Homeಮುಖಪುಟಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

- Advertisement -
- Advertisement -

ಭಾರತೀಯ ಪ್ರಭುತ್ವದಿಂದ ಯುವ ಪರಿಸರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಯು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತದ ಪ್ರಜಾತಾಂತ್ರಿಕ ಹಕ್ಕನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕುವ ಟ್ರೆಂಡ್‌ನ ಸಂಕೇತವಾಗಿದೆ. ಇದರ ಬದಲು ಸರ್ಕಾರ ಮಾತುಕತೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಜವಾದ ಪ್ರಜಾತಾಂತ್ರಿಕ ನಿಲುವನ್ನು ಪ್ರದರ್ಶಿಸಬೇಕಿತ್ತು ಎಂದು ಲಿಯೋ ಎಫ್. ಸಾಲ್ಡಾನಾ ತಿಳಿಸಿದ್ದಾರೆ.

ಜನರ ಚಳುವಳಿಗಳ ರಾಷ್ಟ್ರೀಯ ಒಕ್ಕೂಟ, ಭಾರತದಲ್ಲಿ ಪರಿಸರ ನ್ಯಾಯಕ್ಕಾಗಿ ಒಕ್ಕೂಟ ಮತ್ತು
ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ದೇಶದ ಯುವಜನರ ಮಾತು ಆಲಿಸುವ ಬದಲು, 22 ವರ್ಷದ ಯುವ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನಡೆಸಿಕೊಂಡ ರೀತಿ, ಕಾನೂನಿನ ನಿಯಮಗಳನ್ನು ಉಲ್ಲಂಘಿಸಲು ಮತ್ತು ಸ್ಥಾಪಿತ ಕಾರ್ಯವಿಧಾನದ ಪ್ರಕ್ರಿಯೆಗಳನ್ನು ಉಲ್ಲಂಘಿಸಲು ಬಯಸುವ ಪ್ರಭುತ್ವದ ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ” ಎಂದು ಸಾಲ್ಡಾನಾ ಆರೋಪಿಸಿದ್ದಾರೆ.

ನಿಕಿತಾ ಜಾಕೋಬ್ ಮತ್ತು ಶಾಂತನ್ ಮುಲುಕ್ ಎಂಬ ಇಬ್ಬರು ಯುವಕರ ವಿರುದ್ಧ ಹೊರಡಿಸಲಾದ ವಾರಂಟ್‌ಗಳು ಮತ್ತು ದಿಶಾ ಅವರ ‘ಆಯ್ದ’ ಖಾಸಗಿ ಸಂದೇಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದು- ಇವೆಲ್ಲವೂ ಭಾರತವನ್ನು ಅಸ್ಥಿರಗೊಳಿಸುವ ಅಂತಾರಾಷ್ಟ್ರೀಯ ಪಿತೂರಿಯ ಭಾಗವಾಗಿ ಈ ಯುವಕರನ್ನು ಚಿತ್ರಿಸುವ ಪ್ರಯತ್ನಗಳಾಗಿವೆ ಎಂದು ಅವರು ಕಿಡಿಕಾರಿದರು.

ಈ ಕ್ರಮಗಳು, ರಾಷ್ಟ್ರದ ಅತ್ಯಂತ ತುರ್ತಿನ, ಒತ್ತಡದ ಅಗತ್ಯಗಳಾದ ರೈತರ ಬಿಕ್ಕಟ್ಟು, ಜೀವವೈವಿಧ್ಯದ ಏರುಪೇರು ಮತ್ತು ಕೋಟ್ಯಂತರ ಜನರ ಆರ್ಥಿಕ ಅಭದ್ರತೆಯಂತಹ ವಿಷಯಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸುವ ಗುರಿಯನ್ನು ಹೊಂದಿವೆ. ಈ ಸಮಸ್ಯೆಗಳನ್ನು ನಿಭಾಯಿಸಲು ತನ್ನ ಎಲ್ಲ ಗಮನವನ್ನು ಕೇಂದ್ರೀಕರಿಸುವ ಬದಲು, ಸರ್ಕಾರವು ಪಿತೂರಿ ಮತ್ತು ಭಯೋತ್ಪಾದನೆಯ ಸುಳ್ಳು ನೆರೇಷನ್‌ಗಳನ್ನು ಸಿದ್ಧಪಡಿಸುತ್ತಿದೆ ಎಂದು ಸಾಲ್ಡಾನಾ ಹೇಳಿದ್ದಾರೆ.

ಈಗ ಟಾರ್ಗೆಟ್ ಮಾಡಲ್ಪಟ್ಟ ಹಲವು ಯುವಜನರು ಅಥವಾ ಸಾಮಾಜಿಕ ಮತ್ತು ಪರಿಸರೀಯ ವಿಷಯಗಳಲ್ಲಿ ಭಾಗಿಯಾಗಿರುವ ಹತ್ತಾರು ಇತರ ಲಕ್ಷಾಂತರ ಯುವಕರ ಕೆಲಸ/ಪಾತ್ರಗಳಲ್ಲಿ ದೇಶದ್ರೋಹ ಅನ್ನುವಂಥದ್ದು ಏನೂ ಇಲ್ಲ. ತಮ್ಮ ಸಾಮೂಹಿಕ ಭವಿಷ್ಯದ ಬಗ್ಗೆ ಗಮನಹರಿಸಿದ ಕಾರಣ, ದೇಶದ ಭವಿಷ್ಯದ ಬಗ್ಗೆ ಪ್ರಭುತ್ವಕ್ಕೆ ಸವಾಲು ಹಾಕುವುದು ದೇಶದ್ರೋಹದ ಕಾರ್ಯವಲ್ಲ ಎಂದು ಅವರು ತಿಳಿಸಿದ್ದಾರೆ.

ದಿಶಾ ರವಿ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಶಾಂತನು ಮುಲುಕ್ ಮತ್ತು ನಿಕಿತಾ ಜಾಕೋಬ್ ವಿರುದ್ಧದ ವಾರಂಟ್‌ಗಳನ್ನು ಸಹ ಕೈಬಿಡಬೇಕು ಮತ್ತು ರೈತರ ಆಂದೋಲನ ಮತ್ತು ಸಾಮಾಜಿಕ ಮತ್ತು ಪರಿಸರ ನ್ಯಾಯದ ಕಾರಣಗಳನ್ನು ಬೆಂಬಲಿಸುತ್ತಿರುವ ಯುವಕರ ವಿರುದ್ಧ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಶಿಶ್ ಕೊಠಾರಿ, ಮೀರಾ ಸಂಗಮಿತ್ರ ಮತ್ತು ಕವಿತಾ ಶ್ರೀವತ್ಸವ ಭಾಗವಹಿಸಿದ್ದರು.


ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...