Homeಮುಖಪುಟಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

- Advertisement -
- Advertisement -

ಭಾರತೀಯ ಪ್ರಭುತ್ವದಿಂದ ಯುವ ಪರಿಸರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಯು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತದ ಪ್ರಜಾತಾಂತ್ರಿಕ ಹಕ್ಕನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕುವ ಟ್ರೆಂಡ್‌ನ ಸಂಕೇತವಾಗಿದೆ. ಇದರ ಬದಲು ಸರ್ಕಾರ ಮಾತುಕತೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಜವಾದ ಪ್ರಜಾತಾಂತ್ರಿಕ ನಿಲುವನ್ನು ಪ್ರದರ್ಶಿಸಬೇಕಿತ್ತು ಎಂದು ಲಿಯೋ ಎಫ್. ಸಾಲ್ಡಾನಾ ತಿಳಿಸಿದ್ದಾರೆ.

ಜನರ ಚಳುವಳಿಗಳ ರಾಷ್ಟ್ರೀಯ ಒಕ್ಕೂಟ, ಭಾರತದಲ್ಲಿ ಪರಿಸರ ನ್ಯಾಯಕ್ಕಾಗಿ ಒಕ್ಕೂಟ ಮತ್ತು
ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ದೇಶದ ಯುವಜನರ ಮಾತು ಆಲಿಸುವ ಬದಲು, 22 ವರ್ಷದ ಯುವ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನಡೆಸಿಕೊಂಡ ರೀತಿ, ಕಾನೂನಿನ ನಿಯಮಗಳನ್ನು ಉಲ್ಲಂಘಿಸಲು ಮತ್ತು ಸ್ಥಾಪಿತ ಕಾರ್ಯವಿಧಾನದ ಪ್ರಕ್ರಿಯೆಗಳನ್ನು ಉಲ್ಲಂಘಿಸಲು ಬಯಸುವ ಪ್ರಭುತ್ವದ ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ” ಎಂದು ಸಾಲ್ಡಾನಾ ಆರೋಪಿಸಿದ್ದಾರೆ.

ನಿಕಿತಾ ಜಾಕೋಬ್ ಮತ್ತು ಶಾಂತನ್ ಮುಲುಕ್ ಎಂಬ ಇಬ್ಬರು ಯುವಕರ ವಿರುದ್ಧ ಹೊರಡಿಸಲಾದ ವಾರಂಟ್‌ಗಳು ಮತ್ತು ದಿಶಾ ಅವರ ‘ಆಯ್ದ’ ಖಾಸಗಿ ಸಂದೇಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದು- ಇವೆಲ್ಲವೂ ಭಾರತವನ್ನು ಅಸ್ಥಿರಗೊಳಿಸುವ ಅಂತಾರಾಷ್ಟ್ರೀಯ ಪಿತೂರಿಯ ಭಾಗವಾಗಿ ಈ ಯುವಕರನ್ನು ಚಿತ್ರಿಸುವ ಪ್ರಯತ್ನಗಳಾಗಿವೆ ಎಂದು ಅವರು ಕಿಡಿಕಾರಿದರು.

ಈ ಕ್ರಮಗಳು, ರಾಷ್ಟ್ರದ ಅತ್ಯಂತ ತುರ್ತಿನ, ಒತ್ತಡದ ಅಗತ್ಯಗಳಾದ ರೈತರ ಬಿಕ್ಕಟ್ಟು, ಜೀವವೈವಿಧ್ಯದ ಏರುಪೇರು ಮತ್ತು ಕೋಟ್ಯಂತರ ಜನರ ಆರ್ಥಿಕ ಅಭದ್ರತೆಯಂತಹ ವಿಷಯಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸುವ ಗುರಿಯನ್ನು ಹೊಂದಿವೆ. ಈ ಸಮಸ್ಯೆಗಳನ್ನು ನಿಭಾಯಿಸಲು ತನ್ನ ಎಲ್ಲ ಗಮನವನ್ನು ಕೇಂದ್ರೀಕರಿಸುವ ಬದಲು, ಸರ್ಕಾರವು ಪಿತೂರಿ ಮತ್ತು ಭಯೋತ್ಪಾದನೆಯ ಸುಳ್ಳು ನೆರೇಷನ್‌ಗಳನ್ನು ಸಿದ್ಧಪಡಿಸುತ್ತಿದೆ ಎಂದು ಸಾಲ್ಡಾನಾ ಹೇಳಿದ್ದಾರೆ.

ಈಗ ಟಾರ್ಗೆಟ್ ಮಾಡಲ್ಪಟ್ಟ ಹಲವು ಯುವಜನರು ಅಥವಾ ಸಾಮಾಜಿಕ ಮತ್ತು ಪರಿಸರೀಯ ವಿಷಯಗಳಲ್ಲಿ ಭಾಗಿಯಾಗಿರುವ ಹತ್ತಾರು ಇತರ ಲಕ್ಷಾಂತರ ಯುವಕರ ಕೆಲಸ/ಪಾತ್ರಗಳಲ್ಲಿ ದೇಶದ್ರೋಹ ಅನ್ನುವಂಥದ್ದು ಏನೂ ಇಲ್ಲ. ತಮ್ಮ ಸಾಮೂಹಿಕ ಭವಿಷ್ಯದ ಬಗ್ಗೆ ಗಮನಹರಿಸಿದ ಕಾರಣ, ದೇಶದ ಭವಿಷ್ಯದ ಬಗ್ಗೆ ಪ್ರಭುತ್ವಕ್ಕೆ ಸವಾಲು ಹಾಕುವುದು ದೇಶದ್ರೋಹದ ಕಾರ್ಯವಲ್ಲ ಎಂದು ಅವರು ತಿಳಿಸಿದ್ದಾರೆ.

ದಿಶಾ ರವಿ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಶಾಂತನು ಮುಲುಕ್ ಮತ್ತು ನಿಕಿತಾ ಜಾಕೋಬ್ ವಿರುದ್ಧದ ವಾರಂಟ್‌ಗಳನ್ನು ಸಹ ಕೈಬಿಡಬೇಕು ಮತ್ತು ರೈತರ ಆಂದೋಲನ ಮತ್ತು ಸಾಮಾಜಿಕ ಮತ್ತು ಪರಿಸರ ನ್ಯಾಯದ ಕಾರಣಗಳನ್ನು ಬೆಂಬಲಿಸುತ್ತಿರುವ ಯುವಕರ ವಿರುದ್ಧ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಶಿಶ್ ಕೊಠಾರಿ, ಮೀರಾ ಸಂಗಮಿತ್ರ ಮತ್ತು ಕವಿತಾ ಶ್ರೀವತ್ಸವ ಭಾಗವಹಿಸಿದ್ದರು.


ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...