Homeಮುಖಪುಟಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

- Advertisement -
- Advertisement -

ರಾಜಕಾರಣಿಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ನಿಲ್ಲತ್ತವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

”ರಾಜಕಾರಣಿಗಳು ಧರ್ಮದೊಂದಿಗೆ ರಾಜಕೀಯವನ್ನು ಬೆರೆಸಿದಾಗ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ ದ್ವೇಷಭಾಷಣಗಳು ಕೊನೆಯಾಗುತ್ತವೆ. ನಮ್ಮ ಇತ್ತೀಚಿನ ತೀರ್ಪಿನಲ್ಲೂ ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ”ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ದ್ವೇಷದ ಮಾತುಗಳನ್ನು ಬಿಡುವುದು ಅತ್ಯಗತ್ಯವಾಗಿದೆ” ಎಂದು ನ್ಯಾಯಾಲಯ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ ಅವರು, ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ ನಾಲ್ಕು ತಿಂಗಳಲ್ಲಿ 50 ರ್ಯಾಲಿಗಳು ನಡೆದಿವೆ. ಈ ರ್ಯಾಲಿಗಳಲ್ಲಿ ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ನಂತಹ ವಿಚಾರಗಳನ್ನು ಮಾತನಾಡಿ ಮುಸ್ಲಿಂ ಸಮುದಾಯದ ವಿರುದ್ದ ಪಿತೂರಿ ಮಾಡಲು ಚರ್ಚಿಸಲಾಗಿದೆ ಎಂದು ಹೇಳಿದರು.

ಆ ಎಲ್ಲಾ ರ್ಯಾಲಿಗಳಲ್ಲಿ, ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಸಮುದಾಯದ ಬಗ್ಗೆ ಪಿತೂರಿ ಸಿದ್ಧಾಂತಗಳನ್ನು ತೇಲಿ ಬಿಡಲಾಗುತ್ತಿದೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ರ್ಯಾಲಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಪಾಷಾ ಅವರು ಬುಧವಾರದ ವಿಚಾರಣೆಯಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಅದನ್ನು ಪರಿಗಣಿಸಿದೆ.

ಈ ನ್ಯಾಯಾಂಗ ನಿಂದನೆ ಅರ್ಜಿಯು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅಲ್ಲ. ದ್ವೇಷ ಭಾಷಣವನ್ನು ನಿಗ್ರಹಿಸುವುದು ಮುಖ್ಯವಾಗಿದೆ ಎಂದು ಹೇಳಿದ ಪಾಷಾ ಅವರು, ”ಹತ್ಯಾಕಾಂಡವು ಗ್ಯಾಸ್ ಚೇಂಬರ್‌ಗಳಿಂದ ಪ್ರಾರಂಭವಾಗಲಿಲ್ಲ ಅದು ದ್ವೇಷ ಭಾಷಣದಿಂದ ಪ್ರಾರಂಭವಾಯಿತು” ಎಂದು ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅಡಮಾ ಡಿಯೆಂಗ್ ಅವರು ಹೇಳಿಕೆಯನ್ನು ಉಲ್ಲೇಖಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನೀವು ನಿಮಗೆ ಬೇಕಾದ ಕೆಲವು ಘಟನೆಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಮಾತನಾಡುತ್ತಿದ್ದೀರಿ ಎಂದರು.

”ಅರ್ಜಿದಾರರಿಗೆ ದ್ವೇಷ ಭಾಷಣದ ಬಗ್ಗೆ ಕಾಳಜಿ ಇದ್ದರೆ, ಅವರು ಕೇರಳ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಮಾಡಿದ ದ್ವೇಷಪೂರಿತ ಮಾತುಗಳ ಬಗ್ಗೆ ಚರ್ಚಿಸಲಿ, ಅಂತಹ ಎಲ್ಲಾ ನಿದರ್ಶನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೆಹ್ತಾ ಹೇಳಿದರೆಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಿಮ್ಮ ಈ ಅರ್ಜಿಗೆ ಸೇರಿಸಬೇಕಾದ ಕೆಲವು ಹೇಳಿಕೆಗಳನ್ನು ನಾವು ಸಹ ಸೇರಿಸಬೇಕಿದೆ. ”ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ನಾಯಕರು ನಿಮಗೆ ಸಮಾನತೆ ಬೇಕಾದರೆ ಎಲ್ಲಾ ಬ್ರಾಹ್ಮಣರನ್ನು ಕಡಿಯಬೇಕು ಎಂದು ಹೇಳುತ್ತಾರೆ….” ದಯವಿಟ್ಟು ಕೇರಳದ ಈ ಕ್ಲಿಪ್ ಅನ್ನು ಕೇಳಿ, ಇದು ಆಘಾತಕಾರಿಯಾಗಿದೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ”ಹಿಂದೂಗಳು ಮತ್ತು ಕ್ರೈಸ್ತರು ಅಂತಿಮ ವಿಧಿವಿಧಾನಗಳಿಗೆ ಸಿದ್ಧರಾಗಬೇಕು” ಇದನ್ನು ಮಾಡಲು ಮಗುವನ್ನು ಹುಟ್ಟಿಸಬೇಕು ಎಂದು ಹೇಳುತ್ತಾರೆ. ಇದು ನಾಚಿಕೆಪಡುವ ವಿಚಾರ” ಎಂದು ಮೆಹ್ತಾ ಹೇಳಿದರು.

ನಂತರ ಪಾಷಾ ಮಧ್ಯಪ್ರವೇಶಿಸಿ. ಒಂದೇ ಕಡೆ ವಾಲುವುದು ಸೂಕ್ತವಲ್ಲ ಎಂದು, ಸಾಲಿಸಿಟರ್ ಜನರಲ್‌ಗೆ ಹೇಳಿದರು.

ನ್ಯಾಯಾಲಯವು ದ್ವೇಷ ಭಾಷಣ ನಿದರ್ಶನಗಳ ವಿರುದ್ಧ ತ್ವರಿತ ಕ್ರಮವನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ರಾಜ್ಯ ದುರ್ಬಲವಾಗಿದೆ, ಶಕ್ತಿಹೀನವಾಗಿದೆ. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಈ ರೀತಿ ದ್ವೇಷ ಭಾಷಣದ ವಿರುದ್ಧ ಮೌನವಾಗಿದ್ದರೆ ನಮಗೆ ರಾಜ್ಯ ಏಕೆ?” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...