Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...