Homeಮುಖಪುಟಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

- Advertisement -
- Advertisement -

ಭಾರತೀಯ ಪ್ರಭುತ್ವದಿಂದ ಯುವ ಪರಿಸರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಯು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತದ ಪ್ರಜಾತಾಂತ್ರಿಕ ಹಕ್ಕನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕುವ ಟ್ರೆಂಡ್‌ನ ಸಂಕೇತವಾಗಿದೆ. ಇದರ ಬದಲು ಸರ್ಕಾರ ಮಾತುಕತೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಜವಾದ ಪ್ರಜಾತಾಂತ್ರಿಕ ನಿಲುವನ್ನು ಪ್ರದರ್ಶಿಸಬೇಕಿತ್ತು ಎಂದು ಲಿಯೋ ಎಫ್. ಸಾಲ್ಡಾನಾ ತಿಳಿಸಿದ್ದಾರೆ.

ಜನರ ಚಳುವಳಿಗಳ ರಾಷ್ಟ್ರೀಯ ಒಕ್ಕೂಟ, ಭಾರತದಲ್ಲಿ ಪರಿಸರ ನ್ಯಾಯಕ್ಕಾಗಿ ಒಕ್ಕೂಟ ಮತ್ತು
ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ದೇಶದ ಯುವಜನರ ಮಾತು ಆಲಿಸುವ ಬದಲು, 22 ವರ್ಷದ ಯುವ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನಡೆಸಿಕೊಂಡ ರೀತಿ, ಕಾನೂನಿನ ನಿಯಮಗಳನ್ನು ಉಲ್ಲಂಘಿಸಲು ಮತ್ತು ಸ್ಥಾಪಿತ ಕಾರ್ಯವಿಧಾನದ ಪ್ರಕ್ರಿಯೆಗಳನ್ನು ಉಲ್ಲಂಘಿಸಲು ಬಯಸುವ ಪ್ರಭುತ್ವದ ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ” ಎಂದು ಸಾಲ್ಡಾನಾ ಆರೋಪಿಸಿದ್ದಾರೆ.

ನಿಕಿತಾ ಜಾಕೋಬ್ ಮತ್ತು ಶಾಂತನ್ ಮುಲುಕ್ ಎಂಬ ಇಬ್ಬರು ಯುವಕರ ವಿರುದ್ಧ ಹೊರಡಿಸಲಾದ ವಾರಂಟ್‌ಗಳು ಮತ್ತು ದಿಶಾ ಅವರ ‘ಆಯ್ದ’ ಖಾಸಗಿ ಸಂದೇಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದು- ಇವೆಲ್ಲವೂ ಭಾರತವನ್ನು ಅಸ್ಥಿರಗೊಳಿಸುವ ಅಂತಾರಾಷ್ಟ್ರೀಯ ಪಿತೂರಿಯ ಭಾಗವಾಗಿ ಈ ಯುವಕರನ್ನು ಚಿತ್ರಿಸುವ ಪ್ರಯತ್ನಗಳಾಗಿವೆ ಎಂದು ಅವರು ಕಿಡಿಕಾರಿದರು.

ಈ ಕ್ರಮಗಳು, ರಾಷ್ಟ್ರದ ಅತ್ಯಂತ ತುರ್ತಿನ, ಒತ್ತಡದ ಅಗತ್ಯಗಳಾದ ರೈತರ ಬಿಕ್ಕಟ್ಟು, ಜೀವವೈವಿಧ್ಯದ ಏರುಪೇರು ಮತ್ತು ಕೋಟ್ಯಂತರ ಜನರ ಆರ್ಥಿಕ ಅಭದ್ರತೆಯಂತಹ ವಿಷಯಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸುವ ಗುರಿಯನ್ನು ಹೊಂದಿವೆ. ಈ ಸಮಸ್ಯೆಗಳನ್ನು ನಿಭಾಯಿಸಲು ತನ್ನ ಎಲ್ಲ ಗಮನವನ್ನು ಕೇಂದ್ರೀಕರಿಸುವ ಬದಲು, ಸರ್ಕಾರವು ಪಿತೂರಿ ಮತ್ತು ಭಯೋತ್ಪಾದನೆಯ ಸುಳ್ಳು ನೆರೇಷನ್‌ಗಳನ್ನು ಸಿದ್ಧಪಡಿಸುತ್ತಿದೆ ಎಂದು ಸಾಲ್ಡಾನಾ ಹೇಳಿದ್ದಾರೆ.

ಈಗ ಟಾರ್ಗೆಟ್ ಮಾಡಲ್ಪಟ್ಟ ಹಲವು ಯುವಜನರು ಅಥವಾ ಸಾಮಾಜಿಕ ಮತ್ತು ಪರಿಸರೀಯ ವಿಷಯಗಳಲ್ಲಿ ಭಾಗಿಯಾಗಿರುವ ಹತ್ತಾರು ಇತರ ಲಕ್ಷಾಂತರ ಯುವಕರ ಕೆಲಸ/ಪಾತ್ರಗಳಲ್ಲಿ ದೇಶದ್ರೋಹ ಅನ್ನುವಂಥದ್ದು ಏನೂ ಇಲ್ಲ. ತಮ್ಮ ಸಾಮೂಹಿಕ ಭವಿಷ್ಯದ ಬಗ್ಗೆ ಗಮನಹರಿಸಿದ ಕಾರಣ, ದೇಶದ ಭವಿಷ್ಯದ ಬಗ್ಗೆ ಪ್ರಭುತ್ವಕ್ಕೆ ಸವಾಲು ಹಾಕುವುದು ದೇಶದ್ರೋಹದ ಕಾರ್ಯವಲ್ಲ ಎಂದು ಅವರು ತಿಳಿಸಿದ್ದಾರೆ.

ದಿಶಾ ರವಿ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಶಾಂತನು ಮುಲುಕ್ ಮತ್ತು ನಿಕಿತಾ ಜಾಕೋಬ್ ವಿರುದ್ಧದ ವಾರಂಟ್‌ಗಳನ್ನು ಸಹ ಕೈಬಿಡಬೇಕು ಮತ್ತು ರೈತರ ಆಂದೋಲನ ಮತ್ತು ಸಾಮಾಜಿಕ ಮತ್ತು ಪರಿಸರ ನ್ಯಾಯದ ಕಾರಣಗಳನ್ನು ಬೆಂಬಲಿಸುತ್ತಿರುವ ಯುವಕರ ವಿರುದ್ಧ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಶಿಶ್ ಕೊಠಾರಿ, ಮೀರಾ ಸಂಗಮಿತ್ರ ಮತ್ತು ಕವಿತಾ ಶ್ರೀವತ್ಸವ ಭಾಗವಹಿಸಿದ್ದರು.


ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...