Homeಕರ್ನಾಟಕಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ...

ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ

- Advertisement -
- Advertisement -

ಬೆಂಗಳೂರು: ‘ಭಾರತದ ದುಡಿಯುವ ಜನರ ಮತ್ತು ನೈಸರ್ಗಿಕ ಸಂಪತ್ತನ್ನು ಕೆಲವೇ ಕೆಲವು ವ್ಯಕ್ತಿಗಳು ಶೋಷಣೆ ಮಾಡುವವರೆಗೆ ಯುದ್ಧ ಮುಂದುವರೆಯುತ್ತದೆ’ ಎಂದು ಹೇಳಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಉಲ್ಲೇಖದೊಂದಿಗೆ, ಛತ್ತೀಸಗಡ ರಾಜ್ಯದಂತಹ ಮಧ್ಯ ಭಾರತದ ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಕುರಿತು ‘ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ’ ಒಂದು ಪ್ರಕಟಣೆ ಹೊರಡಿಸಿದೆ. ಈ ಒಕ್ಕೂಟವು ವಿವಿಧ ಸಂಘಟನೆಗಳು ಮತ್ತು ವ್ಯಕ್ತಿಗಳನ್ನು ಒಳಗೊಂಡಿದೆ.

‘ಆಪರೇಷನ್ ಖಗರ್’: ಆದಿವಾಸಿಗಳ ಮೇಲಿನ ಯುದ್ಧ

2024ರ ಜನವರಿಯಿಂದ ನಡೆಯುತ್ತಿರುವ ಈ ‘ಆಪರೇಷನ್ ಖಗಾರ್’ ವಾಸ್ತವವಾಗಿ ಭಾರತದ ದೊಡ್ಡ ಬಂಡವಾಳಶಾಹಿಗಳು ಮತ್ತು ಸರ್ಕಾರದ ಜಂಟಿ ಕಾರ್ಯಾಚರಣೆಯಾಗಿದೆ ಎಂದು ಒಕ್ಕೂಟ ಆರೋಪಿಸಿದೆ. ಈ ಕಾರ್ಯಾಚರಣೆಯ ಮುಖ್ಯ ಉದ್ದೇಶ ಮಧ್ಯ ಭಾರತದ ಅಪಾರ ಖನಿಜ ಸಂಪತ್ತನ್ನು ಲೂಟಿ ಮಾಡುವುದಾಗಿದೆ. ಅಂಬಾನಿ, ಅದಾನಿ, ವೇದಾಂತ, ಟಾಟಾ ಮುಂತಾದ ದೊಡ್ಡ ಗಣಿ ಕಂಪನಿಗಳ ಲಾಭಕ್ಕಾಗಿ ಆದಿವಾಸಿಗಳನ್ನು ಅವರ ಪ್ರದೇಶಗಳಿಂದ ಸ್ಥಳಾಂತರಿಸಲು ಸರ್ಕಾರ ಶಸ್ತ್ರಸಜ್ಜಿತ ಪಡೆಗಳನ್ನು ಬಳಸುತ್ತಿದೆ ಎಂದು ಹೇಳಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2026ರ ಮಾರ್ಚ್‌ ವೇಳೆಗೆ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಈ ಹೇಳಿಕೆಯ ಹಿಂದಿನ ನಿಜವಾದ ಉದ್ದೇಶ, ದೊಡ್ಡ ಬಂಡವಾಳಶಾಹಿಗಳಿಗೆ ದಾರಿ ಮಾಡಿಕೊಡುವುದು ಎಂದು ಒಕ್ಕೂಟ ಆರೋಪಿಸಿದೆ. ಇದರ ಭಾಗವಾಗಿ ಈಗಾಗಲೇ ಗಡ್ಚಿರೋಲಿ (ಮಹಾರಾಷ್ಟ್ರ) ಮತ್ತು ರಾಯ್‌ಗಢ (ಛತ್ತೀಸ್‌ಗಢ) ಪ್ರದೇಶಗಳಲ್ಲಿ ಗಣಿಗಾರಿಕೆ ಮತ್ತು ಅರಣ್ಯನಾಶ ಪ್ರಾರಂಭವಾಗಿದೆ. ಬಸ್ತರ್ ಜಿಲ್ಲೆಯಲ್ಲಿ ಸೇನೆಯು ಅದಿವಾಸಿಗಳ ವಿರುದ್ಧ ದಮನ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಾಧ್ಯಮಗಳ ಮೌನ

ಈ ಕಾರ್ಯಾಚರಣೆಯಲ್ಲಿ ಸರ್ಕಾರ 150ರಿಂದ 200 ಮಾವೋವಾದಿಗಳನ್ನು ಮತ್ತು 100 ರಿಂದ 150 ಮುಗ್ಧ ಆದಿವಾಸಿಗಳನ್ನು ಹತ್ಯೆ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ ಮುಖ್ಯವಾಹಿನಿ ಮಾಧ್ಯಮಗಳು ಈ ವಿಷಯವನ್ನು ಸರಿಯಾಗಿ ವರದಿ ಮಾಡುತ್ತಿಲ್ಲ. ಮಾಧ್ಯಮಗಳು ಕೋಟ್ಯಾಂತರ ರೂಪಾಯಿ ತಲೆದಂಡ ಹೊಂದಿರುವ ಹಿರಿಯ ಮಾವೋವಾದಿ ನಾಯಕರ ಹತ್ಯೆಯನ್ನು ಮಾತ್ರ ವರದಿ ಮಾಡುತ್ತಿವೆ. ಆದರೆ, ಅಮಾಯಕ ಆದಿವಾಸಿಗಳ ಸಾವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ ಎಂದು ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.

‘ಆಪರೇಷನ್ ಖಗರ್’ ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳು (ಆರ್ಟಿಕಲ್ 21), ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಮತ್ತು ವಿಶ್ವಸಂಸ್ಥೆಯ ಆದಿವಾಸಿಗಳ ಹಕ್ಕುಗಳ ಘೋಷಣೆಯ ಉಲ್ಲಂಘನೆಯಾಗಿದೆ ಎಂದು ಒಕ್ಕೂಟ ಹೇಳಿದೆ. ಇದು ಕೇವಲ ದೊಡ್ಡ ಬಂಡವಾಳಶಾಹಿಗಳ ಲಾಭಕ್ಕಾಗಿ ನಡೆಸುತ್ತಿರುವ ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಎಂದು ಒಕ್ಕೂಟ ತಿಳಿಸಿದೆ.

ಶಾಂತಿ ಮಾತುಕತೆಗಳ ನಿರಾಕರಣೆ ಮತ್ತು ವ್ಯಾಪಕ ಪ್ರತಿರೋಧ

ಈ ಕಾರ್ಯಾಚರಣೆಯ ಅವಧಿಯಲ್ಲಿ, ತಲೆದಂಡ ಹೊಂದಿದ ಮಾವೋವಾದಿಗಳು ಎಂದಿಗೂ ಬಂಧನಕ್ಕೆ ಒಳಗಾದ ಅಥವಾ ಗಾಯಗೊಂಡ ಉದಾಹರಣೆಗಳಿಲ್ಲ. ಸರ್ಕಾರ ಬಹುಮಾನಗಳಿಗಾಗಿ ಅವರನ್ನು ಕಾನೂನು ಬಾಹಿರ ಎನ್‌ಕೌಂಟರ್‌ಗಳಲ್ಲಿ ಕೊಲ್ಲುತ್ತಿದೆ ಎಂದು ಆರೋಪಿಸಲಾಗಿದೆ. ನಾಗರಿಕ ಹಕ್ಕುಗಳ ಸಂಘಟನೆಗಳು ಮತ್ತು ಮಾವೋವಾದಿಗಳು ಕದನ ವಿರಾಮ ಘೋಷಿಸಿ ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಲು ಪದೇ ಪದೇ ಮನವಿ ಮಾಡಿಕೊಂಡರೂ ಸರ್ಕಾರ ಅದನ್ನು ನಿರಾಕರಿಸುತ್ತಿದೆ. ಆದರೆ, ತೆಲಂಗಾಣ ಸರ್ಕಾರವು ಮಾವೋವಾದಿಗಳೊಂದಿಗೆ ಮಾತುಕತೆ ನಡೆಸಲು ಸಿದ್ಧತೆ ತೋರಿಸಿರುವುದು ಒಂದು ಸಕಾರಾತ್ಮಕ ಬೆಳವಣಿಗೆ ಎಂದು ಒಕ್ಕೂಟ ಹೇಳಿದೆ.

‘ಆಪರೇಷನ್ ಖಗಾರ್’ ಕೇವಲ ಸಶಸ್ತ್ರ ಮಾವೋವಾದಿಗಳನ್ನು ನಿಯಂತ್ರಿಸಲು ಸೀಮಿತವಾಗಿಲ್ಲ. ಅನ್ಯಾಯ ಮತ್ತು ಅಸಮಾನತೆಯ ವ್ಯವಸ್ಥೆಯನ್ನು ವಿರೋಧಿಸುವ ಎಲ್ಲ ಬಗೆಯ ಪ್ರತಿರೋಧಗಳನ್ನೂ ಹತ್ತಿಕ್ಕುವುದು ಇದರ ಮುಖ್ಯ ಉದ್ದೇಶ. ಅಹಿಂಸಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ‘ಮೂಲವಾಸಿ ಬಚಾವೋ ಮಂಚ್’ ಸಂಘಟನೆಯನ್ನು ನಿಷೇಧಿಸಿರುವುದು ಮತ್ತು ಪ್ರಜಾಪ್ರಭುತ್ವವಾದಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ಹೇರಿರುವುದು ಇದಕ್ಕೆ ಸಾಕ್ಷಿ ಎಂದು ಒಕ್ಕೂಟ ಪ್ರತಿಪಾದಿಸಿದೆ. ಆದ್ದರಿಂದ, ‘ಆಪರೇಷನ್ ಖಗಾರ್’ ವಿರುದ್ಧದ ಪ್ರತಿರೋಧವು ಪ್ರಜಾಪ್ರಭುತ್ವವನ್ನು ಉಳಿಸುವ ಒಂದು ಜವಾಬ್ದಾರಿಯಾಗಿದೆ ಎಂದು ಒಕ್ಕೂಟ ಅಭಿಪ್ರಾಯಪಟ್ಟಿದೆ.

ಒಕ್ಕೂಟದ ಪ್ರಮುಖ ಬೇಡಿಕೆಗಳು

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ‘ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ’ವು ಕೇಂದ್ರ ಸರ್ಕಾರಕ್ಕೆ ಈ ಕೆಳಗಿನ ಆಗ್ರಹಗಳನ್ನು ಮುಂದಿಟ್ಟಿದೆ:

  1. ‘ಆಪರೇಶನ್ ಖಗಾರ್’ ಅನ್ನು ತಕ್ಷಣವೇ ನಿಲ್ಲಿಸಬೇಕು.
  2. ಸಿಪಿಐ (ಮಾವೋವಾದಿ) ಪಕ್ಷದೊಂದಿಗೆ ತಕ್ಷಣದ ಕದನ ವಿರಾಮ ಮತ್ತು ಷರತ್ತುರಹಿತ ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಬೇಕು.
  3. ಎಲ್ಲಾ ಕಾನೂನು ಬಾಹಿರ ಹತ್ಯೆಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.

ಈ ಹೋರಾಟದಲ್ಲಿ ಎಲ್ಲರೂ ತಮ್ಮ ಧ್ವನಿ ಎತ್ತಬೇಕು ಎಂದು ಒಕ್ಕೂಟವು ದೇಶದ ನಾಗರಿಕರಲ್ಲಿ ವಿನಂತಿಸಿದೆ.

ಈ ಒಕ್ಕೂಟದ ಸಂಘಟನೆಗಳು (Organizations):

  1. ಆದಿವಾಸಿ ಸಂಘರ್ಷ ಮೋರ್ಚಾ
  2. ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್
  3. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್
  4. ಅಂಬೇಡ್ಕರ್ ರೀಡಿಂಗ್ ಸರ್ಕಲ್
  5. ಭೀಮ ಸಂಘಟನೆಗಳ ಮಹಾ ಒಕ್ಕೂಟ
  6. ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ (ದೇವನಹಳ್ಳಿ)
  7. ಕಲೆಕ್ಟಿವ್
  8. ಡಿಎಸ್ಎಸ್
  9. ಡಿಎಸ್ಎಸ್ (ಅಂಬೇಡ್ಕರ್ ವಾದ)
  10. ದಲಿತ್ ಟೈಗರ್ಸ್
  11. ಡೊಮೆಸ್ಟಿಕ್ ವರ್ಕರ್ಸ್ ರೈಟ್ಸ್ ಯೂನಿಯನ್
  12. ಎದ್ದೇಳು ಕರ್ನಾಟಕ
  13. ಬಿ.ಆರ್. ಅಂಬೇಡ್ಕರ್ ದಲಿತ್ ಸೇನಾ ಸಮಿತಿ
  14. ಫ್ರೈಡೇಸ್ ಫಾರ್ ಫ್ಯೂಚರ್ – ಕರ್ನಾಟಕ
  15. ಗ್ರೋತ್ ವಾಚ್
  16. ಇಂಡಿಯನ್ ಸೋಷಿಯಲ್ ಆಕ್ಷನ್ ಫೋರಂ (ಇನ್ಸಾಫ್)
  17. ಕರ್ನಾಟಕ ಜನ ಜಾಗೃತಿ ವೇದಿಕೆ
  18. ಕರ್ನಾಟಕ ಜನಶಕ್ತಿ
  19. ಕನ್ನಡ ಪ್ಲಾನೆಟ್
  20. ಕರ್ನಾಟಕ ವಾಯ್ಸ್ ಆಫ್ ಪಬ್ಲಿಕ್
  21. ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ
  22. ಕರ್ನಾಟಕ ರೈತ ಸಂಘ (ಎಯುಸಿ)
  23. ಮೂಲನಿವಾಸಿಗಳ ಬಿ.ಆರ್. ಅಂಬೇಡ್ಕರ್ ಸೇನೆ
  24. ನ್ಯಾಷನಲ್ ಅಲಯನ್ಸ್ ಫಾರ್ ಜಸ್ಟಿಸ್, ಅಕೌಂಟಬಿಲಿಟಿ ಅಂಡ್ ರೈಟ್ಸ್
  25. ನ್ಯಾಷನಲ್ ಅಲಯನ್ಸ್ ಆಫ್ ಪೀಪಲ್ಸ್ ಮೂವ್ಮೆಂಟ್ – ಕರ್ನಾಟಕ
  26. ಪ್ರಗತಿಪರ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಯೂನಿಯನ್
  27. ಪ್ರಜಾತಾಂತ್ರಿಕ ಜನರ ವೇದಿಕೆ (ಪಿಡಿಎಫ್)
  28. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್
  29. ಸ್ಪಾರ್ಕ್ ರೀಡಿಂಗ್ ಸರ್ಕಲ್
  30. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್
  31. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್
  32. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ಸಿಸ್ಟ್)
  33. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಮ್ಎಲ್) ಲಿಬರೇಷನ್

ಒಕ್ಕೂಟದಲ್ಲಿರುವ ವ್ಯಕ್ತಿಗಳು (Individuals):

  1. ಡಾ. ಜಿ. ರಾಮಕೃಷ್ಣ (ಲೇಖಕರು)
  2. ಶಿವಸುಂದರ್ (ಸಾಮಾಜಿಕ ಕಾರ್ಯಕರ್ತ ಮತ್ತು ಅಂಕಣಕಾರರು)
  3. ಡಾ. ನಿರಂಜನ ಆರಾಧ್ಯ (ಶಿಕ್ಷಣತಜ್ಞರು)
  4. ಶ್ರೀಪಾದ್ ಭಟ್ (ಶಿಕ್ಷಣತಜ್ಞರು)
  5. ಡಾ. ಪ್ರಜ್ವಲ್ ಶಾಸ್ತ್ರಿ (ಭೌತಶಾಸ್ತ್ರಜ್ಞ)
  6. ಮಧು ಭೂಷಣ್ (ಕಾರ್ಯಕರ್ತ)
  7. ಡಾ. ದು. ಸರಸ್ವತಿ (ರಂಗಭೂಮಿ ಕಲಾವಿದೆ)
  8. ಡಾ. ಸಬಿಹಾ ಭೂಮಿಗೌಡ (ನಿವೃತ್ತ ಉಪಕುಲಪತಿ)
  9. ವಿದ್ಯಾ ದಿನಕರ್ (ಕಾರ್ಯಕರ್ತೆ)
  10. ಡಾ. ಸುವ್ರತ್ ರಾಜು (ಭೌತಶಾಸ್ತ್ರಜ್ಞ)
  11. ರಾಮ್ನೀಕ್ ಸಿಂಗ್ (ನಾಟಕಕಾರ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...