Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...