Homeಮುಖಪುಟಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

ಪಠ್ಯ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ: ದಸಂಸ ಒಕ್ಕೂಟ ಎಚ್ಚರಿಕೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪುನರ್ ಪರಿಷ್ಕರಣೆ ಕೈಬಿಡದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದಸಂಸ ಒಕ್ಕೂಟ (ದಲಿತ ಸಂಘರ್ಷ ಸಮತಿ/ಸಂಘಟನೆಗಳ ಜಂಟಿ ವೇದಿಕೆ) ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಶೂದ್ರ, ಹಿಂದುಳಿದ, ದಲಿತ-ದಮನಿತ, ಆದಿವಾಸಿ ಬುಡಕಟ್ಟು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿಯಾದ, ಬ್ರಾಹ್ಮಣ್ಯ ತುಂಬಿಕೊಂಡಿರುವ ಪಠ್ಯ ಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಬೇಕು, ಅಸಮರ್ಥ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ರೋಹಿತ್ ಚಕ್ರತೀರ್ಥ ಸಮಿತಿಯ 7 ಜನ ಸದಸ್ಯರು ಸಹ ಬ್ರಾಹ್ಮಣ ಸಮುದಾಯದವರಾಗಿದ್ದು, ಇತರ ಸಮುದಾಯದ ಒಬ್ಬರೂ ಸದಸ್ಯರಿರುವುದಿಲ್ಲ. ಮಹಿಳೆಯರು ಸಹ ಆ ಸಮಿತಿಯಲ್ಲಿಲ್ಲ. ರೋಹಿತ್ ಚಕ್ರತೀರ್ಥ ಎಂಬ RSS ಕಾರ್ಯಕರ್ತ ಹೊರತು ಶಿಕ್ಷಣ ತಜ್ಞನಲ್ಲ. ಆತನಿಗೆ ಪಠ್ಯ ಪರಿಷ್ಕರಿಸುವ ಯಾವದೇ ಅರ್ಹತೆಯಿಲ್ಲ. ಅದರ ಫಲವಾಗಿಯೇ ಪರಿಷ್ಕರಣೆಗೊಂಡಿರುವ ಪಠ್ಯಗಳು ಬ್ರಾಹ್ಮಣ್ಯದಿಂದ ತುಂಬಿವೆ. ದಲಿತ-ದಮನಿತ-ಮಹಿಳಾ ವಿರೋಧಿಯಾಗಿವೆ. ಹಾಗಾಗಿ ಕೂಡಲೇ ಆ ಸಮಿತಿಯನ್ನು ವಜಾಗೊಳಿಸಿ ಪಠ್ಯ ಪರಿಷ್ಕರಣೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಂಚಾಲಕರಾದ ಮಾವಳ್ಳಿ ಶಂಕರ್‌ರವರು ಮಾತನಾಡಿ, “ಮಾನವೀಯತೆ, ಶಾಂತಿ, ಪ್ರೀತಿ ಮತ್ತು ಮೈತ್ರಿ ಸಾರಿದ ಗೌತಮ ಬುದ್ದರವರ ಹೊಸ ಧರ್ಮಗಳ ಉದಯ ಪಠ್ಯವನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಹಿರಿಯ ದಲಿತ ಸಾಹಿತಿ ಅರವಿಂದ ಮಾಲಗತ್ತಿಯವರ ಬುದ್ದರ ಕುರಿತು ಪದ್ಯ ಕೈಬಿಡಲಾಗಿದೆ. ದ್ವಿತೀಯ ಪಿ.ಯು.ಸಿ ಪಠ್ಯ ಸಹ ಕೈಡಲು ಮುಂದಾಗಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ” ಎಂದರು.

“ಹೊಸದಾಗಿ ಸೇರಿಸಲಾದ 10 ಪಠ್ಯಗಳಲ್ಲಿ 09 ಪಠ್ಯಗಳು ಬ್ರಾಹ್ಮಣ ಲೇಖಕರದ್ದು. 06 ಪರಿಶಿಷ್ಟ ಹಾಗೂ ಹಿಂದುಳಿದ ವರ್ಗದ ಲೇಖಕರ ಪಠ್ಯ ಕೈಬಿಡಲಾಗಿದೆ. ನೂತನ ಪಠ್ಯದಲ್ಲಿ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಲಾಗುತ್ತಿದೆ. ಅವರನ್ನು ಹಣಕ್ಕೆ ಹೋಲಿಸಿ, ಚಂಚಲೆ, ಒಬ್ಬರ ಬಳಿ ನಿಲ್ಲುವುದಿಲ್ಲ, ಎಲ್ಲರೂ ಆಕೆಯತ್ತ ಆಕರ್ಷಿತರಾದವರೆ. ಎಲ್ಲರೂ ಆಕೆಯಿಂದ ಮೋಸಹೋಗುವವರೇ. ಯಾವುದೇ ಒಬ್ಬನನ್ನು ನಿರ್ವಂಚನೆಯಿಂದ ಪ್ರೇಮಿಸುವುದು ಆಕೆಯ ಜಾಯಮಾನಕ್ಕೆ ಸಲ್ಲದು ಎಂಬು ಬಿಂಬಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿ.ನಾಗರಾಜುರವರು ಮಾತನಾಡಿ, “ಸ್ವಾಮಿ ವಿವೇಕಾನಂದರ ಪಠ್ಯ ತಿರುಚಲಾಗಿದೆ. ಜಾತೀಯತೆಯ ಅಪಾಯಗಳ ಬಗ್ಗೆ ಅವರು ಬರೆದಿದ್ದ ಪಠ್ಯವನ್ನು ಕೈಬಿಟ್ಟು ಆ ಜಾಗಕ್ಕೆ ಸಂಸ್ಕೃತಿ ವ್ಯಸನ ಹೇರುವ, ಸಂಸ್ಕೃತಿ ಇಲ್ಲದವರು ಕಾಡುಜನರು ಎಂಬ ಸಮಾಜ ವಿರೋಧಿ ಪಠ್ಯ ಸೇರಿಸಲಾಗಿದೆ. ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ರವರ ಪಠ್ಯ ಕೈಬಿಟ್ಟಿರುವುದು ಖಂಡನೀಯ” ಎಂದರು.

ಈ ದೇಶದಲ್ಲಿ ಜಾತಿಪದ್ದತಿ, ವರ್ಣಾಶ್ರಮವನ್ನು ಪ್ರೋತ್ಸಾಹಿಸುವ RSS ಸ್ಥಾಪಕ ಕೆ.ಬಿ ಹೆಡಗೇವಾರ್ ಪಠ್ಯ ಸೇರಿಸುವ ಮೂಲಕ ಮಕ್ಕಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಜೀವನಪೂರ್ತಿ ಸುಳ್ಳು ಹೇಳಿಕೊಂಡು ತಿರುಗಿದ ಚಕ್ರವರ್ತಿ ಸೂಲಿಬೆಲೆ ಎಂಬ ಮಹಾನ್ ಸುಳ್ಳುಗಾರನ ಪಠ್ಯ ಸೇರಿಸುವುದರ ಅರ್ಥವೇನು? ಇದನ್ನು ಓದಿದರೆ ನಮ್ಮ ಮಕ್ಕಳ ಮನಸ್ಥಿತಿ ಏನಾಗುವುದು ಎಂದು ಪ್ರಶ್ನಿಸಿದರು.

ಮತ್ತೊಬ್ಬ ದಲಿತ ಹೋರಾಟಗಾರರಾದ ಲಕ್ಷ್ಮೀನಾರಾಯಣ ನಾಗವಾರರವರು ಮಾತನಾಡಿ, “ಕೂಡಲೇ ಈ ಬ್ರಾಹ್ಮಣಿಕೆಯ, ಬ್ರಾಹ್ಮಣರೇ ತುಂಬಿರುವ ಸಮಿತಿಯನ್ನು ವಜಾಗೊಳಿಸಬೇಕು. ಹಿಂದಿನ ಪಠ್ಯವನ್ನೇ ಬೋದಿಸಬೇಕು. ಅನರ್ಹ ರೋಹಿತ್ ಚಕ್ರತೀರ್ಥನನ್ನು ಐಐಟಿ-ಸಿಇಟಿ ಪ್ರೊಫೆಸರ್ ಎಂದು ಸುಳ್ಳು ಹೇಳಿಕೆ ನೀಡಿ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ, ಅಸಮರ್ಥ ಮತ್ತು ಹೊಣೆಗೇಡಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರಾಜ್ಯದಲ್ಲಿ ಇಂತಹ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿಯವರು ಮೌನ ವಹಿಸಿದ್ದಾರೆ. ಅವರು ಒಂದು ವಾರದೊಳಗೆ ಪಠ್ಯಕ್ರಮ ಪರಿಷ್ಕರಣೆ ಕೈಬಿಟ್ಟು, ಹಿಂದಿನ ಪಠ್ಯ ಬೋಧಿಸಲು ಆದೇಶಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...