Homeಮುಖಪುಟಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

- Advertisement -
- Advertisement -

ರಾಜಕಾರಣಿಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ನಿಲ್ಲತ್ತವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

”ರಾಜಕಾರಣಿಗಳು ಧರ್ಮದೊಂದಿಗೆ ರಾಜಕೀಯವನ್ನು ಬೆರೆಸಿದಾಗ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ ದ್ವೇಷಭಾಷಣಗಳು ಕೊನೆಯಾಗುತ್ತವೆ. ನಮ್ಮ ಇತ್ತೀಚಿನ ತೀರ್ಪಿನಲ್ಲೂ ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ”ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ದ್ವೇಷದ ಮಾತುಗಳನ್ನು ಬಿಡುವುದು ಅತ್ಯಗತ್ಯವಾಗಿದೆ” ಎಂದು ನ್ಯಾಯಾಲಯ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ ಅವರು, ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ ನಾಲ್ಕು ತಿಂಗಳಲ್ಲಿ 50 ರ್ಯಾಲಿಗಳು ನಡೆದಿವೆ. ಈ ರ್ಯಾಲಿಗಳಲ್ಲಿ ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ನಂತಹ ವಿಚಾರಗಳನ್ನು ಮಾತನಾಡಿ ಮುಸ್ಲಿಂ ಸಮುದಾಯದ ವಿರುದ್ದ ಪಿತೂರಿ ಮಾಡಲು ಚರ್ಚಿಸಲಾಗಿದೆ ಎಂದು ಹೇಳಿದರು.

ಆ ಎಲ್ಲಾ ರ್ಯಾಲಿಗಳಲ್ಲಿ, ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಸಮುದಾಯದ ಬಗ್ಗೆ ಪಿತೂರಿ ಸಿದ್ಧಾಂತಗಳನ್ನು ತೇಲಿ ಬಿಡಲಾಗುತ್ತಿದೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ರ್ಯಾಲಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಪಾಷಾ ಅವರು ಬುಧವಾರದ ವಿಚಾರಣೆಯಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಅದನ್ನು ಪರಿಗಣಿಸಿದೆ.

ಈ ನ್ಯಾಯಾಂಗ ನಿಂದನೆ ಅರ್ಜಿಯು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅಲ್ಲ. ದ್ವೇಷ ಭಾಷಣವನ್ನು ನಿಗ್ರಹಿಸುವುದು ಮುಖ್ಯವಾಗಿದೆ ಎಂದು ಹೇಳಿದ ಪಾಷಾ ಅವರು, ”ಹತ್ಯಾಕಾಂಡವು ಗ್ಯಾಸ್ ಚೇಂಬರ್‌ಗಳಿಂದ ಪ್ರಾರಂಭವಾಗಲಿಲ್ಲ ಅದು ದ್ವೇಷ ಭಾಷಣದಿಂದ ಪ್ರಾರಂಭವಾಯಿತು” ಎಂದು ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅಡಮಾ ಡಿಯೆಂಗ್ ಅವರು ಹೇಳಿಕೆಯನ್ನು ಉಲ್ಲೇಖಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನೀವು ನಿಮಗೆ ಬೇಕಾದ ಕೆಲವು ಘಟನೆಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಮಾತನಾಡುತ್ತಿದ್ದೀರಿ ಎಂದರು.

”ಅರ್ಜಿದಾರರಿಗೆ ದ್ವೇಷ ಭಾಷಣದ ಬಗ್ಗೆ ಕಾಳಜಿ ಇದ್ದರೆ, ಅವರು ಕೇರಳ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಮಾಡಿದ ದ್ವೇಷಪೂರಿತ ಮಾತುಗಳ ಬಗ್ಗೆ ಚರ್ಚಿಸಲಿ, ಅಂತಹ ಎಲ್ಲಾ ನಿದರ್ಶನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೆಹ್ತಾ ಹೇಳಿದರೆಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಿಮ್ಮ ಈ ಅರ್ಜಿಗೆ ಸೇರಿಸಬೇಕಾದ ಕೆಲವು ಹೇಳಿಕೆಗಳನ್ನು ನಾವು ಸಹ ಸೇರಿಸಬೇಕಿದೆ. ”ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ನಾಯಕರು ನಿಮಗೆ ಸಮಾನತೆ ಬೇಕಾದರೆ ಎಲ್ಲಾ ಬ್ರಾಹ್ಮಣರನ್ನು ಕಡಿಯಬೇಕು ಎಂದು ಹೇಳುತ್ತಾರೆ….” ದಯವಿಟ್ಟು ಕೇರಳದ ಈ ಕ್ಲಿಪ್ ಅನ್ನು ಕೇಳಿ, ಇದು ಆಘಾತಕಾರಿಯಾಗಿದೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ”ಹಿಂದೂಗಳು ಮತ್ತು ಕ್ರೈಸ್ತರು ಅಂತಿಮ ವಿಧಿವಿಧಾನಗಳಿಗೆ ಸಿದ್ಧರಾಗಬೇಕು” ಇದನ್ನು ಮಾಡಲು ಮಗುವನ್ನು ಹುಟ್ಟಿಸಬೇಕು ಎಂದು ಹೇಳುತ್ತಾರೆ. ಇದು ನಾಚಿಕೆಪಡುವ ವಿಚಾರ” ಎಂದು ಮೆಹ್ತಾ ಹೇಳಿದರು.

ನಂತರ ಪಾಷಾ ಮಧ್ಯಪ್ರವೇಶಿಸಿ. ಒಂದೇ ಕಡೆ ವಾಲುವುದು ಸೂಕ್ತವಲ್ಲ ಎಂದು, ಸಾಲಿಸಿಟರ್ ಜನರಲ್‌ಗೆ ಹೇಳಿದರು.

ನ್ಯಾಯಾಲಯವು ದ್ವೇಷ ಭಾಷಣ ನಿದರ್ಶನಗಳ ವಿರುದ್ಧ ತ್ವರಿತ ಕ್ರಮವನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ರಾಜ್ಯ ದುರ್ಬಲವಾಗಿದೆ, ಶಕ್ತಿಹೀನವಾಗಿದೆ. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಈ ರೀತಿ ದ್ವೇಷ ಭಾಷಣದ ವಿರುದ್ಧ ಮೌನವಾಗಿದ್ದರೆ ನಮಗೆ ರಾಜ್ಯ ಏಕೆ?” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...