Homeಮುಖಪುಟಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

- Advertisement -
- Advertisement -

ಅನೈತಿಕ ಸರ್ಕಾರದಲ್ಲಿ ಸಂವಿಧಾನಾತ್ಮಕವಾಗಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಯಾವುದೋ ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಬೇಕು ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಿವಿಮಾತು ಹೇಳಿದ್ದಾರೆ.

ಹಿಂದೆ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ಇರಲಿಲ್ಲ. ಆದರೆ ಈಗ ಯಾರಾದರೂ ಮುಟ್ಟಿದರೆ ವಾಪಸ್ ಒಂದಕ್ಕೆ ಎರಡು ತೆಗೆದುಬಿಡುತ್ತೇವೆ, ಅಷ್ಟರಮಟ್ಟಿಗೆ ಬಿಜೆಪಿ ಬೆಳೆದಿದೆ ಎಂದು ನಿನ್ನೆ ಸಚಿವ ಈಶ್ವರಪ್ಪನವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, “ಈಗ ಬಿಜೆಪಿ ಬೃಹತ್ ಆಗಿ ಬೆಳೆದಿದೆ. ಹಿಂದೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಕೇವಲ ಶಾಂತವಾಗಿರಿ ಎನ್ನುತ್ತಿದ್ದಾರೆ. ಆದರೆ ಈಗ ಒಂದಕ್ಕೆ ಎರಡು ತೆಗೆದುಬಿಡಿ ಎನ್ನುವಷ್ಟರ ಮಟ್ಟಿಗೆ ಬೆಳೆದಿದ್ದೇವೆ” ಎಂದು ಹೇಳಿದ್ದರು.

ಇದಕ್ಕೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹೆಚ್.ಸಿ.ಮಹದೇವಪ್ಪನವರು, “ನಿಮ್ಮ ಪಕ್ಷದ ಅಜ್ಞಾನಿಗಳೆಲ್ಲಾ ಸೇರಿಕೊಂಡು ಜನ ಸಾಮಾನ್ಯರ ಬದುಕಲ್ಲಿ ಉಂಟು ಮಾಡಿರುವ ಸಂಕಷ್ಟಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷದ ಬಳಿ ಸರಿಯಾದ ಆಡಳಿತಾತ್ಮಕ ಸಲಹೆಗಳನ್ನು ಪಡೆಯಿರಿ. ಕಾರಣ ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಹೀಗೆ ರೌಡಿಗಳಂತೆ ಮಾತನಾಡುವುದು ಮತ್ತು ದ್ವೇಷ ಹಬ್ಬಿಸಿ ಸಮಾಜವನ್ನು ಹಾಳು ಮಾಡುವುದು ಬಿಟ್ಟರೆ ಮತ್ತೇನೂ ಬರುವುದಿಲ್ಲ ಎಂಬುದು ನಮಗೆ ಗೊತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

ವಾಸ್ತವವಾಗಿ ಹೇಳುವುದಾದರೆ ಕರೋನಾ ಸಂದರ್ಭದಲ್ಲಿ ನಿಮ್ಮಂತಹ ಅವಿವೇಕಿಗಳ ಆಡಳಿತ ವೈಫಲ್ಯದಿಂದಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಈ ರಾಜ್ಯದ ಎಲ್ಲಾ ಪಕ್ಷಕ್ಕೆ ಸೇರಿದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದು, ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ್ತು ಜಾತ್ಯಾತೀತವಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹಿಂದೂಗಳ ರಕ್ಷಣೆ ಎಂದು ಗಂಟಲು ಹರಿದುಕೊಳ್ಳುತ್ತಿದ್ದ ನಿಮಗೆ ಅವರ ರಕ್ಷಣೆ ಇರಲಿ ಒಂದು ಆಕ್ಸಿಜನ್ ಬೆಡ್ ಹೊಂದಿಸಲು ಆಗಲಿಲ್ಲ ನಿಮ್ಮ ಯೋಗ್ಯತೆಗೆ. ನನ್ನ ಪ್ರಕಾರ ಆಡಳಿತಾತ್ಮಕವಾಗಿ ಅಂದೇ ನಿಮ್ಮ ಸರ್ಕಾರ ಸತ್ತು ಹೋಗಿದೆ ಎಂದು ಮಹಾದೇವಪ್ಪ ಕಿಡಿಕಾರಿದ್ದಾರೆ.

ಜನರ ದೈನಂದಿನ ಬದುಕಿನ ಕಷ್ಟಗಳ ಮುಂದೆ ನಿಮ್ಮ ಈ ದ್ವೇಷ ಹರಡುವ ಮಾತುಗಳಿಗೆ, “ಒಂದು ಕೊಟ್ಟರೆ, ಎರಡು ಕೊಡುತ್ತೇವೆ,” ಎಂಬ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಏಕೆಂದರೆ ಜನ ಸಾಮಾನ್ಯರು ಮತ್ತು ಪಕ್ಷದ ಕಾರ್ಯಕರ್ತರು ನೀವು ಹೇಳಿದಂತೆ ಹೊಡಿ ಬಡಿ ಜಗಳ ಮತ್ತು ಹಿಂಸಾಚಾರವನ್ನು ಎಂದಿಗೂ ಇಷ್ಟಪಡುವುದಿಲ್ಲ. ಇದೆಲ್ಲಾ ನಿಮ್ಮಂತಹ ಹುಳಿತೇಗಿನ ಮಂದಿಯ ಸೊಕ್ಕಿನ ಪ್ರಲಾಪವಷ್ಟೇ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಜನ ಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ನೀಡುವುದಷ್ಟೇ ನಿಮಗೆ ಉಳಿದಿರುವ ಅನಿವಾರ್ಯ ಆಯ್ಕೆಯಾಗಿದೆ ಎಂಬುದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ನೆಟ್ಟಗೆ ಕಾರ್ಯ ನಿರ್ವಹಿಸಿ, ಇಲ್ಲವೇ ರಾಜೀನಾಮೆ ಕೊಟ್ಟು ಹೊರಡಿ ಎಂದು ಅವರು ಹೇಳಿದ್ದಾರೆ.

ಸದಾ ಅಸಂವಿಧಾನಿಕವಾಗಿ ಮಾತನಾಡುವ ಮತ್ತು ಸಾರ್ವಜನಿಕ ಜೀವನದಲ್ಲಿ ಇರಲು ಲಾಯಕ್ಕಿಲ್ಲದ ಇಂತಹವರ ರಾಜೀನಾಮೆಯನ್ನು ಪಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಈ ಮೂಲಕ ಆಗ್ರಹಿಸುತ್ತೇನೆ ಎಂದು ಮಹಾದೇವಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: SSLC Result | ಎಸ್‌ಎಸ್‌ಎಲ್‌ಸಿ ರಿಸಲ್ಟ್‌‌ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...