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಭದ್ರತಾ ಪಡೆಗಳು ದೇಶಾದ್ಯಂತ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ನೇರ ಮದ್ದುಗುಂಡುಗಳನ್ನು ಹಾರಿಸುತ್ತಿರುವುದು ಸಂಪೂರ್ಣವಾಗಿ ಅಸಹ್ಯಕರವಾಗಿದೆ. ತುರ್ತು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್‌ಗಳ ವಿರುದ್ಧ ನಡೆದ ದಾಳಿಗಳ ಬಗ್ಗೆಯೂ ದಿಗಿಲುಗೊಂಡಿದ್ದೇವೆ” ಎಂದು ಅವರು ಹೇಳಿದರು.

‘ಫೆಬ್ರವರಿ 1 ರಿಂದ ಕನಿಷ್ಠ 54 ಜನರನ್ನು ಪೊಲೀಸ್ ಮತ್ತು ಮಿಲಿಟರಿ ಅಧಿಕಾರಿಗಳು ಕೊಂದಿದ್ದಾರೆ ಎಂಬ ಮಾಹಿತಿಯನ್ನು ದೃಢಪಡಿಸಲಾಗಿದೆ ಎಂದು ಯುಎನ್ ಹಕ್ಕುಗಳ ಕಚೇರಿ ತಿಳಿಸಿದೆ. ಆದರೂ ನಿಜವಾದ ಸಾವಿನ ಸಂಖ್ಯೆ ಹೆಚ್ಚಿರನಹುದು. ಈಗ ಲಭ್ಯವಾದ ಅಂಕಿಸಂಖ್ಯೆಯನ್ನು ಮಾತ್ರ ಪರಿಶೀಲಿಸಲು ಸಾಧ್ಯವಾಗಿದೆ’ ಎಂದು ಅದು ಒತ್ತಿ ಹೇಳಿದೆ.

ಯುಎನ್‌ನ ಇತರ ಸಂಸ್ಥೆಗಳು ಬುಧವಾರ ವರದಿ ಮಾಡಿದ 38 ಸಾವುಗಳಲ್ಲಿ 30 ಪ್ರಕರಣಗಳನ್ನು ಹಕ್ಕುಗಳ ಕಚೇರಿ ಪರಿಶೀಲಿಸಿದೆ. ಭದ್ರತಾ ಪಡೆಗಳ ಹತ್ಯೆಗಳು ಯಾಂಗೊನ್, ಮಾಂಡಲೆ, ಸಾಗಿಂಗ್, ಮ್ಯಾಗ್ವೇ ಮತ್ತು ಸೋಮಗಳಲ್ಲಿ ನಡೆದಿವೆ ಎಂದು ಅದು ಹೇಳಿದೆ.
ಇನ್ನೊಬ್ಬ ವ್ಯಕ್ತಿಯನ್ನು ಮಂಗಳವಾರ ಮತ್ತು 18 ಜನರನ್ನು ಭಾನುವಾರ ಕೊಲ್ಲಲಾಗಿದೆ ಎಂದು ದಾಖಲಿಸಲಾಗಿದೆ.

ದಂಗೆಯ ನಂತರ, 1,700 ಕ್ಕೂ ಹೆಚ್ಚು ಜನರನ್ನು “ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಥವಾ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಆರೋಪದಲ್ಲಿ ನಿರಂಕುಶವಾಗಿ ಬಂಧಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ಸೈನಿಕರು ಮತ್ತು ಪೊಲೀಸರು ಮನೆ ಮನೆಗೆ ತೆರಳಿ ಶೋಧ ನಡೆಸಿದ್ದರಿಂದ ಕನಿಷ್ಠ 700 ಜನರನ್ನು ಬುಧವಾರ ಒಂದೇ ದಿನ ವಶಕ್ಕೆ ಪಡೆಯಲಾಗಿದೆ.

ಮಿಲಿಟರಿ ದೌರ್ಜನ್ಯ ಕೊನೆಗೊಳಿಸಿ ಪ್ರತಿಭಟನೆಯ ಬಂಧಿತರಲ್ಲಿ ಸಂಸದರು, ರಾಜಕೀಯ ಮತ್ತು ಹಕ್ಕುಗಳ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಪತ್ರಕರ್ತರು ಮತ್ತು ಸನ್ಯಾಸಿಗಳು ಸೇರಿದ್ದಾರೆ ಎಂದು ಅದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಕನಿಷ್ಠ 29 ಪತ್ರಕರ್ತರನ್ನು ಬಂಧಿಸಲಾಗಿದೆ, ಅವರಲ್ಲಿ ಎಂಟು ಮಂದಿಯ ಮೇಲೆ ಸರ್ಕಾರದ ವಿರೋಧ ಅಥವಾ ದ್ವೇಷವನ್ನು ಪ್ರಚೋದಿಸುವುದು ಮತ್ತು ಕಾನೂನುಬಾಹಿರ ಸಭೆಗಳಿಗೆ ಹಾಜರಾಗುವುದು ಸೇರಿದಂತೆ ಇತರ ಅಪರಾಧದ ಆರೋಪಗಳನ್ನು ಹೊರಿಸಲಾಗಿದೆ.

“ಮಾಹಿತಿ ಮತ್ತು ಪ್ರಭಾವ ಹೊಂದಿರುವ ಎಲ್ಲರನ್ನೂ ನಾನು ಕೋರುತ್ತೇನೆ … ಈಗ ಮತ್ತು ಹಿಂದೆ ನಡೆದಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಮಿಲಿಟರಿ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವ ಅಂತರರಾಷ್ಟ್ರೀಯ ಪ್ರಯತ್ನಗಳನ್ನು ಬೆಂಬಲಿಸಬೇಕು” ಎಂದು ಬ್ಯಾಚೆಲೆಟ್ ಹೇಳಿದರು.

“ಆಡಳಿತವನ್ನು ನ್ಯಾಯದ ಕಡೆಗೆ ತಿರುಗಿಸಲು ಮತ್ತು ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವದ ಮೇಲೆ ಮಿಲಿಟರಿಯ ಕತ್ತು ಹಿಸುಕುವಿಕೆಯನ್ನು ಕೊನೆಗೊಳಿಸಲು ಇದು ಸೂಕ್ತ ಸಂದರ್ಭವಾಗಿದೆ’ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಆಧಾರರಹಿತ ಕ್ಷುಲ್ಲಕ ದೇಶದ್ರೋಹ ಪ್ರಕರಣಗಳ ಇತ್ತೀಚಿನ 10 ಉದಾಹರಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...