Homeಚಳವಳಿಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮಾನವಹಕ್ಕು ರಕ್ಷಕರ ಮೇಲಿನ NIA ದಾಳಿ ನಿಲ್ಲಿಸಲು CPI(ML) ಆಗ್ರಹ

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ, ಬೆಂಗಳೂರು ಮತ್ತು ದೆಹಲಿಯ ನಾಗರಿಕ ಸಮಾಜ ಗುಂಪುಗಳು ಮತ್ತು ವ್ಯಕ್ತಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸಿದ ದಾಳಿಯನ್ನು ಖಂಡಿಸಿ ಸಿಪಿಐಎಂಎಲ್ ಕೇಂದ್ರ ಸಮಿತಿ (CPIML) ಬಹಿರಂಗ ಪತ್ರ ಬರೆದಿದೆ.

ಈ ದಾಳಿಗಳನ್ನು “ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ” ನಿಗ್ರಹಿಸುವುದಾಗಿ ಎಂದು ಎನ್ಐಎ ಹೇಳಿಕೊಂಡಿದೆ. ಆದರೆ ಇದು ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳು ಮತ್ತು ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸುವ, ಎಲ್ಲರನ್ನು ಕಿರುಕುಳ ನೀಡಿ ಮೌನಗೊಳಿಸಲು ಮಾಡುತ್ತಿರುವ ತಂತ್ರ ಎಂಬುದು ತಿಳಿಯುತ್ತಿದೆ ಎಂದಿದೆ.

ಮಾನವ ಹಕ್ಕುಗಳ ರಕ್ಷಕರು, ಮಾನವೀಯ ಗುಂಪುಗಳು, ಪತ್ರಕರ್ತರು ಮತ್ತು ನಾಗರಿಕರನ್ನು ಮೌನವಾಗಿಸಲು ಎನ್ಐಎಯನ್ನು ಬಳಸುವ ಮೂಲಕ, ಮೋದಿ ಆಡಳಿತವು ಜಮ್ಮು ಕಾಶ್ಮೀರ ಜನರ ವಿರುದ್ಧದ ಯಾವುದೇ ಸಾಕ್ಷಿಗಳಿಲ್ಲದೆ ಅಪರಾಧ ಹೊರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್ಐಎ ಗುರಿಯಿಟ್ಟಿರುವ ಗುಂಪುಗಳು ಮತ್ತು ವ್ಯಕ್ತಿಗಳು ಮಾನವ ಹಕ್ಕುಗಳು ಮತ್ತು ಮಾನವೀಯ ಕಾರ್ಯಗಳ ಸುದೀರ್ಘ ಮತ್ತು ಪ್ರಭಾವಶಾಲಿ ಕೆಲಸಗಳನ್ನು ಮಾಡಿದ್ದಾರೆ. ಉದಾಹರಣೆಗೆ ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿ (ಜೆಕೆಸಿಸಿಎಸ್) ನಕಲಿ ಎನ್‌ಕೌಂಟರ್‌ಗಳು, ಲಾಕಪ್ ಡೆತ್, ಲೈಂಗಿಕ ದೌರ್ಜನ್ಯ ಮತ್ತು ಜೆ & ಕೆ ಮಕ್ಕಳ ಮೇಲಿನ ದೌರ್ಜನ್ಯದ ಪರಿಣಾಮಗಳ ಕುರಿತು ಸುದೀರ್ಘ ವರದಿಗಳನ್ನು ದಾಖಲಿಸಿದೆ ಎಂದು CPIML ಹೇಳಿದೆ.

ಇದನ್ನೂ ಓದಿ: ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್ಐಎ ದಾಳಿಯ ಮತ್ತೊಂದು ಗುರಿ ದೆಹಲಿಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಮತ್ತು ಚಾರಿಟಿ ಅಲೈಯನ್ಸ್ ಎಂಬ ಎನ್‌ಜಿಒ ನಡೆಸುತ್ತಿರುವ ಮಿಲ್ಲಿ ಗೆಜೆಟ್ ಪತ್ರಿಕೆಯ ಸ್ಥಾಪಕ ಸಂಪಾದಕ ಜಫರುಲ್ ಇಸ್ಲಾಂ ಖಾನ್.  ಖಾನ್ ನೇತೃತ್ವದಲ್ಲಿ, ದೆಹಲಿ ಅಲ್ಪಸಂಖ್ಯಾತ ಆಯೋಗವು ಫೆಬ್ರವರಿ 2020 ರ ದೆಹಲಿ ಹಿಂಸಾಚಾರದ ಬಗ್ಗೆ ಭೀಕರವಾದ ವರದಿಯನ್ನು ಪ್ರಕಟಿಸಿತ್ತು. ಮುಸ್ಲಿಮರ ವಿರುದ್ಧದ ಉದ್ದೇಶಿತ ಹಿಂಸಾಚಾರದಲ್ಲಿ ದೆಹಲಿ ಪೊಲೀಸರು ಭಾಗಿಯಾಗಿರುವುದಕ್ಕೆ ಪುರಾವೆಗಳನ್ನು ದಾಖಲಿಸಿದ್ದಾರೆ. ದೆಹಲಿ ಹಿಂಸಾಚಾರಕ್ಕೆ ಒಳಗಾದವರಿಗೆ ಚಾರಿಟಿ ಅಲೈಯನ್ಸ್ ಪರಿಹಾರ ನೀಡಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಗ್ರೇಟರ್ ಕಾಶ್ಮೀರ ಪತ್ರಿಕೆಯ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಈ ಪತ್ರಿಕೆ ಯಾವುದೇ ಕೆಟ್ಟ ವರದಿಗಳು ಪ್ರಕಟವಾಗಿಲ್ಲ ಮತ್ತು ಧೈರ್ಯಶಾಲಿ ಪತ್ರಿಕೋದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂತಹ ಪತ್ರಿಕೆಯ ಮೇಲೂ ಮೋದಿ ಸರ್ಕಾರ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ತಮ್ಮ ನಗರದಲ್ಲಿ ಮತ್ತು ಭಾರತದ ಇತರ ಭಾಗಗಳಲ್ಲಿ ನಿರಂತರವಾಗಿ ಮಾನವ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತಾ, ದನಿ ಎತ್ತಿರುವ ಸ್ವಾತಿ ಶೇಷಾದ್ರಿಯವರ ಮನೆಯ ಮೇಲೆ ಬೆಂಗಳೂರಿನಲ್ಲಿಯೂ ಎನ್ಐಎ ದಾಳಿ ನಡೆಸಿದೆ. ಲಾಕ್ ಡೌನ್ ಸಮಯದಲ್ಲಿ, ಸ್ವಾತಿ ಶೇಷಾದ್ರಿ “ವಲಸಿಗರೊಂದಿಗೆ ಬೆಂಗಳೂರು” ಎಂಬ ಅಭಿಯಾನದ ಭಾಗವಾಗಿ ಕೆಲಸ ಮಾಡಿದರು, ಆಹಾರ, ಆಶ್ರಯವಿಲ್ಲದೆ ಬೆಂಗಳೂರಿನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಪರಿಹಾರ ನೀಡಲು ಸಹಾಯ ಮಾಡಿದರು ಇಂತವರ ವಿರುದ್ಧವು ಸಂಚು ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ಮೋದಿ ಆಡಳಿತದಲ್ಲಿ ಎನ್ಐಎ, ಇತರ ಅನೇಕ ಸಂಸ್ಥೆಗಳಂತೆ, “ಪಂಜರದ ಗಿಳಿ” ಆಗಿ ಮಾರ್ಪಟ್ಟಿದೆ. ಈಗ ಜಮ್ಮು ಕಾಶ್ಮೀರ ವಿಷಯವನ್ನಿಟ್ಟುಕೊಂಡು ಮಾನವ ಹಕ್ಕುಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ.  ಬಾಂಬ್ ಸ್ಫೋಟದ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸಿದ ಎನ್‌ಐಎ, ಜೆ & ಕೆ ಪೊಲೀಸ್ ಅಧಿಕಾರಿ ದಾವಿಂದರ್ ಸಿಂಗ್ ಅವರಿಗೆ ಜಾಮೀನು ದೊರೆಯುವಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ.

ತೂತುಕುಡಿಯಲ್ಲಿ ಜಯರಾಜ್ ಮತ್ತು ಬೆನ್ನಿಕ್ಸ್‌ರನ್ನು ತಮಿಳುನಾಡು ಪೊಲೀಸರು ಹತ್ಯೆಗೈದಿದ್ದು, ಭಾರತದ ಅತಿರೇಕದ ಹಿಂಸೆ ಮತ್ತು ಲಾಕಪ್ ಡೆತ್‌ಗಳ ಮೇಲೆ ಈ ಎನ್‌ಜಿಒಗಳು ಬೆಳಕು ಚೆಲ್ಲಿವೆ. ತೀರಾ ಇತ್ತೀಚೆಗೆ, ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಭಕ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ. ಇವೆಲ್ಲಾ ಪೊಲೀಸರು ಜನಸಾಮಾನ್ಯರ ಮೇಲೆ ಮಾಡುವ ದೌರ್ಜನ್ಯ. ಇವರುಗಳ ವಿರುದ್ಧ ಹೊರಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮುಂಗೆರ್, ತೂತುಕುಡಿ ಅಥವಾ ಕಾಶ್ಮೀರ ಕಣಿವೆ ಯಾವುದೇ ಇರಲಿ, ಸತ್ಯವನ್ನು ಬಹಿರಂಗಪಡಿಸುವ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರ ಮೇಲೆ ಎನ್ಐಎ ದಾಳಿ ನಡೆಸಿ, ಬಂಧಿಸುತ್ತಿರುವುದು ಸಂವಿಧಾನ ಬಾಹಿರವಾಗಿದೆ. ಭಾರತದ ಪ್ರಜೆಗಳಾದ ನಾವು ನಮ್ಮ ಹಕ್ಕುಗಳ ರಕ್ಷಣೆ, ಸ್ವಾತಂತ್ರ್ಯಕ್ಕಾಗಿ ನಮ್ಮ ಪರ ಹೋರಾಟ ನಡೆಸಲು ಪ್ರಯತ್ನಿಸುವವರ ಪರ ನಿಲ್ಲಬೇಕು” ಎಂದು ಪತ್ರದಲ್ಲಿ ಬರೆಯಲಾಗಿದೆ.


ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...