Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...