Homeಚಳವಳಿಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ...

ಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ

- Advertisement -
- Advertisement -

“ಆತ್ಮೀಯ ಪ್ರಧಾನಿಯವರೆ… ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಗುಂಪು ಹಲ್ಲೆ/ಹತ್ಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಎನ್‌ಸಿಆರ್‌ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿಗಳಿಂದ ತಿಳಿದು ನಾವು ಆಘಾತಕ್ಕೊಳಗಾಗಿದ್ದೇವೆ. 2016ರ ವರ್ಷವೊಂದರಲ್ಲೇ ದಲಿತರ ವಿರುದ್ಧ 840 ಕ್ಕಿಂತಲೂ ಹೆಚ್ಚು ದೌರ್ಜನ್ಯಗಳು ನಡೆದಿವೆ ಮತ್ತು ಅದೇ ಸಂದರ್ಭದಲ್ಲಿ  ಅಪರಾಧಗಳ ಆಗುತ್ತಿರುವ ಶೇಕಡಾವಾರು ಶಿಕ್ಷೆಯ ಪ್ರಮಾಣವು ಕುಸಿಯುತ್ತಿದೆ`”ಎಂದು ನಟ ಅಪರ್ಣ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಇತರರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನಲವತ್ತೊಂಬತ್ತು ಪ್ರಖ್ಯಾತ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂತ ಪತ್ರ ಬರೆದಿದ್ದಾರೆ. ಇತ್ತೀಚೆಗೆ  ನಡೆಯುತ್ತಿರುವ ಹಲವಾರು ದುರಂತ ಘಟನೆಗಳ ಬಗ್ಗೆ ಗಮನ ಸೆಳೆದಿರುವ ಅವರು, “ಜೈ ಶ್ರೀ ರಾಮ್” ಎಂಬ ಘೋಷಣೆಯ ಮೂಲಕ ಗುಂಪು ಹಲ್ಲೆ/ಹತ್ಯೆಗಳಿಗೆ ಕುಮ್ಮಕ್ಕು ಕೊಡುವ ಒಂದು ರೀತಿಯ “ಯುದ್ಧದ ಕೂಗು” ಆಗಿದೆ ಎಂದು ಆರೋಪಿಸಿದ್ದಾರೆ.

” ಪ್ರಧಾನ ಮಂತ್ರಿಗಳು ಸಂಸತ್ತಿನಲ್ಲಿ ಇದನ್ನು ಟೀಕಿಸಿದ್ದೀರಿ, ಆದರೆ ಅದು ಸಾಕಾಗುವುದಿಲ್ಲ … ಅಂತಹ ಅಪರಾಧಗಳನ್ನು ಜಾಮೀನು ರಹಿತವೆಂದು ಘೋಷಿಸಬೇಕು ಎಂದು ನಾವು ಬಲವಾಗಿ ಭಾವಿಸುತ್ತೇವೆ …” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನಲ್ಲಿ 24 ವರ್ಷದ ಯುವಕನನ್ನು ಹತ್ಯೆಗೈದಿದ್ದನ್ನು ಪ್ರಧಾನಿ ಮೋದಿ ಜೂನ್‌ನಲ್ಲಿ ಸಂಸತ್ತಿನಲ್ಲಿ ಖಂಡಿಸಿದ್ದರು ಮತ್ತು ಅದು ಜಾರ್ಖಂಡ್ ಆಗಿರಲಿ, ಅಥವಾ ಪಶ್ಚಿಮ ಬಂಗಾಳವಾಗಲಿ, ಕೇರಳವಾಗಲಿ ಹಿಂಸಾಚಾರದ ಘಟನೆಗಳನ್ನು ಅದೇ ರೀತಿ ಪರಿಗಣಿಸಬೇಕು. ಇಡೀ ಜಾರ್ಖಂಡ್ ರಾಜ್ಯವನ್ನೇ ಗುಂಪು ಹತ್ಯೆಯ ರಾಜ್ಯವೆಂದು ಪರಿಗಣಿಸಬಾರದು ಎಂದಿದ್ದರು.

‘ಜೈ ಶ್ರೀ ರಾಮ್’ ಇಂದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ಪ್ರಚೋದನಕಾರಿ ‘ಯುದ್ಧ-ಕೂಗು’ ಆಗಿ ಮಾರ್ಪಟ್ಟಿದೆ, ಮತ್ತು ಅದರ ಹೆಸರಿನಲ್ಲಿ ಅನೇಕ ಗುಂಪು ಹತ್ಯೆಗಳು ನಡೆಯುತ್ತವೆ. ಧರ್ಮದ ಹೆಸರಿನಲ್ಲಿ ಇಷ್ಟು ಹಿಂಸಾಚಾರಗಳು ನಡೆಯುತ್ತಿರುವುದು ಆಘಾತಕಾರಿ! ಇವು ಮಧ್ಯಯುಗವಲ್ಲ! ಭಾರತದ ಬಹುಸಂಖ್ಯಾತ ಸಮುದಾಯದಲ್ಲಿ ರಾಮನ ಹೆಸರು ಅನೇಕರಿಗೆ ಪವಿತ್ರವಾಗಿದೆ. ಈ ದೇಶದ ಅತ್ಯುನ್ನತ ಕಾರ್ಯನಿರ್ವಾಹಕರಾಗಿ, ರಾಮ್ ಅವರ ಹೆಸರನ್ನು ಈ ರೀತಿ ಅಪವಿತ್ರಗೊಳಿಸುವುದನ್ನು ನೀವು ನಿಲ್ಲಿಸಬೇಕು “ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...