Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...