Homeಕರ್ನಾಟಕಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತಾಡೋಕೆ ಬರಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆ ನೀವೇ ಕಳೆದುಕೊಳ್ಳುತ್ತೀರಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಆಕ್ರೋಶ ವ್ಯಕ್ತಪಡಿಸಿದರು. ಅವರು ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆದ ಟ್ರಾಕ್ಟರ್‌ ರ್‍ಯಾಲಿಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

“ಬಿಜೆಪಿ ನಾಯಕರು ರೈತರಿಗೆ ಪಾಕಿಸ್ತಾನ ಮತ್ತು ಖಾಲಿಸ್ತಾನಿಗಳ ಬೆಂಬಲ ಇದೆ ಎಂದು ಬೊಬ್ಬೆ ಇಡುತ್ತಿದ್ದಾರೆ. ರೈತರನ್ನೇ ದೇಶದ್ರೋಹಿಗಳು ಎಂದು ಕರೆಯುವ ಕಾಲ ಬಂದಿದೆ. ರೈತರಿಗೆ ಪಾಕಿಸ್ತಾನದ ನಂಟು ಎಂದು ಆರೋಪ ಹೊರಿಸುತ್ತಿದ್ದಾರೆ. ಇದು ಹೊಟ್ಟೆಗೆ ಅನ್ನ ತಿನ್ನುವ ಜನರು ಆಡುವ ಮಾತುಗಳೇ? ನಿಮಗೆ ಎಲ್ಲಿಲ್ಲದ ದುರಹಂಕಾರ ಬರಲು ಕಾರಣ ರೈತರೆ ಆಗಿದ್ದಾರೆ. ಉತ್ತು ಬಿತ್ತು ಅನ್ನ ಹಾಕಿದ್ದೀವಲ್ವಾ? ಅದಕ್ಕೆ ಹೀಗೆ ಮಾತನಾಡುತ್ತಿದ್ದೀರ” ಎಂದು ಕೃಷಿ ಸಚಿವ ಬಿ. ಸಿ. ಪಾಟಿಲ್ ಅವರ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರು ಜನಗಣರಾಜ್ಯೋತ್ಸವ: ರೈತ ಹೋರಾಟದ ಚಿತ್ರ ಸುದ್ದಿಗಳು

“ಇನ್ನೂ ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತನಾಲು ತಿಳಿದಿಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿಯ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆಯನ್ನು ನೀವೇ ಕಳೆದುಕೊಳ್ಳುತ್ತೀರಿ” ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇಂದು ದೇಶದಾದ್ಯಂತ ನಡೆದ ರೈತ ಹೋರಾಟದ ಬಗ್ಗೆ ಕೊಪ್ಪಳದಲ್ಲಿ ಹೇಳಿಕೆ ನೀಡಿದ್ದ ಸಚಿವ ಬಿ.ಸಿ. ಪಾಟೀಲ್, “ಇದು ರೈತರ ಪ್ರತಿಭಟನೆಯಲ್ಲ ಬದಲಿಗೆ ಭಯೋತ್ಪಾದಕರ ಕೃತ್ಯ. ಇದರ ಹಿಂದೆ ಖಾಲಿಸ್ತಾನಿಗಳು ಮತ್ತು ಕಾಂಗ್ರೆಸ್​ ಕೈವಾಡವಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕೃಷಿ ಸಚಿವ ಬಿ.ಸಿ ಪಾಟಿಲ್ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ನೋಡಿ

ಸಚಿವರ ಈ ಹೇಳಿಕೆಗೆ ರಾಜ್ಯದ ವಿವಿಧ ರೈತ ಸಂಘಟನೆಗಳು ಇಂದು ಒಂದಾಗಿ ಸಂಯುಕ್ತ ಹೋರಾಟ ಕರ್ನಾಟಕ ಹೆಸರಿನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಮಾವೇಶದಲ್ಲಿ ಕಿಡಿಕಾರಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​, “ರೈತ ಹೋರಾಟಗಾರರು ಸ್ವಾಭಿಮಾನಿಗಳು. ಆದರೆ, ಕೆಲ ಬಿಜೆಪಿ ನಾಯಕರು ರೈತರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿದ್ದಾರೆ. ರೈತ ಹೋರಾಟಗಾರರಿಗೆ ಖಾಲಿಸ್ತಾನಿಗಳ ಮತ್ತು ಪಾಕಿಸ್ತಾನಿಗಳ ಸಹಾಯವಿದೆ ಎಂದು ಆಧಾರವಿಲ್ಲದೆ ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

“ನಮ್ಮದೇ ಅನ್ನ ತಿಂದು ನಮ್ಮನ್ನೇ ಭಯೋತ್ಪಾದಕರು ಎಂದು ಹೀಯಾಳಿಸುತ್ತೀರಾ? ಮಾಜಿ ಪ್ರಧಾನಿ ದಿವಂಗತ ಇಂದಿರ ಗಾಂಧಿಯೂ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈಗ ಅದನ್ನೇ ನರೇಂದ್ರ ಮೋದಿಯೂ ಮಾಡ್ತುದ್ದಾರೆ. ರೈತರ ಕತ್ತು ಹಿಡಿದು ಹೊರಗೆ ತಳ್ಳೋ ದೃಶ್ಯಗಳನ್ನು ನಾವಿಂದು ನೋಡುತ್ತಿದ್ದೇವೆ. ಮೋದಿಯವರ ಮಂಕಿಬಾತ್ ನಲ್ಲಿ‌ ಒಂದು ಮಾತಾದಾರೂ ರೈತರ ಬಗ್ಗೆ ಮಾತಾಡಿದ್ದಾರಾ..?” ಎಂದು ಕೋಡಿಹಳ್ಳಿ ಚಂದ್ರಶೇಕರ್​ ಕಿಡಿಕಾರಿದರು.

“ಈ ಸರ್ವಾಧಿಕಾರಿಯ ಧೋರಣೆ ಇನ್ನು ಮುಂದೆ ನಡೆಯುವುದಿಲ್ಲ ಮೋದಿಯವರೇ. ಸ್ವಲ್ಪ ಹದ್ದುಬಸ್ತಿನಲ್ಲಿ ಇರೋದು ನಿಮಗೆ ಒಳ್ಳೆಯದು. ಈಸ್ಟ್ ಇಂಡಿಯಾ ಕಂಪೆನಿಯಿಂದ ದೇಶದವನ್ನು ವಾಪಾಸ್ ಪಡೆಯಲು ಬಹಳ ಹೋರಾಟ ನಡೆದಿದೆ. ಈಗ ನೀವು ತಿರುಗಿ ಕಾರ್ಪೋರೇಟ್ ಕಂಪೆನಿಗಳಿಗೆ ವಾಪಾಸ್ ಕೊಡಲು ಹೊರಟಿದ್ದೀರಾ..? ಮೋದಿಯವರೇ ಈ ದೇಶ ನಿಮ್ಮ ಅಪ್ಪನದ್ದಲ್ಲ… ನಮ್ಮ ಅಪ್ಪಂದಿರು ದುಡಿದು ಬೆವರು ಹರಿಸಿದ ದೇಶ ಇದು. ಹೀಗಾಗಿ ನಿಮ್ಮ ಹಿಟ್ಲರ್ ಆಡಳಿತವನ್ನು ನಿಲ್ಲಿಸಿ. ಇಲ್ಲದಿದ್ದರೆ, ಅನುಭವಿಸುತ್ತೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

ಗೋಹತ್ಯೆ ಕಾಯ್ದೆ ವಿರುದ್ಧವೂ ಆಕ್ರೋಶ ಹೊರಹಾಕಿರುವ ಕೋಡಿಹಳ್ಳಿ ಚಂದ್ರಶೇಖರ್, “ಜಾನುವಾರು ಹತ್ಯೆ ಕಾಯ್ದೆಗಳನ್ನು ತಂದಿದ್ದಾರೆ. ನಾವು ಹಸು ಹತ್ತುಗಳನ್ನು ಪೂಜೆ ಮಾಡುವವರೇ. ಆದರೆ, ಅದನ್ನು ಹತ್ಯೆ ಮಾಡಬೇಡಿ ಅಂದ್ರೆ ನಮ್ಮ ಜೀವನ ಏನಾಗಬೇಡ..? ಹಸುಗಳ ಪೋಷಣೆ ಮಾಡ್ತೀವಿ, ಅದಕ್ಕೆ ಮುಲಾಮು ಹಚ್ಚ್ತೀವಿ, ಅದನ್ನೆ ನೋಡಿಕೊಳ್ತೀವಿ. ಹಾಗಾಗಿ ನಿಮ್ಮ ಗೋ ಹತ್ಯೆ ನಿಷೇಧ ಅನ್ನೋದೆಲ್ಲಾ ಬೇಡ. ವಿಧಾನಸೌದದಲ್ಲಿ ಕೂತು ಕಾನೂನು ಪಾಸ್ ಮಾಡಿದರೆ ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

“ದೆಹಲಿಯಲ್ಲಿ ರೈತರು ಜಗತ್ತಿನ ಇತಿಹಾಸದಲ್ಲಿ ಮರೆಯಾಗದೆ ಉಳಿಯುವಂತಹ ದಾಖಲೆ ಮಾಡಿದ್ದಾರೆ. ಲಕ್ಷಾಂತರ ಟ್ರಾಕ್ಟರ್‌‌ಗಳನ್ನು ತಂದು ಚಳುವಳಿ ಮಾಡಿದ್ದಾರೆ. ಇದು ರೈತರ ಇತಿಹಾಸದಲ್ಲೇ ಅತಿ ದೊಡ್ಡ ಹೋರಾಟ. ದೆಹಲಿಯಲ್ಲಿ ಅಹಿತಕರ ಘಟನೆ ನಡೆದಿದೆ. ದೆಹಲಿಯಲ್ಲಿ ರೈತರು ಅಕ್ಷಮ್ಯ ಅಪರಾಧ ಮಾಡಿದ್ದಾರೆ ಅಂತ ಸುದ್ದಿ ಹಬ್ಬಿದೆ. ಆದರೆ, ತಾಳ್ಮೆಗೆ ಇತಿಮಿತಿ ಅನ್ನೋದು ಇರುತ್ತದೆ.

ಆದರೆ ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತರ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ. ಕಾನೂನುಗಳನ್ನು ಅಮಾನಾತು ಮಾಡಿದ್ದೇವೆ ಅಂತ ಹೇಳಿ. ಆಗ ಎಲ್ಲವೂ ತಣ್ಣಗಾಗಲಿದೆ, ಇಲ್ಲದಿದ್ದರೆ ಈ ರೈತ ಹೋರಾಟ ನಿಲ್ಲುವುದಿಲ್ಲ” ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದನ್ನೇ ಬಿಜೆಪಿ ಯವರು ಮಾಡಿದ್ದರೆ ಈ ಮಾತುಗಳನ್ನು ಹೇಳಲು ಇವನಿಗೆ ಸಾದ್ಯವಿತ್ತಾ?
    ಇವನು ರಾಜಕೀಯ ಪ್ರವೇಶಿಸಿದ್ದೇ ಕಾಂಗ್ರೆಸ್ ಮೂಲಕ ಅಲ್ವಾ?
    ಆವತ್ತು ಹೇಳಿಲ್ಲ ಕಾಂಗ್ರೆಸ್ ಬಯೋತ್ಪಾದಕರಿಗೆ ಸಪೋರ್ಟ್ ಮಾಡುತ್ತದೆ ಎಂದು.
    ಇಂತಹವರ ಹೇಳಿಕೆಗಳೇ ರೈತರು ರೊಚ್ಚಿಗೆಳಲು ಕಾರಣ.
    ಇಂತವರನ್ನು ಮೊದಲು ಬಂಧಿಸುವ ಕಾರ್ಯ ಪೋಲೀಸರು ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...