Homeಮುಖಪುಟಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

- Advertisement -
- Advertisement -

ಭಾರತೀಯ ಪ್ರಭುತ್ವದಿಂದ ಯುವ ಪರಿಸರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಯು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತದ ಪ್ರಜಾತಾಂತ್ರಿಕ ಹಕ್ಕನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕುವ ಟ್ರೆಂಡ್‌ನ ಸಂಕೇತವಾಗಿದೆ. ಇದರ ಬದಲು ಸರ್ಕಾರ ಮಾತುಕತೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಜವಾದ ಪ್ರಜಾತಾಂತ್ರಿಕ ನಿಲುವನ್ನು ಪ್ರದರ್ಶಿಸಬೇಕಿತ್ತು ಎಂದು ಲಿಯೋ ಎಫ್. ಸಾಲ್ಡಾನಾ ತಿಳಿಸಿದ್ದಾರೆ.

ಜನರ ಚಳುವಳಿಗಳ ರಾಷ್ಟ್ರೀಯ ಒಕ್ಕೂಟ, ಭಾರತದಲ್ಲಿ ಪರಿಸರ ನ್ಯಾಯಕ್ಕಾಗಿ ಒಕ್ಕೂಟ ಮತ್ತು
ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ದೇಶದ ಯುವಜನರ ಮಾತು ಆಲಿಸುವ ಬದಲು, 22 ವರ್ಷದ ಯುವ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನಡೆಸಿಕೊಂಡ ರೀತಿ, ಕಾನೂನಿನ ನಿಯಮಗಳನ್ನು ಉಲ್ಲಂಘಿಸಲು ಮತ್ತು ಸ್ಥಾಪಿತ ಕಾರ್ಯವಿಧಾನದ ಪ್ರಕ್ರಿಯೆಗಳನ್ನು ಉಲ್ಲಂಘಿಸಲು ಬಯಸುವ ಪ್ರಭುತ್ವದ ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ” ಎಂದು ಸಾಲ್ಡಾನಾ ಆರೋಪಿಸಿದ್ದಾರೆ.

ನಿಕಿತಾ ಜಾಕೋಬ್ ಮತ್ತು ಶಾಂತನ್ ಮುಲುಕ್ ಎಂಬ ಇಬ್ಬರು ಯುವಕರ ವಿರುದ್ಧ ಹೊರಡಿಸಲಾದ ವಾರಂಟ್‌ಗಳು ಮತ್ತು ದಿಶಾ ಅವರ ‘ಆಯ್ದ’ ಖಾಸಗಿ ಸಂದೇಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದು- ಇವೆಲ್ಲವೂ ಭಾರತವನ್ನು ಅಸ್ಥಿರಗೊಳಿಸುವ ಅಂತಾರಾಷ್ಟ್ರೀಯ ಪಿತೂರಿಯ ಭಾಗವಾಗಿ ಈ ಯುವಕರನ್ನು ಚಿತ್ರಿಸುವ ಪ್ರಯತ್ನಗಳಾಗಿವೆ ಎಂದು ಅವರು ಕಿಡಿಕಾರಿದರು.

ಈ ಕ್ರಮಗಳು, ರಾಷ್ಟ್ರದ ಅತ್ಯಂತ ತುರ್ತಿನ, ಒತ್ತಡದ ಅಗತ್ಯಗಳಾದ ರೈತರ ಬಿಕ್ಕಟ್ಟು, ಜೀವವೈವಿಧ್ಯದ ಏರುಪೇರು ಮತ್ತು ಕೋಟ್ಯಂತರ ಜನರ ಆರ್ಥಿಕ ಅಭದ್ರತೆಯಂತಹ ವಿಷಯಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸುವ ಗುರಿಯನ್ನು ಹೊಂದಿವೆ. ಈ ಸಮಸ್ಯೆಗಳನ್ನು ನಿಭಾಯಿಸಲು ತನ್ನ ಎಲ್ಲ ಗಮನವನ್ನು ಕೇಂದ್ರೀಕರಿಸುವ ಬದಲು, ಸರ್ಕಾರವು ಪಿತೂರಿ ಮತ್ತು ಭಯೋತ್ಪಾದನೆಯ ಸುಳ್ಳು ನೆರೇಷನ್‌ಗಳನ್ನು ಸಿದ್ಧಪಡಿಸುತ್ತಿದೆ ಎಂದು ಸಾಲ್ಡಾನಾ ಹೇಳಿದ್ದಾರೆ.

ಈಗ ಟಾರ್ಗೆಟ್ ಮಾಡಲ್ಪಟ್ಟ ಹಲವು ಯುವಜನರು ಅಥವಾ ಸಾಮಾಜಿಕ ಮತ್ತು ಪರಿಸರೀಯ ವಿಷಯಗಳಲ್ಲಿ ಭಾಗಿಯಾಗಿರುವ ಹತ್ತಾರು ಇತರ ಲಕ್ಷಾಂತರ ಯುವಕರ ಕೆಲಸ/ಪಾತ್ರಗಳಲ್ಲಿ ದೇಶದ್ರೋಹ ಅನ್ನುವಂಥದ್ದು ಏನೂ ಇಲ್ಲ. ತಮ್ಮ ಸಾಮೂಹಿಕ ಭವಿಷ್ಯದ ಬಗ್ಗೆ ಗಮನಹರಿಸಿದ ಕಾರಣ, ದೇಶದ ಭವಿಷ್ಯದ ಬಗ್ಗೆ ಪ್ರಭುತ್ವಕ್ಕೆ ಸವಾಲು ಹಾಕುವುದು ದೇಶದ್ರೋಹದ ಕಾರ್ಯವಲ್ಲ ಎಂದು ಅವರು ತಿಳಿಸಿದ್ದಾರೆ.

ದಿಶಾ ರವಿ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಶಾಂತನು ಮುಲುಕ್ ಮತ್ತು ನಿಕಿತಾ ಜಾಕೋಬ್ ವಿರುದ್ಧದ ವಾರಂಟ್‌ಗಳನ್ನು ಸಹ ಕೈಬಿಡಬೇಕು ಮತ್ತು ರೈತರ ಆಂದೋಲನ ಮತ್ತು ಸಾಮಾಜಿಕ ಮತ್ತು ಪರಿಸರ ನ್ಯಾಯದ ಕಾರಣಗಳನ್ನು ಬೆಂಬಲಿಸುತ್ತಿರುವ ಯುವಕರ ವಿರುದ್ಧ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಶಿಶ್ ಕೊಠಾರಿ, ಮೀರಾ ಸಂಗಮಿತ್ರ ಮತ್ತು ಕವಿತಾ ಶ್ರೀವತ್ಸವ ಭಾಗವಹಿಸಿದ್ದರು.


ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...