Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...