Homeಕರ್ನಾಟಕಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ...

ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಯುದ್ದ ನಿಲ್ಲಿಸಿ: ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ ಆಗ್ರಹ

- Advertisement -
- Advertisement -

ಬೆಂಗಳೂರು: ‘ಭಾರತದ ದುಡಿಯುವ ಜನರ ಮತ್ತು ನೈಸರ್ಗಿಕ ಸಂಪತ್ತನ್ನು ಕೆಲವೇ ಕೆಲವು ವ್ಯಕ್ತಿಗಳು ಶೋಷಣೆ ಮಾಡುವವರೆಗೆ ಯುದ್ಧ ಮುಂದುವರೆಯುತ್ತದೆ’ ಎಂದು ಹೇಳಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಉಲ್ಲೇಖದೊಂದಿಗೆ, ಛತ್ತೀಸಗಡ ರಾಜ್ಯದಂತಹ ಮಧ್ಯ ಭಾರತದ ಆದಿವಾಸಿಗಳ ಮೇಲೆ ನಡೆಯುತ್ತಿರುವ ‘ಆಪರೇಷನ್ ಖಗಾರ್’ ಕುರಿತು ‘ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ’ ಒಂದು ಪ್ರಕಟಣೆ ಹೊರಡಿಸಿದೆ. ಈ ಒಕ್ಕೂಟವು ವಿವಿಧ ಸಂಘಟನೆಗಳು ಮತ್ತು ವ್ಯಕ್ತಿಗಳನ್ನು ಒಳಗೊಂಡಿದೆ.

‘ಆಪರೇಷನ್ ಖಗರ್’: ಆದಿವಾಸಿಗಳ ಮೇಲಿನ ಯುದ್ಧ

2024ರ ಜನವರಿಯಿಂದ ನಡೆಯುತ್ತಿರುವ ಈ ‘ಆಪರೇಷನ್ ಖಗಾರ್’ ವಾಸ್ತವವಾಗಿ ಭಾರತದ ದೊಡ್ಡ ಬಂಡವಾಳಶಾಹಿಗಳು ಮತ್ತು ಸರ್ಕಾರದ ಜಂಟಿ ಕಾರ್ಯಾಚರಣೆಯಾಗಿದೆ ಎಂದು ಒಕ್ಕೂಟ ಆರೋಪಿಸಿದೆ. ಈ ಕಾರ್ಯಾಚರಣೆಯ ಮುಖ್ಯ ಉದ್ದೇಶ ಮಧ್ಯ ಭಾರತದ ಅಪಾರ ಖನಿಜ ಸಂಪತ್ತನ್ನು ಲೂಟಿ ಮಾಡುವುದಾಗಿದೆ. ಅಂಬಾನಿ, ಅದಾನಿ, ವೇದಾಂತ, ಟಾಟಾ ಮುಂತಾದ ದೊಡ್ಡ ಗಣಿ ಕಂಪನಿಗಳ ಲಾಭಕ್ಕಾಗಿ ಆದಿವಾಸಿಗಳನ್ನು ಅವರ ಪ್ರದೇಶಗಳಿಂದ ಸ್ಥಳಾಂತರಿಸಲು ಸರ್ಕಾರ ಶಸ್ತ್ರಸಜ್ಜಿತ ಪಡೆಗಳನ್ನು ಬಳಸುತ್ತಿದೆ ಎಂದು ಹೇಳಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2026ರ ಮಾರ್ಚ್‌ ವೇಳೆಗೆ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಈ ಹೇಳಿಕೆಯ ಹಿಂದಿನ ನಿಜವಾದ ಉದ್ದೇಶ, ದೊಡ್ಡ ಬಂಡವಾಳಶಾಹಿಗಳಿಗೆ ದಾರಿ ಮಾಡಿಕೊಡುವುದು ಎಂದು ಒಕ್ಕೂಟ ಆರೋಪಿಸಿದೆ. ಇದರ ಭಾಗವಾಗಿ ಈಗಾಗಲೇ ಗಡ್ಚಿರೋಲಿ (ಮಹಾರಾಷ್ಟ್ರ) ಮತ್ತು ರಾಯ್‌ಗಢ (ಛತ್ತೀಸ್‌ಗಢ) ಪ್ರದೇಶಗಳಲ್ಲಿ ಗಣಿಗಾರಿಕೆ ಮತ್ತು ಅರಣ್ಯನಾಶ ಪ್ರಾರಂಭವಾಗಿದೆ. ಬಸ್ತರ್ ಜಿಲ್ಲೆಯಲ್ಲಿ ಸೇನೆಯು ಅದಿವಾಸಿಗಳ ವಿರುದ್ಧ ದಮನ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಾಧ್ಯಮಗಳ ಮೌನ

ಈ ಕಾರ್ಯಾಚರಣೆಯಲ್ಲಿ ಸರ್ಕಾರ 150ರಿಂದ 200 ಮಾವೋವಾದಿಗಳನ್ನು ಮತ್ತು 100 ರಿಂದ 150 ಮುಗ್ಧ ಆದಿವಾಸಿಗಳನ್ನು ಹತ್ಯೆ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ ಮುಖ್ಯವಾಹಿನಿ ಮಾಧ್ಯಮಗಳು ಈ ವಿಷಯವನ್ನು ಸರಿಯಾಗಿ ವರದಿ ಮಾಡುತ್ತಿಲ್ಲ. ಮಾಧ್ಯಮಗಳು ಕೋಟ್ಯಾಂತರ ರೂಪಾಯಿ ತಲೆದಂಡ ಹೊಂದಿರುವ ಹಿರಿಯ ಮಾವೋವಾದಿ ನಾಯಕರ ಹತ್ಯೆಯನ್ನು ಮಾತ್ರ ವರದಿ ಮಾಡುತ್ತಿವೆ. ಆದರೆ, ಅಮಾಯಕ ಆದಿವಾಸಿಗಳ ಸಾವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ ಎಂದು ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.

‘ಆಪರೇಷನ್ ಖಗರ್’ ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳು (ಆರ್ಟಿಕಲ್ 21), ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಮತ್ತು ವಿಶ್ವಸಂಸ್ಥೆಯ ಆದಿವಾಸಿಗಳ ಹಕ್ಕುಗಳ ಘೋಷಣೆಯ ಉಲ್ಲಂಘನೆಯಾಗಿದೆ ಎಂದು ಒಕ್ಕೂಟ ಹೇಳಿದೆ. ಇದು ಕೇವಲ ದೊಡ್ಡ ಬಂಡವಾಳಶಾಹಿಗಳ ಲಾಭಕ್ಕಾಗಿ ನಡೆಸುತ್ತಿರುವ ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಎಂದು ಒಕ್ಕೂಟ ತಿಳಿಸಿದೆ.

ಶಾಂತಿ ಮಾತುಕತೆಗಳ ನಿರಾಕರಣೆ ಮತ್ತು ವ್ಯಾಪಕ ಪ್ರತಿರೋಧ

ಈ ಕಾರ್ಯಾಚರಣೆಯ ಅವಧಿಯಲ್ಲಿ, ತಲೆದಂಡ ಹೊಂದಿದ ಮಾವೋವಾದಿಗಳು ಎಂದಿಗೂ ಬಂಧನಕ್ಕೆ ಒಳಗಾದ ಅಥವಾ ಗಾಯಗೊಂಡ ಉದಾಹರಣೆಗಳಿಲ್ಲ. ಸರ್ಕಾರ ಬಹುಮಾನಗಳಿಗಾಗಿ ಅವರನ್ನು ಕಾನೂನು ಬಾಹಿರ ಎನ್‌ಕೌಂಟರ್‌ಗಳಲ್ಲಿ ಕೊಲ್ಲುತ್ತಿದೆ ಎಂದು ಆರೋಪಿಸಲಾಗಿದೆ. ನಾಗರಿಕ ಹಕ್ಕುಗಳ ಸಂಘಟನೆಗಳು ಮತ್ತು ಮಾವೋವಾದಿಗಳು ಕದನ ವಿರಾಮ ಘೋಷಿಸಿ ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಲು ಪದೇ ಪದೇ ಮನವಿ ಮಾಡಿಕೊಂಡರೂ ಸರ್ಕಾರ ಅದನ್ನು ನಿರಾಕರಿಸುತ್ತಿದೆ. ಆದರೆ, ತೆಲಂಗಾಣ ಸರ್ಕಾರವು ಮಾವೋವಾದಿಗಳೊಂದಿಗೆ ಮಾತುಕತೆ ನಡೆಸಲು ಸಿದ್ಧತೆ ತೋರಿಸಿರುವುದು ಒಂದು ಸಕಾರಾತ್ಮಕ ಬೆಳವಣಿಗೆ ಎಂದು ಒಕ್ಕೂಟ ಹೇಳಿದೆ.

‘ಆಪರೇಷನ್ ಖಗಾರ್’ ಕೇವಲ ಸಶಸ್ತ್ರ ಮಾವೋವಾದಿಗಳನ್ನು ನಿಯಂತ್ರಿಸಲು ಸೀಮಿತವಾಗಿಲ್ಲ. ಅನ್ಯಾಯ ಮತ್ತು ಅಸಮಾನತೆಯ ವ್ಯವಸ್ಥೆಯನ್ನು ವಿರೋಧಿಸುವ ಎಲ್ಲ ಬಗೆಯ ಪ್ರತಿರೋಧಗಳನ್ನೂ ಹತ್ತಿಕ್ಕುವುದು ಇದರ ಮುಖ್ಯ ಉದ್ದೇಶ. ಅಹಿಂಸಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ‘ಮೂಲವಾಸಿ ಬಚಾವೋ ಮಂಚ್’ ಸಂಘಟನೆಯನ್ನು ನಿಷೇಧಿಸಿರುವುದು ಮತ್ತು ಪ್ರಜಾಪ್ರಭುತ್ವವಾದಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ಹೇರಿರುವುದು ಇದಕ್ಕೆ ಸಾಕ್ಷಿ ಎಂದು ಒಕ್ಕೂಟ ಪ್ರತಿಪಾದಿಸಿದೆ. ಆದ್ದರಿಂದ, ‘ಆಪರೇಷನ್ ಖಗಾರ್’ ವಿರುದ್ಧದ ಪ್ರತಿರೋಧವು ಪ್ರಜಾಪ್ರಭುತ್ವವನ್ನು ಉಳಿಸುವ ಒಂದು ಜವಾಬ್ದಾರಿಯಾಗಿದೆ ಎಂದು ಒಕ್ಕೂಟ ಅಭಿಪ್ರಾಯಪಟ್ಟಿದೆ.

ಒಕ್ಕೂಟದ ಪ್ರಮುಖ ಬೇಡಿಕೆಗಳು

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ‘ಆದಿವಾಸಿಗಳ ಮೇಲಿನ ಯುದ್ಧ ವಿರೋಧಿ ಕರ್ನಾಟಕ ಜನತೆಯ ಒಕ್ಕೂಟ’ವು ಕೇಂದ್ರ ಸರ್ಕಾರಕ್ಕೆ ಈ ಕೆಳಗಿನ ಆಗ್ರಹಗಳನ್ನು ಮುಂದಿಟ್ಟಿದೆ:

  1. ‘ಆಪರೇಶನ್ ಖಗಾರ್’ ಅನ್ನು ತಕ್ಷಣವೇ ನಿಲ್ಲಿಸಬೇಕು.
  2. ಸಿಪಿಐ (ಮಾವೋವಾದಿ) ಪಕ್ಷದೊಂದಿಗೆ ತಕ್ಷಣದ ಕದನ ವಿರಾಮ ಮತ್ತು ಷರತ್ತುರಹಿತ ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಬೇಕು.
  3. ಎಲ್ಲಾ ಕಾನೂನು ಬಾಹಿರ ಹತ್ಯೆಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.

ಈ ಹೋರಾಟದಲ್ಲಿ ಎಲ್ಲರೂ ತಮ್ಮ ಧ್ವನಿ ಎತ್ತಬೇಕು ಎಂದು ಒಕ್ಕೂಟವು ದೇಶದ ನಾಗರಿಕರಲ್ಲಿ ವಿನಂತಿಸಿದೆ.

ಈ ಒಕ್ಕೂಟದ ಸಂಘಟನೆಗಳು (Organizations):

  1. ಆದಿವಾಸಿ ಸಂಘರ್ಷ ಮೋರ್ಚಾ
  2. ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್
  3. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್
  4. ಅಂಬೇಡ್ಕರ್ ರೀಡಿಂಗ್ ಸರ್ಕಲ್
  5. ಭೀಮ ಸಂಘಟನೆಗಳ ಮಹಾ ಒಕ್ಕೂಟ
  6. ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ (ದೇವನಹಳ್ಳಿ)
  7. ಕಲೆಕ್ಟಿವ್
  8. ಡಿಎಸ್ಎಸ್
  9. ಡಿಎಸ್ಎಸ್ (ಅಂಬೇಡ್ಕರ್ ವಾದ)
  10. ದಲಿತ್ ಟೈಗರ್ಸ್
  11. ಡೊಮೆಸ್ಟಿಕ್ ವರ್ಕರ್ಸ್ ರೈಟ್ಸ್ ಯೂನಿಯನ್
  12. ಎದ್ದೇಳು ಕರ್ನಾಟಕ
  13. ಬಿ.ಆರ್. ಅಂಬೇಡ್ಕರ್ ದಲಿತ್ ಸೇನಾ ಸಮಿತಿ
  14. ಫ್ರೈಡೇಸ್ ಫಾರ್ ಫ್ಯೂಚರ್ – ಕರ್ನಾಟಕ
  15. ಗ್ರೋತ್ ವಾಚ್
  16. ಇಂಡಿಯನ್ ಸೋಷಿಯಲ್ ಆಕ್ಷನ್ ಫೋರಂ (ಇನ್ಸಾಫ್)
  17. ಕರ್ನಾಟಕ ಜನ ಜಾಗೃತಿ ವೇದಿಕೆ
  18. ಕರ್ನಾಟಕ ಜನಶಕ್ತಿ
  19. ಕನ್ನಡ ಪ್ಲಾನೆಟ್
  20. ಕರ್ನಾಟಕ ವಾಯ್ಸ್ ಆಫ್ ಪಬ್ಲಿಕ್
  21. ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ
  22. ಕರ್ನಾಟಕ ರೈತ ಸಂಘ (ಎಯುಸಿ)
  23. ಮೂಲನಿವಾಸಿಗಳ ಬಿ.ಆರ್. ಅಂಬೇಡ್ಕರ್ ಸೇನೆ
  24. ನ್ಯಾಷನಲ್ ಅಲಯನ್ಸ್ ಫಾರ್ ಜಸ್ಟಿಸ್, ಅಕೌಂಟಬಿಲಿಟಿ ಅಂಡ್ ರೈಟ್ಸ್
  25. ನ್ಯಾಷನಲ್ ಅಲಯನ್ಸ್ ಆಫ್ ಪೀಪಲ್ಸ್ ಮೂವ್ಮೆಂಟ್ – ಕರ್ನಾಟಕ
  26. ಪ್ರಗತಿಪರ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಯೂನಿಯನ್
  27. ಪ್ರಜಾತಾಂತ್ರಿಕ ಜನರ ವೇದಿಕೆ (ಪಿಡಿಎಫ್)
  28. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್
  29. ಸ್ಪಾರ್ಕ್ ರೀಡಿಂಗ್ ಸರ್ಕಲ್
  30. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್
  31. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್
  32. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ಸಿಸ್ಟ್)
  33. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಮ್ಎಲ್) ಲಿಬರೇಷನ್

ಒಕ್ಕೂಟದಲ್ಲಿರುವ ವ್ಯಕ್ತಿಗಳು (Individuals):

  1. ಡಾ. ಜಿ. ರಾಮಕೃಷ್ಣ (ಲೇಖಕರು)
  2. ಶಿವಸುಂದರ್ (ಸಾಮಾಜಿಕ ಕಾರ್ಯಕರ್ತ ಮತ್ತು ಅಂಕಣಕಾರರು)
  3. ಡಾ. ನಿರಂಜನ ಆರಾಧ್ಯ (ಶಿಕ್ಷಣತಜ್ಞರು)
  4. ಶ್ರೀಪಾದ್ ಭಟ್ (ಶಿಕ್ಷಣತಜ್ಞರು)
  5. ಡಾ. ಪ್ರಜ್ವಲ್ ಶಾಸ್ತ್ರಿ (ಭೌತಶಾಸ್ತ್ರಜ್ಞ)
  6. ಮಧು ಭೂಷಣ್ (ಕಾರ್ಯಕರ್ತ)
  7. ಡಾ. ದು. ಸರಸ್ವತಿ (ರಂಗಭೂಮಿ ಕಲಾವಿದೆ)
  8. ಡಾ. ಸಬಿಹಾ ಭೂಮಿಗೌಡ (ನಿವೃತ್ತ ಉಪಕುಲಪತಿ)
  9. ವಿದ್ಯಾ ದಿನಕರ್ (ಕಾರ್ಯಕರ್ತೆ)
  10. ಡಾ. ಸುವ್ರತ್ ರಾಜು (ಭೌತಶಾಸ್ತ್ರಜ್ಞ)
  11. ರಾಮ್ನೀಕ್ ಸಿಂಗ್ (ನಾಟಕಕಾರ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...