Homeಚಳವಳಿಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ, ಬೆಂಗಳೂರು ಮತ್ತು ದೆಹಲಿಯ ನಾಗರಿಕ ಸಮಾಜ ಗುಂಪುಗಳು ಮತ್ತು ವ್ಯಕ್ತಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸಿದ ದಾಳಿಯನ್ನು ಖಂಡಿಸಿ ಸಿಪಿಐಎಂಎಲ್ ಕೇಂದ್ರ ಸಮಿತಿ (CPIML) ಬಹಿರಂಗ ಪತ್ರ ಬರೆದಿದೆ.

ಈ ದಾಳಿಗಳನ್ನು “ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ” ನಿಗ್ರಹಿಸುವುದಾಗಿ ಎಂದು ಎನ್ಐಎ ಹೇಳಿಕೊಂಡಿದೆ. ಆದರೆ ಇದು ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳು ಮತ್ತು ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸುವ, ಎಲ್ಲರನ್ನು ಕಿರುಕುಳ ನೀಡಿ ಮೌನಗೊಳಿಸಲು ಮಾಡುತ್ತಿರುವ ತಂತ್ರ ಎಂಬುದು ತಿಳಿಯುತ್ತಿದೆ ಎಂದಿದೆ.

ಮಾನವ ಹಕ್ಕುಗಳ ರಕ್ಷಕರು, ಮಾನವೀಯ ಗುಂಪುಗಳು, ಪತ್ರಕರ್ತರು ಮತ್ತು ನಾಗರಿಕರನ್ನು ಮೌನವಾಗಿಸಲು ಎನ್ಐಎಯನ್ನು ಬಳಸುವ ಮೂಲಕ, ಮೋದಿ ಆಡಳಿತವು ಜಮ್ಮು ಕಾಶ್ಮೀರ ಜನರ ವಿರುದ್ಧದ ಯಾವುದೇ ಸಾಕ್ಷಿಗಳಿಲ್ಲದೆ ಅಪರಾಧ ಹೊರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್ಐಎ ಗುರಿಯಿಟ್ಟಿರುವ ಗುಂಪುಗಳು ಮತ್ತು ವ್ಯಕ್ತಿಗಳು ಮಾನವ ಹಕ್ಕುಗಳು ಮತ್ತು ಮಾನವೀಯ ಕಾರ್ಯಗಳ ಸುದೀರ್ಘ ಮತ್ತು ಪ್ರಭಾವಶಾಲಿ ಕೆಲಸಗಳನ್ನು ಮಾಡಿದ್ದಾರೆ. ಉದಾಹರಣೆಗೆ ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿ (ಜೆಕೆಸಿಸಿಎಸ್) ನಕಲಿ ಎನ್‌ಕೌಂಟರ್‌ಗಳು, ಲಾಕಪ್ ಡೆತ್, ಲೈಂಗಿಕ ದೌರ್ಜನ್ಯ ಮತ್ತು ಜೆ & ಕೆ ಮಕ್ಕಳ ಮೇಲಿನ ದೌರ್ಜನ್ಯದ ಪರಿಣಾಮಗಳ ಕುರಿತು ಸುದೀರ್ಘ ವರದಿಗಳನ್ನು ದಾಖಲಿಸಿದೆ ಎಂದು CPIML ಹೇಳಿದೆ.

ಇದನ್ನೂ ಓದಿ: ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್ಐಎ ದಾಳಿಯ ಮತ್ತೊಂದು ಗುರಿ ದೆಹಲಿಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಮತ್ತು ಚಾರಿಟಿ ಅಲೈಯನ್ಸ್ ಎಂಬ ಎನ್‌ಜಿಒ ನಡೆಸುತ್ತಿರುವ ಮಿಲ್ಲಿ ಗೆಜೆಟ್ ಪತ್ರಿಕೆಯ ಸ್ಥಾಪಕ ಸಂಪಾದಕ ಜಫರುಲ್ ಇಸ್ಲಾಂ ಖಾನ್.  ಖಾನ್ ನೇತೃತ್ವದಲ್ಲಿ, ದೆಹಲಿ ಅಲ್ಪಸಂಖ್ಯಾತ ಆಯೋಗವು ಫೆಬ್ರವರಿ 2020 ರ ದೆಹಲಿ ಹಿಂಸಾಚಾರದ ಬಗ್ಗೆ ಭೀಕರವಾದ ವರದಿಯನ್ನು ಪ್ರಕಟಿಸಿತ್ತು. ಮುಸ್ಲಿಮರ ವಿರುದ್ಧದ ಉದ್ದೇಶಿತ ಹಿಂಸಾಚಾರದಲ್ಲಿ ದೆಹಲಿ ಪೊಲೀಸರು ಭಾಗಿಯಾಗಿರುವುದಕ್ಕೆ ಪುರಾವೆಗಳನ್ನು ದಾಖಲಿಸಿದ್ದಾರೆ. ದೆಹಲಿ ಹಿಂಸಾಚಾರಕ್ಕೆ ಒಳಗಾದವರಿಗೆ ಚಾರಿಟಿ ಅಲೈಯನ್ಸ್ ಪರಿಹಾರ ನೀಡಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಗ್ರೇಟರ್ ಕಾಶ್ಮೀರ ಪತ್ರಿಕೆಯ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಈ ಪತ್ರಿಕೆ ಯಾವುದೇ ಕೆಟ್ಟ ವರದಿಗಳು ಪ್ರಕಟವಾಗಿಲ್ಲ ಮತ್ತು ಧೈರ್ಯಶಾಲಿ ಪತ್ರಿಕೋದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂತಹ ಪತ್ರಿಕೆಯ ಮೇಲೂ ಮೋದಿ ಸರ್ಕಾರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ ನಗರದಲ್ಲಿ ಮತ್ತು ಭಾರತದ ಇತರ ಭಾಗಗಳಲ್ಲಿ ನಿರಂತರವಾಗಿ ಮಾನವ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತಾ, ದನಿ ಎತ್ತಿರುವ ಸ್ವಾತಿ ಶೇಷಾದ್ರಿಯವರ ಮನೆಯ ಮೇಲೆ ಬೆಂಗಳೂರಿನಲ್ಲಿಯೂ ಎನ್ಐಎ ದಾಳಿ ನಡೆಸಿದೆ. ಲಾಕ್ ಡೌನ್ ಸಮಯದಲ್ಲಿ, ಸ್ವಾತಿ ಶೇಷಾದ್ರಿ “ವಲಸಿಗರೊಂದಿಗೆ ಬೆಂಗಳೂರು” ಎಂಬ ಅಭಿಯಾನದ ಭಾಗವಾಗಿ ಕೆಲಸ ಮಾಡಿದರು, ಆಹಾರ, ಆಶ್ರಯವಿಲ್ಲದೆ ಬೆಂಗಳೂರಿನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಪರಿಹಾರ ನೀಡಲು ಸಹಾಯ ಮಾಡಿದರು ಇಂತವರ ವಿರುದ್ಧವು ಸಂಚು ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಮೋದಿ ಆಡಳಿತದಲ್ಲಿ ಎನ್ಐಎ, ಇತರ ಅನೇಕ ಸಂಸ್ಥೆಗಳಂತೆ, “ಪಂಜರದ ಗಿಳಿ” ಆಗಿ ಮಾರ್ಪಟ್ಟಿದೆ. ಈಗ ಜಮ್ಮು ಕಾಶ್ಮೀರ ವಿಷಯವನ್ನಿಟ್ಟುಕೊಂಡು ಮಾನವ ಹಕ್ಕುಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ.  ಬಾಂಬ್ ಸ್ಫೋಟದ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸಿದ ಎನ್‌ಐಎ, ಜೆ & ಕೆ ಪೊಲೀಸ್ ಅಧಿಕಾರಿ ದಾವಿಂದರ್ ಸಿಂಗ್ ಅವರಿಗೆ ಜಾಮೀನು ದೊರೆಯುವಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ.

ತೂತುಕುಡಿಯಲ್ಲಿ ಜಯರಾಜ್ ಮತ್ತು ಬೆನ್ನಿಕ್ಸ್‌ರನ್ನು ತಮಿಳುನಾಡು ಪೊಲೀಸರು ಹತ್ಯೆಗೈದಿದ್ದು, ಭಾರತದ ಅತಿರೇಕದ ಹಿಂಸೆ ಮತ್ತು ಲಾಕಪ್ ಡೆತ್‌ಗಳ ಮೇಲೆ ಈ ಎನ್‌ಜಿಒಗಳು ಬೆಳಕು ಚೆಲ್ಲಿವೆ. ತೀರಾ ಇತ್ತೀಚೆಗೆ, ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಭಕ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ. ಇವೆಲ್ಲಾ ಪೊಲೀಸರು ಜನಸಾಮಾನ್ಯರ ಮೇಲೆ ಮಾಡುವ ದೌರ್ಜನ್ಯ. ಇವರುಗಳ ವಿರುದ್ಧ ಹೊರಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ. ಭಾರತದ ಪ್ರಜೆಗಳಾದ ನಾವು ನಮ್ಮ ಹಕ್ಕುಗಳ ರಕ್ಷಣೆ, ಸ್ವಾತಂತ್ರ್ಯಕ್ಕಾಗಿ ನಮ್ಮ ಪರ ಹೋರಾಟ ನಡೆಸಲು ಪ್ರಯತ್ನಿಸುವವರ ಪರ ನಿಲ್ಲಬೇಕು” ಎಂದು ಪತ್ರದಲ್ಲಿ ಬರೆಯಲಾಗಿದೆ.


ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...