Homeಚಳವಳಿಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ...

ಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ

- Advertisement -
- Advertisement -

“ಆತ್ಮೀಯ ಪ್ರಧಾನಿಯವರೆ… ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಗುಂಪು ಹಲ್ಲೆ/ಹತ್ಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಎನ್‌ಸಿಆರ್‌ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿಗಳಿಂದ ತಿಳಿದು ನಾವು ಆಘಾತಕ್ಕೊಳಗಾಗಿದ್ದೇವೆ. 2016ರ ವರ್ಷವೊಂದರಲ್ಲೇ ದಲಿತರ ವಿರುದ್ಧ 840 ಕ್ಕಿಂತಲೂ ಹೆಚ್ಚು ದೌರ್ಜನ್ಯಗಳು ನಡೆದಿವೆ ಮತ್ತು ಅದೇ ಸಂದರ್ಭದಲ್ಲಿ  ಅಪರಾಧಗಳ ಆಗುತ್ತಿರುವ ಶೇಕಡಾವಾರು ಶಿಕ್ಷೆಯ ಪ್ರಮಾಣವು ಕುಸಿಯುತ್ತಿದೆ`”ಎಂದು ನಟ ಅಪರ್ಣ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಇತರರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನಲವತ್ತೊಂಬತ್ತು ಪ್ರಖ್ಯಾತ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂತ ಪತ್ರ ಬರೆದಿದ್ದಾರೆ. ಇತ್ತೀಚೆಗೆ  ನಡೆಯುತ್ತಿರುವ ಹಲವಾರು ದುರಂತ ಘಟನೆಗಳ ಬಗ್ಗೆ ಗಮನ ಸೆಳೆದಿರುವ ಅವರು, “ಜೈ ಶ್ರೀ ರಾಮ್” ಎಂಬ ಘೋಷಣೆಯ ಮೂಲಕ ಗುಂಪು ಹಲ್ಲೆ/ಹತ್ಯೆಗಳಿಗೆ ಕುಮ್ಮಕ್ಕು ಕೊಡುವ ಒಂದು ರೀತಿಯ “ಯುದ್ಧದ ಕೂಗು” ಆಗಿದೆ ಎಂದು ಆರೋಪಿಸಿದ್ದಾರೆ.

” ಪ್ರಧಾನ ಮಂತ್ರಿಗಳು ಸಂಸತ್ತಿನಲ್ಲಿ ಇದನ್ನು ಟೀಕಿಸಿದ್ದೀರಿ, ಆದರೆ ಅದು ಸಾಕಾಗುವುದಿಲ್ಲ … ಅಂತಹ ಅಪರಾಧಗಳನ್ನು ಜಾಮೀನು ರಹಿತವೆಂದು ಘೋಷಿಸಬೇಕು ಎಂದು ನಾವು ಬಲವಾಗಿ ಭಾವಿಸುತ್ತೇವೆ …” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನಲ್ಲಿ 24 ವರ್ಷದ ಯುವಕನನ್ನು ಹತ್ಯೆಗೈದಿದ್ದನ್ನು ಪ್ರಧಾನಿ ಮೋದಿ ಜೂನ್‌ನಲ್ಲಿ ಸಂಸತ್ತಿನಲ್ಲಿ ಖಂಡಿಸಿದ್ದರು ಮತ್ತು ಅದು ಜಾರ್ಖಂಡ್ ಆಗಿರಲಿ, ಅಥವಾ ಪಶ್ಚಿಮ ಬಂಗಾಳವಾಗಲಿ, ಕೇರಳವಾಗಲಿ ಹಿಂಸಾಚಾರದ ಘಟನೆಗಳನ್ನು ಅದೇ ರೀತಿ ಪರಿಗಣಿಸಬೇಕು. ಇಡೀ ಜಾರ್ಖಂಡ್ ರಾಜ್ಯವನ್ನೇ ಗುಂಪು ಹತ್ಯೆಯ ರಾಜ್ಯವೆಂದು ಪರಿಗಣಿಸಬಾರದು ಎಂದಿದ್ದರು.

‘ಜೈ ಶ್ರೀ ರಾಮ್’ ಇಂದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ಪ್ರಚೋದನಕಾರಿ ‘ಯುದ್ಧ-ಕೂಗು’ ಆಗಿ ಮಾರ್ಪಟ್ಟಿದೆ, ಮತ್ತು ಅದರ ಹೆಸರಿನಲ್ಲಿ ಅನೇಕ ಗುಂಪು ಹತ್ಯೆಗಳು ನಡೆಯುತ್ತವೆ. ಧರ್ಮದ ಹೆಸರಿನಲ್ಲಿ ಇಷ್ಟು ಹಿಂಸಾಚಾರಗಳು ನಡೆಯುತ್ತಿರುವುದು ಆಘಾತಕಾರಿ! ಇವು ಮಧ್ಯಯುಗವಲ್ಲ! ಭಾರತದ ಬಹುಸಂಖ್ಯಾತ ಸಮುದಾಯದಲ್ಲಿ ರಾಮನ ಹೆಸರು ಅನೇಕರಿಗೆ ಪವಿತ್ರವಾಗಿದೆ. ಈ ದೇಶದ ಅತ್ಯುನ್ನತ ಕಾರ್ಯನಿರ್ವಾಹಕರಾಗಿ, ರಾಮ್ ಅವರ ಹೆಸರನ್ನು ಈ ರೀತಿ ಅಪವಿತ್ರಗೊಳಿಸುವುದನ್ನು ನೀವು ನಿಲ್ಲಿಸಬೇಕು “ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...