Homeಮುಖಪುಟಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

- Advertisement -
- Advertisement -

ರಾಜಕಾರಣಿಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ನಿಲ್ಲತ್ತವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

”ರಾಜಕಾರಣಿಗಳು ಧರ್ಮದೊಂದಿಗೆ ರಾಜಕೀಯವನ್ನು ಬೆರೆಸಿದಾಗ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ ದ್ವೇಷಭಾಷಣಗಳು ಕೊನೆಯಾಗುತ್ತವೆ. ನಮ್ಮ ಇತ್ತೀಚಿನ ತೀರ್ಪಿನಲ್ಲೂ ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ”ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ದ್ವೇಷದ ಮಾತುಗಳನ್ನು ಬಿಡುವುದು ಅತ್ಯಗತ್ಯವಾಗಿದೆ” ಎಂದು ನ್ಯಾಯಾಲಯ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ ಅವರು, ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ ನಾಲ್ಕು ತಿಂಗಳಲ್ಲಿ 50 ರ್ಯಾಲಿಗಳು ನಡೆದಿವೆ. ಈ ರ್ಯಾಲಿಗಳಲ್ಲಿ ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ನಂತಹ ವಿಚಾರಗಳನ್ನು ಮಾತನಾಡಿ ಮುಸ್ಲಿಂ ಸಮುದಾಯದ ವಿರುದ್ದ ಪಿತೂರಿ ಮಾಡಲು ಚರ್ಚಿಸಲಾಗಿದೆ ಎಂದು ಹೇಳಿದರು.

ಆ ಎಲ್ಲಾ ರ್ಯಾಲಿಗಳಲ್ಲಿ, ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಸಮುದಾಯದ ಬಗ್ಗೆ ಪಿತೂರಿ ಸಿದ್ಧಾಂತಗಳನ್ನು ತೇಲಿ ಬಿಡಲಾಗುತ್ತಿದೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ರ್ಯಾಲಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಪಾಷಾ ಅವರು ಬುಧವಾರದ ವಿಚಾರಣೆಯಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಅದನ್ನು ಪರಿಗಣಿಸಿದೆ.

ಈ ನ್ಯಾಯಾಂಗ ನಿಂದನೆ ಅರ್ಜಿಯು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅಲ್ಲ. ದ್ವೇಷ ಭಾಷಣವನ್ನು ನಿಗ್ರಹಿಸುವುದು ಮುಖ್ಯವಾಗಿದೆ ಎಂದು ಹೇಳಿದ ಪಾಷಾ ಅವರು, ”ಹತ್ಯಾಕಾಂಡವು ಗ್ಯಾಸ್ ಚೇಂಬರ್‌ಗಳಿಂದ ಪ್ರಾರಂಭವಾಗಲಿಲ್ಲ ಅದು ದ್ವೇಷ ಭಾಷಣದಿಂದ ಪ್ರಾರಂಭವಾಯಿತು” ಎಂದು ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅಡಮಾ ಡಿಯೆಂಗ್ ಅವರು ಹೇಳಿಕೆಯನ್ನು ಉಲ್ಲೇಖಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನೀವು ನಿಮಗೆ ಬೇಕಾದ ಕೆಲವು ಘಟನೆಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಮಾತನಾಡುತ್ತಿದ್ದೀರಿ ಎಂದರು.

”ಅರ್ಜಿದಾರರಿಗೆ ದ್ವೇಷ ಭಾಷಣದ ಬಗ್ಗೆ ಕಾಳಜಿ ಇದ್ದರೆ, ಅವರು ಕೇರಳ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಮಾಡಿದ ದ್ವೇಷಪೂರಿತ ಮಾತುಗಳ ಬಗ್ಗೆ ಚರ್ಚಿಸಲಿ, ಅಂತಹ ಎಲ್ಲಾ ನಿದರ್ಶನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೆಹ್ತಾ ಹೇಳಿದರೆಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಿಮ್ಮ ಈ ಅರ್ಜಿಗೆ ಸೇರಿಸಬೇಕಾದ ಕೆಲವು ಹೇಳಿಕೆಗಳನ್ನು ನಾವು ಸಹ ಸೇರಿಸಬೇಕಿದೆ. ”ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ನಾಯಕರು ನಿಮಗೆ ಸಮಾನತೆ ಬೇಕಾದರೆ ಎಲ್ಲಾ ಬ್ರಾಹ್ಮಣರನ್ನು ಕಡಿಯಬೇಕು ಎಂದು ಹೇಳುತ್ತಾರೆ….” ದಯವಿಟ್ಟು ಕೇರಳದ ಈ ಕ್ಲಿಪ್ ಅನ್ನು ಕೇಳಿ, ಇದು ಆಘಾತಕಾರಿಯಾಗಿದೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ”ಹಿಂದೂಗಳು ಮತ್ತು ಕ್ರೈಸ್ತರು ಅಂತಿಮ ವಿಧಿವಿಧಾನಗಳಿಗೆ ಸಿದ್ಧರಾಗಬೇಕು” ಇದನ್ನು ಮಾಡಲು ಮಗುವನ್ನು ಹುಟ್ಟಿಸಬೇಕು ಎಂದು ಹೇಳುತ್ತಾರೆ. ಇದು ನಾಚಿಕೆಪಡುವ ವಿಚಾರ” ಎಂದು ಮೆಹ್ತಾ ಹೇಳಿದರು.

ನಂತರ ಪಾಷಾ ಮಧ್ಯಪ್ರವೇಶಿಸಿ. ಒಂದೇ ಕಡೆ ವಾಲುವುದು ಸೂಕ್ತವಲ್ಲ ಎಂದು, ಸಾಲಿಸಿಟರ್ ಜನರಲ್‌ಗೆ ಹೇಳಿದರು.

ನ್ಯಾಯಾಲಯವು ದ್ವೇಷ ಭಾಷಣ ನಿದರ್ಶನಗಳ ವಿರುದ್ಧ ತ್ವರಿತ ಕ್ರಮವನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ರಾಜ್ಯ ದುರ್ಬಲವಾಗಿದೆ, ಶಕ್ತಿಹೀನವಾಗಿದೆ. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಈ ರೀತಿ ದ್ವೇಷ ಭಾಷಣದ ವಿರುದ್ಧ ಮೌನವಾಗಿದ್ದರೆ ನಮಗೆ ರಾಜ್ಯ ಏಕೆ?” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...