Homeಕರ್ನಾಟಕಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತಾಡೋಕೆ ಬರಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆ ನೀವೇ ಕಳೆದುಕೊಳ್ಳುತ್ತೀರಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಆಕ್ರೋಶ ವ್ಯಕ್ತಪಡಿಸಿದರು. ಅವರು ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆದ ಟ್ರಾಕ್ಟರ್‌ ರ್‍ಯಾಲಿಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

“ಬಿಜೆಪಿ ನಾಯಕರು ರೈತರಿಗೆ ಪಾಕಿಸ್ತಾನ ಮತ್ತು ಖಾಲಿಸ್ತಾನಿಗಳ ಬೆಂಬಲ ಇದೆ ಎಂದು ಬೊಬ್ಬೆ ಇಡುತ್ತಿದ್ದಾರೆ. ರೈತರನ್ನೇ ದೇಶದ್ರೋಹಿಗಳು ಎಂದು ಕರೆಯುವ ಕಾಲ ಬಂದಿದೆ. ರೈತರಿಗೆ ಪಾಕಿಸ್ತಾನದ ನಂಟು ಎಂದು ಆರೋಪ ಹೊರಿಸುತ್ತಿದ್ದಾರೆ. ಇದು ಹೊಟ್ಟೆಗೆ ಅನ್ನ ತಿನ್ನುವ ಜನರು ಆಡುವ ಮಾತುಗಳೇ? ನಿಮಗೆ ಎಲ್ಲಿಲ್ಲದ ದುರಹಂಕಾರ ಬರಲು ಕಾರಣ ರೈತರೆ ಆಗಿದ್ದಾರೆ. ಉತ್ತು ಬಿತ್ತು ಅನ್ನ ಹಾಕಿದ್ದೀವಲ್ವಾ? ಅದಕ್ಕೆ ಹೀಗೆ ಮಾತನಾಡುತ್ತಿದ್ದೀರ” ಎಂದು ಕೃಷಿ ಸಚಿವ ಬಿ. ಸಿ. ಪಾಟಿಲ್ ಅವರ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರು ಜನಗಣರಾಜ್ಯೋತ್ಸವ: ರೈತ ಹೋರಾಟದ ಚಿತ್ರ ಸುದ್ದಿಗಳು

“ಇನ್ನೂ ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತನಾಲು ತಿಳಿದಿಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿಯ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆಯನ್ನು ನೀವೇ ಕಳೆದುಕೊಳ್ಳುತ್ತೀರಿ” ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇಂದು ದೇಶದಾದ್ಯಂತ ನಡೆದ ರೈತ ಹೋರಾಟದ ಬಗ್ಗೆ ಕೊಪ್ಪಳದಲ್ಲಿ ಹೇಳಿಕೆ ನೀಡಿದ್ದ ಸಚಿವ ಬಿ.ಸಿ. ಪಾಟೀಲ್, “ಇದು ರೈತರ ಪ್ರತಿಭಟನೆಯಲ್ಲ ಬದಲಿಗೆ ಭಯೋತ್ಪಾದಕರ ಕೃತ್ಯ. ಇದರ ಹಿಂದೆ ಖಾಲಿಸ್ತಾನಿಗಳು ಮತ್ತು ಕಾಂಗ್ರೆಸ್​ ಕೈವಾಡವಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕೃಷಿ ಸಚಿವ ಬಿ.ಸಿ ಪಾಟಿಲ್ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ನೋಡಿ

ಸಚಿವರ ಈ ಹೇಳಿಕೆಗೆ ರಾಜ್ಯದ ವಿವಿಧ ರೈತ ಸಂಘಟನೆಗಳು ಇಂದು ಒಂದಾಗಿ ಸಂಯುಕ್ತ ಹೋರಾಟ ಕರ್ನಾಟಕ ಹೆಸರಿನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಮಾವೇಶದಲ್ಲಿ ಕಿಡಿಕಾರಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​, “ರೈತ ಹೋರಾಟಗಾರರು ಸ್ವಾಭಿಮಾನಿಗಳು. ಆದರೆ, ಕೆಲ ಬಿಜೆಪಿ ನಾಯಕರು ರೈತರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿದ್ದಾರೆ. ರೈತ ಹೋರಾಟಗಾರರಿಗೆ ಖಾಲಿಸ್ತಾನಿಗಳ ಮತ್ತು ಪಾಕಿಸ್ತಾನಿಗಳ ಸಹಾಯವಿದೆ ಎಂದು ಆಧಾರವಿಲ್ಲದೆ ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

“ನಮ್ಮದೇ ಅನ್ನ ತಿಂದು ನಮ್ಮನ್ನೇ ಭಯೋತ್ಪಾದಕರು ಎಂದು ಹೀಯಾಳಿಸುತ್ತೀರಾ? ಮಾಜಿ ಪ್ರಧಾನಿ ದಿವಂಗತ ಇಂದಿರ ಗಾಂಧಿಯೂ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈಗ ಅದನ್ನೇ ನರೇಂದ್ರ ಮೋದಿಯೂ ಮಾಡ್ತುದ್ದಾರೆ. ರೈತರ ಕತ್ತು ಹಿಡಿದು ಹೊರಗೆ ತಳ್ಳೋ ದೃಶ್ಯಗಳನ್ನು ನಾವಿಂದು ನೋಡುತ್ತಿದ್ದೇವೆ. ಮೋದಿಯವರ ಮಂಕಿಬಾತ್ ನಲ್ಲಿ‌ ಒಂದು ಮಾತಾದಾರೂ ರೈತರ ಬಗ್ಗೆ ಮಾತಾಡಿದ್ದಾರಾ..?” ಎಂದು ಕೋಡಿಹಳ್ಳಿ ಚಂದ್ರಶೇಕರ್​ ಕಿಡಿಕಾರಿದರು.

“ಈ ಸರ್ವಾಧಿಕಾರಿಯ ಧೋರಣೆ ಇನ್ನು ಮುಂದೆ ನಡೆಯುವುದಿಲ್ಲ ಮೋದಿಯವರೇ. ಸ್ವಲ್ಪ ಹದ್ದುಬಸ್ತಿನಲ್ಲಿ ಇರೋದು ನಿಮಗೆ ಒಳ್ಳೆಯದು. ಈಸ್ಟ್ ಇಂಡಿಯಾ ಕಂಪೆನಿಯಿಂದ ದೇಶದವನ್ನು ವಾಪಾಸ್ ಪಡೆಯಲು ಬಹಳ ಹೋರಾಟ ನಡೆದಿದೆ. ಈಗ ನೀವು ತಿರುಗಿ ಕಾರ್ಪೋರೇಟ್ ಕಂಪೆನಿಗಳಿಗೆ ವಾಪಾಸ್ ಕೊಡಲು ಹೊರಟಿದ್ದೀರಾ..? ಮೋದಿಯವರೇ ಈ ದೇಶ ನಿಮ್ಮ ಅಪ್ಪನದ್ದಲ್ಲ… ನಮ್ಮ ಅಪ್ಪಂದಿರು ದುಡಿದು ಬೆವರು ಹರಿಸಿದ ದೇಶ ಇದು. ಹೀಗಾಗಿ ನಿಮ್ಮ ಹಿಟ್ಲರ್ ಆಡಳಿತವನ್ನು ನಿಲ್ಲಿಸಿ. ಇಲ್ಲದಿದ್ದರೆ, ಅನುಭವಿಸುತ್ತೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

ಗೋಹತ್ಯೆ ಕಾಯ್ದೆ ವಿರುದ್ಧವೂ ಆಕ್ರೋಶ ಹೊರಹಾಕಿರುವ ಕೋಡಿಹಳ್ಳಿ ಚಂದ್ರಶೇಖರ್, “ಜಾನುವಾರು ಹತ್ಯೆ ಕಾಯ್ದೆಗಳನ್ನು ತಂದಿದ್ದಾರೆ. ನಾವು ಹಸು ಹತ್ತುಗಳನ್ನು ಪೂಜೆ ಮಾಡುವವರೇ. ಆದರೆ, ಅದನ್ನು ಹತ್ಯೆ ಮಾಡಬೇಡಿ ಅಂದ್ರೆ ನಮ್ಮ ಜೀವನ ಏನಾಗಬೇಡ..? ಹಸುಗಳ ಪೋಷಣೆ ಮಾಡ್ತೀವಿ, ಅದಕ್ಕೆ ಮುಲಾಮು ಹಚ್ಚ್ತೀವಿ, ಅದನ್ನೆ ನೋಡಿಕೊಳ್ತೀವಿ. ಹಾಗಾಗಿ ನಿಮ್ಮ ಗೋ ಹತ್ಯೆ ನಿಷೇಧ ಅನ್ನೋದೆಲ್ಲಾ ಬೇಡ. ವಿಧಾನಸೌದದಲ್ಲಿ ಕೂತು ಕಾನೂನು ಪಾಸ್ ಮಾಡಿದರೆ ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

“ದೆಹಲಿಯಲ್ಲಿ ರೈತರು ಜಗತ್ತಿನ ಇತಿಹಾಸದಲ್ಲಿ ಮರೆಯಾಗದೆ ಉಳಿಯುವಂತಹ ದಾಖಲೆ ಮಾಡಿದ್ದಾರೆ. ಲಕ್ಷಾಂತರ ಟ್ರಾಕ್ಟರ್‌‌ಗಳನ್ನು ತಂದು ಚಳುವಳಿ ಮಾಡಿದ್ದಾರೆ. ಇದು ರೈತರ ಇತಿಹಾಸದಲ್ಲೇ ಅತಿ ದೊಡ್ಡ ಹೋರಾಟ. ದೆಹಲಿಯಲ್ಲಿ ಅಹಿತಕರ ಘಟನೆ ನಡೆದಿದೆ. ದೆಹಲಿಯಲ್ಲಿ ರೈತರು ಅಕ್ಷಮ್ಯ ಅಪರಾಧ ಮಾಡಿದ್ದಾರೆ ಅಂತ ಸುದ್ದಿ ಹಬ್ಬಿದೆ. ಆದರೆ, ತಾಳ್ಮೆಗೆ ಇತಿಮಿತಿ ಅನ್ನೋದು ಇರುತ್ತದೆ.

ಆದರೆ ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತರ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ. ಕಾನೂನುಗಳನ್ನು ಅಮಾನಾತು ಮಾಡಿದ್ದೇವೆ ಅಂತ ಹೇಳಿ. ಆಗ ಎಲ್ಲವೂ ತಣ್ಣಗಾಗಲಿದೆ, ಇಲ್ಲದಿದ್ದರೆ ಈ ರೈತ ಹೋರಾಟ ನಿಲ್ಲುವುದಿಲ್ಲ” ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದನ್ನೇ ಬಿಜೆಪಿ ಯವರು ಮಾಡಿದ್ದರೆ ಈ ಮಾತುಗಳನ್ನು ಹೇಳಲು ಇವನಿಗೆ ಸಾದ್ಯವಿತ್ತಾ?
    ಇವನು ರಾಜಕೀಯ ಪ್ರವೇಶಿಸಿದ್ದೇ ಕಾಂಗ್ರೆಸ್ ಮೂಲಕ ಅಲ್ವಾ?
    ಆವತ್ತು ಹೇಳಿಲ್ಲ ಕಾಂಗ್ರೆಸ್ ಬಯೋತ್ಪಾದಕರಿಗೆ ಸಪೋರ್ಟ್ ಮಾಡುತ್ತದೆ ಎಂದು.
    ಇಂತಹವರ ಹೇಳಿಕೆಗಳೇ ರೈತರು ರೊಚ್ಚಿಗೆಳಲು ಕಾರಣ.
    ಇಂತವರನ್ನು ಮೊದಲು ಬಂಧಿಸುವ ಕಾರ್ಯ ಪೋಲೀಸರು ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...