Homeಮುಖಪುಟಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಿ: ಸಚಿವ ಈಶ್ವರಪ್ಪನವರಿಗೆ ಹೆಚ್.ಸಿ.ಮಹದೇವಪ್ಪ ಕಿವಿಮಾತು

- Advertisement -
- Advertisement -

ಅನೈತಿಕ ಸರ್ಕಾರದಲ್ಲಿ ಸಂವಿಧಾನಾತ್ಮಕವಾಗಿ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪನವರು ಯಾವುದೋ ಬೀದಿ ರೌಡಿಯ ರೀತಿಯಲ್ಲಿ ಮಾತನಾಡುವುದನ್ನು ಬಿಡಬೇಕು ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಿವಿಮಾತು ಹೇಳಿದ್ದಾರೆ.

ಹಿಂದೆ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ಇರಲಿಲ್ಲ. ಆದರೆ ಈಗ ಯಾರಾದರೂ ಮುಟ್ಟಿದರೆ ವಾಪಸ್ ಒಂದಕ್ಕೆ ಎರಡು ತೆಗೆದುಬಿಡುತ್ತೇವೆ, ಅಷ್ಟರಮಟ್ಟಿಗೆ ಬಿಜೆಪಿ ಬೆಳೆದಿದೆ ಎಂದು ನಿನ್ನೆ ಸಚಿವ ಈಶ್ವರಪ್ಪನವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, “ಈಗ ಬಿಜೆಪಿ ಬೃಹತ್ ಆಗಿ ಬೆಳೆದಿದೆ. ಹಿಂದೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಕೇವಲ ಶಾಂತವಾಗಿರಿ ಎನ್ನುತ್ತಿದ್ದಾರೆ. ಆದರೆ ಈಗ ಒಂದಕ್ಕೆ ಎರಡು ತೆಗೆದುಬಿಡಿ ಎನ್ನುವಷ್ಟರ ಮಟ್ಟಿಗೆ ಬೆಳೆದಿದ್ದೇವೆ” ಎಂದು ಹೇಳಿದ್ದರು.

ಇದಕ್ಕೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹೆಚ್.ಸಿ.ಮಹದೇವಪ್ಪನವರು, “ನಿಮ್ಮ ಪಕ್ಷದ ಅಜ್ಞಾನಿಗಳೆಲ್ಲಾ ಸೇರಿಕೊಂಡು ಜನ ಸಾಮಾನ್ಯರ ಬದುಕಲ್ಲಿ ಉಂಟು ಮಾಡಿರುವ ಸಂಕಷ್ಟಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷದ ಬಳಿ ಸರಿಯಾದ ಆಡಳಿತಾತ್ಮಕ ಸಲಹೆಗಳನ್ನು ಪಡೆಯಿರಿ. ಕಾರಣ ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಹೀಗೆ ರೌಡಿಗಳಂತೆ ಮಾತನಾಡುವುದು ಮತ್ತು ದ್ವೇಷ ಹಬ್ಬಿಸಿ ಸಮಾಜವನ್ನು ಹಾಳು ಮಾಡುವುದು ಬಿಟ್ಟರೆ ಮತ್ತೇನೂ ಬರುವುದಿಲ್ಲ ಎಂಬುದು ನಮಗೆ ಗೊತ್ತಿದೆ” ಎಂದು ವ್ಯಂಗ್ಯವಾಡಿದ್ದಾರೆ.

ವಾಸ್ತವವಾಗಿ ಹೇಳುವುದಾದರೆ ಕರೋನಾ ಸಂದರ್ಭದಲ್ಲಿ ನಿಮ್ಮಂತಹ ಅವಿವೇಕಿಗಳ ಆಡಳಿತ ವೈಫಲ್ಯದಿಂದಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನದೇ ಈ ರಾಜ್ಯದ ಎಲ್ಲಾ ಪಕ್ಷಕ್ಕೆ ಸೇರಿದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದು, ಪಕ್ಷಾತೀತವಾಗಿ, ಧರ್ಮಾತೀತವಾಗಿ ಮತ್ತು ಜಾತ್ಯಾತೀತವಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹಿಂದೂಗಳ ರಕ್ಷಣೆ ಎಂದು ಗಂಟಲು ಹರಿದುಕೊಳ್ಳುತ್ತಿದ್ದ ನಿಮಗೆ ಅವರ ರಕ್ಷಣೆ ಇರಲಿ ಒಂದು ಆಕ್ಸಿಜನ್ ಬೆಡ್ ಹೊಂದಿಸಲು ಆಗಲಿಲ್ಲ ನಿಮ್ಮ ಯೋಗ್ಯತೆಗೆ. ನನ್ನ ಪ್ರಕಾರ ಆಡಳಿತಾತ್ಮಕವಾಗಿ ಅಂದೇ ನಿಮ್ಮ ಸರ್ಕಾರ ಸತ್ತು ಹೋಗಿದೆ ಎಂದು ಮಹಾದೇವಪ್ಪ ಕಿಡಿಕಾರಿದ್ದಾರೆ.

ಜನರ ದೈನಂದಿನ ಬದುಕಿನ ಕಷ್ಟಗಳ ಮುಂದೆ ನಿಮ್ಮ ಈ ದ್ವೇಷ ಹರಡುವ ಮಾತುಗಳಿಗೆ, “ಒಂದು ಕೊಟ್ಟರೆ, ಎರಡು ಕೊಡುತ್ತೇವೆ,” ಎಂಬ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಏಕೆಂದರೆ ಜನ ಸಾಮಾನ್ಯರು ಮತ್ತು ಪಕ್ಷದ ಕಾರ್ಯಕರ್ತರು ನೀವು ಹೇಳಿದಂತೆ ಹೊಡಿ ಬಡಿ ಜಗಳ ಮತ್ತು ಹಿಂಸಾಚಾರವನ್ನು ಎಂದಿಗೂ ಇಷ್ಟಪಡುವುದಿಲ್ಲ. ಇದೆಲ್ಲಾ ನಿಮ್ಮಂತಹ ಹುಳಿತೇಗಿನ ಮಂದಿಯ ಸೊಕ್ಕಿನ ಪ್ರಲಾಪವಷ್ಟೇ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಜನ ಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ನೀಡುವುದಷ್ಟೇ ನಿಮಗೆ ಉಳಿದಿರುವ ಅನಿವಾರ್ಯ ಆಯ್ಕೆಯಾಗಿದೆ ಎಂಬುದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ನೆಟ್ಟಗೆ ಕಾರ್ಯ ನಿರ್ವಹಿಸಿ, ಇಲ್ಲವೇ ರಾಜೀನಾಮೆ ಕೊಟ್ಟು ಹೊರಡಿ ಎಂದು ಅವರು ಹೇಳಿದ್ದಾರೆ.

ಸದಾ ಅಸಂವಿಧಾನಿಕವಾಗಿ ಮಾತನಾಡುವ ಮತ್ತು ಸಾರ್ವಜನಿಕ ಜೀವನದಲ್ಲಿ ಇರಲು ಲಾಯಕ್ಕಿಲ್ಲದ ಇಂತಹವರ ರಾಜೀನಾಮೆಯನ್ನು ಪಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಈ ಮೂಲಕ ಆಗ್ರಹಿಸುತ್ತೇನೆ ಎಂದು ಮಹಾದೇವಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: SSLC Result | ಎಸ್‌ಎಸ್‌ಎಲ್‌ಸಿ ರಿಸಲ್ಟ್‌‌ ಪ್ರಕಟ; ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....