Homeಚಳವಳಿಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ, ಬೆಂಗಳೂರು ಮತ್ತು ದೆಹಲಿಯ ನಾಗರಿಕ ಸಮಾಜ ಗುಂಪುಗಳು ಮತ್ತು ವ್ಯಕ್ತಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸಿದ ದಾಳಿಯನ್ನು ಖಂಡಿಸಿ ಸಿಪಿಐಎಂಎಲ್ ಕೇಂದ್ರ ಸಮಿತಿ (CPIML) ಬಹಿರಂಗ ಪತ್ರ ಬರೆದಿದೆ.

ಈ ದಾಳಿಗಳನ್ನು “ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ” ನಿಗ್ರಹಿಸುವುದಾಗಿ ಎಂದು ಎನ್ಐಎ ಹೇಳಿಕೊಂಡಿದೆ. ಆದರೆ ಇದು ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳು ಮತ್ತು ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸುವ, ಎಲ್ಲರನ್ನು ಕಿರುಕುಳ ನೀಡಿ ಮೌನಗೊಳಿಸಲು ಮಾಡುತ್ತಿರುವ ತಂತ್ರ ಎಂಬುದು ತಿಳಿಯುತ್ತಿದೆ ಎಂದಿದೆ.

ಮಾನವ ಹಕ್ಕುಗಳ ರಕ್ಷಕರು, ಮಾನವೀಯ ಗುಂಪುಗಳು, ಪತ್ರಕರ್ತರು ಮತ್ತು ನಾಗರಿಕರನ್ನು ಮೌನವಾಗಿಸಲು ಎನ್ಐಎಯನ್ನು ಬಳಸುವ ಮೂಲಕ, ಮೋದಿ ಆಡಳಿತವು ಜಮ್ಮು ಕಾಶ್ಮೀರ ಜನರ ವಿರುದ್ಧದ ಯಾವುದೇ ಸಾಕ್ಷಿಗಳಿಲ್ಲದೆ ಅಪರಾಧ ಹೊರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್ಐಎ ಗುರಿಯಿಟ್ಟಿರುವ ಗುಂಪುಗಳು ಮತ್ತು ವ್ಯಕ್ತಿಗಳು ಮಾನವ ಹಕ್ಕುಗಳು ಮತ್ತು ಮಾನವೀಯ ಕಾರ್ಯಗಳ ಸುದೀರ್ಘ ಮತ್ತು ಪ್ರಭಾವಶಾಲಿ ಕೆಲಸಗಳನ್ನು ಮಾಡಿದ್ದಾರೆ. ಉದಾಹರಣೆಗೆ ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿ (ಜೆಕೆಸಿಸಿಎಸ್) ನಕಲಿ ಎನ್‌ಕೌಂಟರ್‌ಗಳು, ಲಾಕಪ್ ಡೆತ್, ಲೈಂಗಿಕ ದೌರ್ಜನ್ಯ ಮತ್ತು ಜೆ & ಕೆ ಮಕ್ಕಳ ಮೇಲಿನ ದೌರ್ಜನ್ಯದ ಪರಿಣಾಮಗಳ ಕುರಿತು ಸುದೀರ್ಘ ವರದಿಗಳನ್ನು ದಾಖಲಿಸಿದೆ ಎಂದು CPIML ಹೇಳಿದೆ.

ಇದನ್ನೂ ಓದಿ: ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್ಐಎ ದಾಳಿಯ ಮತ್ತೊಂದು ಗುರಿ ದೆಹಲಿಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಮತ್ತು ಚಾರಿಟಿ ಅಲೈಯನ್ಸ್ ಎಂಬ ಎನ್‌ಜಿಒ ನಡೆಸುತ್ತಿರುವ ಮಿಲ್ಲಿ ಗೆಜೆಟ್ ಪತ್ರಿಕೆಯ ಸ್ಥಾಪಕ ಸಂಪಾದಕ ಜಫರುಲ್ ಇಸ್ಲಾಂ ಖಾನ್.  ಖಾನ್ ನೇತೃತ್ವದಲ್ಲಿ, ದೆಹಲಿ ಅಲ್ಪಸಂಖ್ಯಾತ ಆಯೋಗವು ಫೆಬ್ರವರಿ 2020 ರ ದೆಹಲಿ ಹಿಂಸಾಚಾರದ ಬಗ್ಗೆ ಭೀಕರವಾದ ವರದಿಯನ್ನು ಪ್ರಕಟಿಸಿತ್ತು. ಮುಸ್ಲಿಮರ ವಿರುದ್ಧದ ಉದ್ದೇಶಿತ ಹಿಂಸಾಚಾರದಲ್ಲಿ ದೆಹಲಿ ಪೊಲೀಸರು ಭಾಗಿಯಾಗಿರುವುದಕ್ಕೆ ಪುರಾವೆಗಳನ್ನು ದಾಖಲಿಸಿದ್ದಾರೆ. ದೆಹಲಿ ಹಿಂಸಾಚಾರಕ್ಕೆ ಒಳಗಾದವರಿಗೆ ಚಾರಿಟಿ ಅಲೈಯನ್ಸ್ ಪರಿಹಾರ ನೀಡಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಗ್ರೇಟರ್ ಕಾಶ್ಮೀರ ಪತ್ರಿಕೆಯ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಈ ಪತ್ರಿಕೆ ಯಾವುದೇ ಕೆಟ್ಟ ವರದಿಗಳು ಪ್ರಕಟವಾಗಿಲ್ಲ ಮತ್ತು ಧೈರ್ಯಶಾಲಿ ಪತ್ರಿಕೋದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂತಹ ಪತ್ರಿಕೆಯ ಮೇಲೂ ಮೋದಿ ಸರ್ಕಾರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ ನಗರದಲ್ಲಿ ಮತ್ತು ಭಾರತದ ಇತರ ಭಾಗಗಳಲ್ಲಿ ನಿರಂತರವಾಗಿ ಮಾನವ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತಾ, ದನಿ ಎತ್ತಿರುವ ಸ್ವಾತಿ ಶೇಷಾದ್ರಿಯವರ ಮನೆಯ ಮೇಲೆ ಬೆಂಗಳೂರಿನಲ್ಲಿಯೂ ಎನ್ಐಎ ದಾಳಿ ನಡೆಸಿದೆ. ಲಾಕ್ ಡೌನ್ ಸಮಯದಲ್ಲಿ, ಸ್ವಾತಿ ಶೇಷಾದ್ರಿ “ವಲಸಿಗರೊಂದಿಗೆ ಬೆಂಗಳೂರು” ಎಂಬ ಅಭಿಯಾನದ ಭಾಗವಾಗಿ ಕೆಲಸ ಮಾಡಿದರು, ಆಹಾರ, ಆಶ್ರಯವಿಲ್ಲದೆ ಬೆಂಗಳೂರಿನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಪರಿಹಾರ ನೀಡಲು ಸಹಾಯ ಮಾಡಿದರು ಇಂತವರ ವಿರುದ್ಧವು ಸಂಚು ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಮೋದಿ ಆಡಳಿತದಲ್ಲಿ ಎನ್ಐಎ, ಇತರ ಅನೇಕ ಸಂಸ್ಥೆಗಳಂತೆ, “ಪಂಜರದ ಗಿಳಿ” ಆಗಿ ಮಾರ್ಪಟ್ಟಿದೆ. ಈಗ ಜಮ್ಮು ಕಾಶ್ಮೀರ ವಿಷಯವನ್ನಿಟ್ಟುಕೊಂಡು ಮಾನವ ಹಕ್ಕುಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ.  ಬಾಂಬ್ ಸ್ಫೋಟದ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸಿದ ಎನ್‌ಐಎ, ಜೆ & ಕೆ ಪೊಲೀಸ್ ಅಧಿಕಾರಿ ದಾವಿಂದರ್ ಸಿಂಗ್ ಅವರಿಗೆ ಜಾಮೀನು ದೊರೆಯುವಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ.

ತೂತುಕುಡಿಯಲ್ಲಿ ಜಯರಾಜ್ ಮತ್ತು ಬೆನ್ನಿಕ್ಸ್‌ರನ್ನು ತಮಿಳುನಾಡು ಪೊಲೀಸರು ಹತ್ಯೆಗೈದಿದ್ದು, ಭಾರತದ ಅತಿರೇಕದ ಹಿಂಸೆ ಮತ್ತು ಲಾಕಪ್ ಡೆತ್‌ಗಳ ಮೇಲೆ ಈ ಎನ್‌ಜಿಒಗಳು ಬೆಳಕು ಚೆಲ್ಲಿವೆ. ತೀರಾ ಇತ್ತೀಚೆಗೆ, ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಭಕ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ. ಇವೆಲ್ಲಾ ಪೊಲೀಸರು ಜನಸಾಮಾನ್ಯರ ಮೇಲೆ ಮಾಡುವ ದೌರ್ಜನ್ಯ. ಇವರುಗಳ ವಿರುದ್ಧ ಹೊರಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ. ಭಾರತದ ಪ್ರಜೆಗಳಾದ ನಾವು ನಮ್ಮ ಹಕ್ಕುಗಳ ರಕ್ಷಣೆ, ಸ್ವಾತಂತ್ರ್ಯಕ್ಕಾಗಿ ನಮ್ಮ ಪರ ಹೋರಾಟ ನಡೆಸಲು ಪ್ರಯತ್ನಿಸುವವರ ಪರ ನಿಲ್ಲಬೇಕು” ಎಂದು ಪತ್ರದಲ್ಲಿ ಬರೆಯಲಾಗಿದೆ.


ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...