Homeಚಳವಳಿಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ...

ಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ

- Advertisement -
- Advertisement -

“ಆತ್ಮೀಯ ಪ್ರಧಾನಿಯವರೆ… ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಗುಂಪು ಹಲ್ಲೆ/ಹತ್ಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಎನ್‌ಸಿಆರ್‌ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿಗಳಿಂದ ತಿಳಿದು ನಾವು ಆಘಾತಕ್ಕೊಳಗಾಗಿದ್ದೇವೆ. 2016ರ ವರ್ಷವೊಂದರಲ್ಲೇ ದಲಿತರ ವಿರುದ್ಧ 840 ಕ್ಕಿಂತಲೂ ಹೆಚ್ಚು ದೌರ್ಜನ್ಯಗಳು ನಡೆದಿವೆ ಮತ್ತು ಅದೇ ಸಂದರ್ಭದಲ್ಲಿ  ಅಪರಾಧಗಳ ಆಗುತ್ತಿರುವ ಶೇಕಡಾವಾರು ಶಿಕ್ಷೆಯ ಪ್ರಮಾಣವು ಕುಸಿಯುತ್ತಿದೆ`”ಎಂದು ನಟ ಅಪರ್ಣ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಇತರರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನಲವತ್ತೊಂಬತ್ತು ಪ್ರಖ್ಯಾತ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂತ ಪತ್ರ ಬರೆದಿದ್ದಾರೆ. ಇತ್ತೀಚೆಗೆ  ನಡೆಯುತ್ತಿರುವ ಹಲವಾರು ದುರಂತ ಘಟನೆಗಳ ಬಗ್ಗೆ ಗಮನ ಸೆಳೆದಿರುವ ಅವರು, “ಜೈ ಶ್ರೀ ರಾಮ್” ಎಂಬ ಘೋಷಣೆಯ ಮೂಲಕ ಗುಂಪು ಹಲ್ಲೆ/ಹತ್ಯೆಗಳಿಗೆ ಕುಮ್ಮಕ್ಕು ಕೊಡುವ ಒಂದು ರೀತಿಯ “ಯುದ್ಧದ ಕೂಗು” ಆಗಿದೆ ಎಂದು ಆರೋಪಿಸಿದ್ದಾರೆ.

” ಪ್ರಧಾನ ಮಂತ್ರಿಗಳು ಸಂಸತ್ತಿನಲ್ಲಿ ಇದನ್ನು ಟೀಕಿಸಿದ್ದೀರಿ, ಆದರೆ ಅದು ಸಾಕಾಗುವುದಿಲ್ಲ … ಅಂತಹ ಅಪರಾಧಗಳನ್ನು ಜಾಮೀನು ರಹಿತವೆಂದು ಘೋಷಿಸಬೇಕು ಎಂದು ನಾವು ಬಲವಾಗಿ ಭಾವಿಸುತ್ತೇವೆ …” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನಲ್ಲಿ 24 ವರ್ಷದ ಯುವಕನನ್ನು ಹತ್ಯೆಗೈದಿದ್ದನ್ನು ಪ್ರಧಾನಿ ಮೋದಿ ಜೂನ್‌ನಲ್ಲಿ ಸಂಸತ್ತಿನಲ್ಲಿ ಖಂಡಿಸಿದ್ದರು ಮತ್ತು ಅದು ಜಾರ್ಖಂಡ್ ಆಗಿರಲಿ, ಅಥವಾ ಪಶ್ಚಿಮ ಬಂಗಾಳವಾಗಲಿ, ಕೇರಳವಾಗಲಿ ಹಿಂಸಾಚಾರದ ಘಟನೆಗಳನ್ನು ಅದೇ ರೀತಿ ಪರಿಗಣಿಸಬೇಕು. ಇಡೀ ಜಾರ್ಖಂಡ್ ರಾಜ್ಯವನ್ನೇ ಗುಂಪು ಹತ್ಯೆಯ ರಾಜ್ಯವೆಂದು ಪರಿಗಣಿಸಬಾರದು ಎಂದಿದ್ದರು.

‘ಜೈ ಶ್ರೀ ರಾಮ್’ ಇಂದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ಪ್ರಚೋದನಕಾರಿ ‘ಯುದ್ಧ-ಕೂಗು’ ಆಗಿ ಮಾರ್ಪಟ್ಟಿದೆ, ಮತ್ತು ಅದರ ಹೆಸರಿನಲ್ಲಿ ಅನೇಕ ಗುಂಪು ಹತ್ಯೆಗಳು ನಡೆಯುತ್ತವೆ. ಧರ್ಮದ ಹೆಸರಿನಲ್ಲಿ ಇಷ್ಟು ಹಿಂಸಾಚಾರಗಳು ನಡೆಯುತ್ತಿರುವುದು ಆಘಾತಕಾರಿ! ಇವು ಮಧ್ಯಯುಗವಲ್ಲ! ಭಾರತದ ಬಹುಸಂಖ್ಯಾತ ಸಮುದಾಯದಲ್ಲಿ ರಾಮನ ಹೆಸರು ಅನೇಕರಿಗೆ ಪವಿತ್ರವಾಗಿದೆ. ಈ ದೇಶದ ಅತ್ಯುನ್ನತ ಕಾರ್ಯನಿರ್ವಾಹಕರಾಗಿ, ರಾಮ್ ಅವರ ಹೆಸರನ್ನು ಈ ರೀತಿ ಅಪವಿತ್ರಗೊಳಿಸುವುದನ್ನು ನೀವು ನಿಲ್ಲಿಸಬೇಕು “ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...