Homeಚಳವಳಿಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ...

ಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ

- Advertisement -
- Advertisement -

“ಆತ್ಮೀಯ ಪ್ರಧಾನಿಯವರೆ… ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಗುಂಪು ಹಲ್ಲೆ/ಹತ್ಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಎನ್‌ಸಿಆರ್‌ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿಗಳಿಂದ ತಿಳಿದು ನಾವು ಆಘಾತಕ್ಕೊಳಗಾಗಿದ್ದೇವೆ. 2016ರ ವರ್ಷವೊಂದರಲ್ಲೇ ದಲಿತರ ವಿರುದ್ಧ 840 ಕ್ಕಿಂತಲೂ ಹೆಚ್ಚು ದೌರ್ಜನ್ಯಗಳು ನಡೆದಿವೆ ಮತ್ತು ಅದೇ ಸಂದರ್ಭದಲ್ಲಿ  ಅಪರಾಧಗಳ ಆಗುತ್ತಿರುವ ಶೇಕಡಾವಾರು ಶಿಕ್ಷೆಯ ಪ್ರಮಾಣವು ಕುಸಿಯುತ್ತಿದೆ`”ಎಂದು ನಟ ಅಪರ್ಣ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಇತರರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನಲವತ್ತೊಂಬತ್ತು ಪ್ರಖ್ಯಾತ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂತ ಪತ್ರ ಬರೆದಿದ್ದಾರೆ. ಇತ್ತೀಚೆಗೆ  ನಡೆಯುತ್ತಿರುವ ಹಲವಾರು ದುರಂತ ಘಟನೆಗಳ ಬಗ್ಗೆ ಗಮನ ಸೆಳೆದಿರುವ ಅವರು, “ಜೈ ಶ್ರೀ ರಾಮ್” ಎಂಬ ಘೋಷಣೆಯ ಮೂಲಕ ಗುಂಪು ಹಲ್ಲೆ/ಹತ್ಯೆಗಳಿಗೆ ಕುಮ್ಮಕ್ಕು ಕೊಡುವ ಒಂದು ರೀತಿಯ “ಯುದ್ಧದ ಕೂಗು” ಆಗಿದೆ ಎಂದು ಆರೋಪಿಸಿದ್ದಾರೆ.

” ಪ್ರಧಾನ ಮಂತ್ರಿಗಳು ಸಂಸತ್ತಿನಲ್ಲಿ ಇದನ್ನು ಟೀಕಿಸಿದ್ದೀರಿ, ಆದರೆ ಅದು ಸಾಕಾಗುವುದಿಲ್ಲ … ಅಂತಹ ಅಪರಾಧಗಳನ್ನು ಜಾಮೀನು ರಹಿತವೆಂದು ಘೋಷಿಸಬೇಕು ಎಂದು ನಾವು ಬಲವಾಗಿ ಭಾವಿಸುತ್ತೇವೆ …” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನಲ್ಲಿ 24 ವರ್ಷದ ಯುವಕನನ್ನು ಹತ್ಯೆಗೈದಿದ್ದನ್ನು ಪ್ರಧಾನಿ ಮೋದಿ ಜೂನ್‌ನಲ್ಲಿ ಸಂಸತ್ತಿನಲ್ಲಿ ಖಂಡಿಸಿದ್ದರು ಮತ್ತು ಅದು ಜಾರ್ಖಂಡ್ ಆಗಿರಲಿ, ಅಥವಾ ಪಶ್ಚಿಮ ಬಂಗಾಳವಾಗಲಿ, ಕೇರಳವಾಗಲಿ ಹಿಂಸಾಚಾರದ ಘಟನೆಗಳನ್ನು ಅದೇ ರೀತಿ ಪರಿಗಣಿಸಬೇಕು. ಇಡೀ ಜಾರ್ಖಂಡ್ ರಾಜ್ಯವನ್ನೇ ಗುಂಪು ಹತ್ಯೆಯ ರಾಜ್ಯವೆಂದು ಪರಿಗಣಿಸಬಾರದು ಎಂದಿದ್ದರು.

‘ಜೈ ಶ್ರೀ ರಾಮ್’ ಇಂದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ಪ್ರಚೋದನಕಾರಿ ‘ಯುದ್ಧ-ಕೂಗು’ ಆಗಿ ಮಾರ್ಪಟ್ಟಿದೆ, ಮತ್ತು ಅದರ ಹೆಸರಿನಲ್ಲಿ ಅನೇಕ ಗುಂಪು ಹತ್ಯೆಗಳು ನಡೆಯುತ್ತವೆ. ಧರ್ಮದ ಹೆಸರಿನಲ್ಲಿ ಇಷ್ಟು ಹಿಂಸಾಚಾರಗಳು ನಡೆಯುತ್ತಿರುವುದು ಆಘಾತಕಾರಿ! ಇವು ಮಧ್ಯಯುಗವಲ್ಲ! ಭಾರತದ ಬಹುಸಂಖ್ಯಾತ ಸಮುದಾಯದಲ್ಲಿ ರಾಮನ ಹೆಸರು ಅನೇಕರಿಗೆ ಪವಿತ್ರವಾಗಿದೆ. ಈ ದೇಶದ ಅತ್ಯುನ್ನತ ಕಾರ್ಯನಿರ್ವಾಹಕರಾಗಿ, ರಾಮ್ ಅವರ ಹೆಸರನ್ನು ಈ ರೀತಿ ಅಪವಿತ್ರಗೊಳಿಸುವುದನ್ನು ನೀವು ನಿಲ್ಲಿಸಬೇಕು “ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...