Homeಮುಖಪುಟಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

- Advertisement -
- Advertisement -

ಭಾರತೀಯ ಪ್ರಭುತ್ವದಿಂದ ಯುವ ಪರಿಸರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಯು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತದ ಪ್ರಜಾತಾಂತ್ರಿಕ ಹಕ್ಕನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕುವ ಟ್ರೆಂಡ್‌ನ ಸಂಕೇತವಾಗಿದೆ. ಇದರ ಬದಲು ಸರ್ಕಾರ ಮಾತುಕತೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಜವಾದ ಪ್ರಜಾತಾಂತ್ರಿಕ ನಿಲುವನ್ನು ಪ್ರದರ್ಶಿಸಬೇಕಿತ್ತು ಎಂದು ಲಿಯೋ ಎಫ್. ಸಾಲ್ಡಾನಾ ತಿಳಿಸಿದ್ದಾರೆ.

ಜನರ ಚಳುವಳಿಗಳ ರಾಷ್ಟ್ರೀಯ ಒಕ್ಕೂಟ, ಭಾರತದಲ್ಲಿ ಪರಿಸರ ನ್ಯಾಯಕ್ಕಾಗಿ ಒಕ್ಕೂಟ ಮತ್ತು
ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ವತಿಯಿಂದ ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ದೇಶದ ಯುವಜನರ ಮಾತು ಆಲಿಸುವ ಬದಲು, 22 ವರ್ಷದ ಯುವ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ನಡೆಸಿಕೊಂಡ ರೀತಿ, ಕಾನೂನಿನ ನಿಯಮಗಳನ್ನು ಉಲ್ಲಂಘಿಸಲು ಮತ್ತು ಸ್ಥಾಪಿತ ಕಾರ್ಯವಿಧಾನದ ಪ್ರಕ್ರಿಯೆಗಳನ್ನು ಉಲ್ಲಂಘಿಸಲು ಬಯಸುವ ಪ್ರಭುತ್ವದ ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ” ಎಂದು ಸಾಲ್ಡಾನಾ ಆರೋಪಿಸಿದ್ದಾರೆ.

ನಿಕಿತಾ ಜಾಕೋಬ್ ಮತ್ತು ಶಾಂತನ್ ಮುಲುಕ್ ಎಂಬ ಇಬ್ಬರು ಯುವಕರ ವಿರುದ್ಧ ಹೊರಡಿಸಲಾದ ವಾರಂಟ್‌ಗಳು ಮತ್ತು ದಿಶಾ ಅವರ ‘ಆಯ್ದ’ ಖಾಸಗಿ ಸಂದೇಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದು- ಇವೆಲ್ಲವೂ ಭಾರತವನ್ನು ಅಸ್ಥಿರಗೊಳಿಸುವ ಅಂತಾರಾಷ್ಟ್ರೀಯ ಪಿತೂರಿಯ ಭಾಗವಾಗಿ ಈ ಯುವಕರನ್ನು ಚಿತ್ರಿಸುವ ಪ್ರಯತ್ನಗಳಾಗಿವೆ ಎಂದು ಅವರು ಕಿಡಿಕಾರಿದರು.

ಈ ಕ್ರಮಗಳು, ರಾಷ್ಟ್ರದ ಅತ್ಯಂತ ತುರ್ತಿನ, ಒತ್ತಡದ ಅಗತ್ಯಗಳಾದ ರೈತರ ಬಿಕ್ಕಟ್ಟು, ಜೀವವೈವಿಧ್ಯದ ಏರುಪೇರು ಮತ್ತು ಕೋಟ್ಯಂತರ ಜನರ ಆರ್ಥಿಕ ಅಭದ್ರತೆಯಂತಹ ವಿಷಯಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ತಿರುಗಿಸುವ ಗುರಿಯನ್ನು ಹೊಂದಿವೆ. ಈ ಸಮಸ್ಯೆಗಳನ್ನು ನಿಭಾಯಿಸಲು ತನ್ನ ಎಲ್ಲ ಗಮನವನ್ನು ಕೇಂದ್ರೀಕರಿಸುವ ಬದಲು, ಸರ್ಕಾರವು ಪಿತೂರಿ ಮತ್ತು ಭಯೋತ್ಪಾದನೆಯ ಸುಳ್ಳು ನೆರೇಷನ್‌ಗಳನ್ನು ಸಿದ್ಧಪಡಿಸುತ್ತಿದೆ ಎಂದು ಸಾಲ್ಡಾನಾ ಹೇಳಿದ್ದಾರೆ.

ಈಗ ಟಾರ್ಗೆಟ್ ಮಾಡಲ್ಪಟ್ಟ ಹಲವು ಯುವಜನರು ಅಥವಾ ಸಾಮಾಜಿಕ ಮತ್ತು ಪರಿಸರೀಯ ವಿಷಯಗಳಲ್ಲಿ ಭಾಗಿಯಾಗಿರುವ ಹತ್ತಾರು ಇತರ ಲಕ್ಷಾಂತರ ಯುವಕರ ಕೆಲಸ/ಪಾತ್ರಗಳಲ್ಲಿ ದೇಶದ್ರೋಹ ಅನ್ನುವಂಥದ್ದು ಏನೂ ಇಲ್ಲ. ತಮ್ಮ ಸಾಮೂಹಿಕ ಭವಿಷ್ಯದ ಬಗ್ಗೆ ಗಮನಹರಿಸಿದ ಕಾರಣ, ದೇಶದ ಭವಿಷ್ಯದ ಬಗ್ಗೆ ಪ್ರಭುತ್ವಕ್ಕೆ ಸವಾಲು ಹಾಕುವುದು ದೇಶದ್ರೋಹದ ಕಾರ್ಯವಲ್ಲ ಎಂದು ಅವರು ತಿಳಿಸಿದ್ದಾರೆ.

ದಿಶಾ ರವಿ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಶಾಂತನು ಮುಲುಕ್ ಮತ್ತು ನಿಕಿತಾ ಜಾಕೋಬ್ ವಿರುದ್ಧದ ವಾರಂಟ್‌ಗಳನ್ನು ಸಹ ಕೈಬಿಡಬೇಕು ಮತ್ತು ರೈತರ ಆಂದೋಲನ ಮತ್ತು ಸಾಮಾಜಿಕ ಮತ್ತು ಪರಿಸರ ನ್ಯಾಯದ ಕಾರಣಗಳನ್ನು ಬೆಂಬಲಿಸುತ್ತಿರುವ ಯುವಕರ ವಿರುದ್ಧ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಆಶಿಶ್ ಕೊಠಾರಿ, ಮೀರಾ ಸಂಗಮಿತ್ರ ಮತ್ತು ಕವಿತಾ ಶ್ರೀವತ್ಸವ ಭಾಗವಹಿಸಿದ್ದರು.


ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...