Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...