Homeಕರ್ನಾಟಕಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ಹಿಟ್ಲರ್ ಆಡಳಿತವನ್ನು ನಿಲ್ಲಿಸಿ, ಇಲ್ಲದಿದ್ದರೆ ಅನುಭವಿಸುತ್ತೀರಿ: ಕೋಡಿಹಳ್ಳಿ ಚಂದ್ರಶೇಖರ್‌ ಎಚ್ಚರಿಕೆ

ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತಾಡೋಕೆ ಬರಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆ ನೀವೇ ಕಳೆದುಕೊಳ್ಳುತ್ತೀರಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಆಕ್ರೋಶ ವ್ಯಕ್ತಪಡಿಸಿದರು. ಅವರು ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆದ ಟ್ರಾಕ್ಟರ್‌ ರ್‍ಯಾಲಿಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

“ಬಿಜೆಪಿ ನಾಯಕರು ರೈತರಿಗೆ ಪಾಕಿಸ್ತಾನ ಮತ್ತು ಖಾಲಿಸ್ತಾನಿಗಳ ಬೆಂಬಲ ಇದೆ ಎಂದು ಬೊಬ್ಬೆ ಇಡುತ್ತಿದ್ದಾರೆ. ರೈತರನ್ನೇ ದೇಶದ್ರೋಹಿಗಳು ಎಂದು ಕರೆಯುವ ಕಾಲ ಬಂದಿದೆ. ರೈತರಿಗೆ ಪಾಕಿಸ್ತಾನದ ನಂಟು ಎಂದು ಆರೋಪ ಹೊರಿಸುತ್ತಿದ್ದಾರೆ. ಇದು ಹೊಟ್ಟೆಗೆ ಅನ್ನ ತಿನ್ನುವ ಜನರು ಆಡುವ ಮಾತುಗಳೇ? ನಿಮಗೆ ಎಲ್ಲಿಲ್ಲದ ದುರಹಂಕಾರ ಬರಲು ಕಾರಣ ರೈತರೆ ಆಗಿದ್ದಾರೆ. ಉತ್ತು ಬಿತ್ತು ಅನ್ನ ಹಾಕಿದ್ದೀವಲ್ವಾ? ಅದಕ್ಕೆ ಹೀಗೆ ಮಾತನಾಡುತ್ತಿದ್ದೀರ” ಎಂದು ಕೃಷಿ ಸಚಿವ ಬಿ. ಸಿ. ಪಾಟಿಲ್ ಅವರ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರು ಜನಗಣರಾಜ್ಯೋತ್ಸವ: ರೈತ ಹೋರಾಟದ ಚಿತ್ರ ಸುದ್ದಿಗಳು

“ಇನ್ನೂ ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತನಾಲು ತಿಳಿದಿಲ್ಲ. ಇಂಥವರನ್ನು ಯಡಿಯೂರಪ್ಪ ಕ್ಯಾಬಿನೆಟ್​ನಲ್ಲಿ ಇಟ್ಟುಕೊಂಡಿದ್ದಾರೆ. ರೈತರು ಹೋರಾಟ ಮಾಡಿದರೆ ಅಂಥವರ ವಿರುದ್ಧ ಹರಕಲು ಬಾಯಿಯ ಸಚಿವರನ್ನು ಮುಂದೆ ಬಿಡುತ್ತಾರೆ. ಯಡಿಯೂರಪ್ಪನವರೇ ಎಚ್ಚರಿಕೆ ಇರಲಿ, ನಿಮ್ಮ ಸಚಿವರು ಬೇಕಾ ಬಿಟ್ಟಿ ಮಾತನಾಡಿದರೆ ನಿಮ್ಮ ಮರ್ಯಾದೆಯನ್ನು ನೀವೇ ಕಳೆದುಕೊಳ್ಳುತ್ತೀರಿ” ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇಂದು ದೇಶದಾದ್ಯಂತ ನಡೆದ ರೈತ ಹೋರಾಟದ ಬಗ್ಗೆ ಕೊಪ್ಪಳದಲ್ಲಿ ಹೇಳಿಕೆ ನೀಡಿದ್ದ ಸಚಿವ ಬಿ.ಸಿ. ಪಾಟೀಲ್, “ಇದು ರೈತರ ಪ್ರತಿಭಟನೆಯಲ್ಲ ಬದಲಿಗೆ ಭಯೋತ್ಪಾದಕರ ಕೃತ್ಯ. ಇದರ ಹಿಂದೆ ಖಾಲಿಸ್ತಾನಿಗಳು ಮತ್ತು ಕಾಂಗ್ರೆಸ್​ ಕೈವಾಡವಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕೃಷಿ ಸಚಿವ ಬಿ.ಸಿ ಪಾಟಿಲ್ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ನೋಡಿ

ಸಚಿವರ ಈ ಹೇಳಿಕೆಗೆ ರಾಜ್ಯದ ವಿವಿಧ ರೈತ ಸಂಘಟನೆಗಳು ಇಂದು ಒಂದಾಗಿ ಸಂಯುಕ್ತ ಹೋರಾಟ ಕರ್ನಾಟಕ ಹೆಸರಿನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಮಾವೇಶದಲ್ಲಿ ಕಿಡಿಕಾರಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​, “ರೈತ ಹೋರಾಟಗಾರರು ಸ್ವಾಭಿಮಾನಿಗಳು. ಆದರೆ, ಕೆಲ ಬಿಜೆಪಿ ನಾಯಕರು ರೈತರನ್ನು ಭಯೋತ್ಪಾದಕರಿಗೆ ಹೋಲಿಸುತ್ತಿದ್ದಾರೆ. ರೈತ ಹೋರಾಟಗಾರರಿಗೆ ಖಾಲಿಸ್ತಾನಿಗಳ ಮತ್ತು ಪಾಕಿಸ್ತಾನಿಗಳ ಸಹಾಯವಿದೆ ಎಂದು ಆಧಾರವಿಲ್ಲದೆ ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

“ನಮ್ಮದೇ ಅನ್ನ ತಿಂದು ನಮ್ಮನ್ನೇ ಭಯೋತ್ಪಾದಕರು ಎಂದು ಹೀಯಾಳಿಸುತ್ತೀರಾ? ಮಾಜಿ ಪ್ರಧಾನಿ ದಿವಂಗತ ಇಂದಿರ ಗಾಂಧಿಯೂ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈಗ ಅದನ್ನೇ ನರೇಂದ್ರ ಮೋದಿಯೂ ಮಾಡ್ತುದ್ದಾರೆ. ರೈತರ ಕತ್ತು ಹಿಡಿದು ಹೊರಗೆ ತಳ್ಳೋ ದೃಶ್ಯಗಳನ್ನು ನಾವಿಂದು ನೋಡುತ್ತಿದ್ದೇವೆ. ಮೋದಿಯವರ ಮಂಕಿಬಾತ್ ನಲ್ಲಿ‌ ಒಂದು ಮಾತಾದಾರೂ ರೈತರ ಬಗ್ಗೆ ಮಾತಾಡಿದ್ದಾರಾ..?” ಎಂದು ಕೋಡಿಹಳ್ಳಿ ಚಂದ್ರಶೇಕರ್​ ಕಿಡಿಕಾರಿದರು.

“ಈ ಸರ್ವಾಧಿಕಾರಿಯ ಧೋರಣೆ ಇನ್ನು ಮುಂದೆ ನಡೆಯುವುದಿಲ್ಲ ಮೋದಿಯವರೇ. ಸ್ವಲ್ಪ ಹದ್ದುಬಸ್ತಿನಲ್ಲಿ ಇರೋದು ನಿಮಗೆ ಒಳ್ಳೆಯದು. ಈಸ್ಟ್ ಇಂಡಿಯಾ ಕಂಪೆನಿಯಿಂದ ದೇಶದವನ್ನು ವಾಪಾಸ್ ಪಡೆಯಲು ಬಹಳ ಹೋರಾಟ ನಡೆದಿದೆ. ಈಗ ನೀವು ತಿರುಗಿ ಕಾರ್ಪೋರೇಟ್ ಕಂಪೆನಿಗಳಿಗೆ ವಾಪಾಸ್ ಕೊಡಲು ಹೊರಟಿದ್ದೀರಾ..? ಮೋದಿಯವರೇ ಈ ದೇಶ ನಿಮ್ಮ ಅಪ್ಪನದ್ದಲ್ಲ… ನಮ್ಮ ಅಪ್ಪಂದಿರು ದುಡಿದು ಬೆವರು ಹರಿಸಿದ ದೇಶ ಇದು. ಹೀಗಾಗಿ ನಿಮ್ಮ ಹಿಟ್ಲರ್ ಆಡಳಿತವನ್ನು ನಿಲ್ಲಿಸಿ. ಇಲ್ಲದಿದ್ದರೆ, ಅನುಭವಿಸುತ್ತೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

ಗೋಹತ್ಯೆ ಕಾಯ್ದೆ ವಿರುದ್ಧವೂ ಆಕ್ರೋಶ ಹೊರಹಾಕಿರುವ ಕೋಡಿಹಳ್ಳಿ ಚಂದ್ರಶೇಖರ್, “ಜಾನುವಾರು ಹತ್ಯೆ ಕಾಯ್ದೆಗಳನ್ನು ತಂದಿದ್ದಾರೆ. ನಾವು ಹಸು ಹತ್ತುಗಳನ್ನು ಪೂಜೆ ಮಾಡುವವರೇ. ಆದರೆ, ಅದನ್ನು ಹತ್ಯೆ ಮಾಡಬೇಡಿ ಅಂದ್ರೆ ನಮ್ಮ ಜೀವನ ಏನಾಗಬೇಡ..? ಹಸುಗಳ ಪೋಷಣೆ ಮಾಡ್ತೀವಿ, ಅದಕ್ಕೆ ಮುಲಾಮು ಹಚ್ಚ್ತೀವಿ, ಅದನ್ನೆ ನೋಡಿಕೊಳ್ತೀವಿ. ಹಾಗಾಗಿ ನಿಮ್ಮ ಗೋ ಹತ್ಯೆ ನಿಷೇಧ ಅನ್ನೋದೆಲ್ಲಾ ಬೇಡ. ವಿಧಾನಸೌದದಲ್ಲಿ ಕೂತು ಕಾನೂನು ಪಾಸ್ ಮಾಡಿದರೆ ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

“ದೆಹಲಿಯಲ್ಲಿ ರೈತರು ಜಗತ್ತಿನ ಇತಿಹಾಸದಲ್ಲಿ ಮರೆಯಾಗದೆ ಉಳಿಯುವಂತಹ ದಾಖಲೆ ಮಾಡಿದ್ದಾರೆ. ಲಕ್ಷಾಂತರ ಟ್ರಾಕ್ಟರ್‌‌ಗಳನ್ನು ತಂದು ಚಳುವಳಿ ಮಾಡಿದ್ದಾರೆ. ಇದು ರೈತರ ಇತಿಹಾಸದಲ್ಲೇ ಅತಿ ದೊಡ್ಡ ಹೋರಾಟ. ದೆಹಲಿಯಲ್ಲಿ ಅಹಿತಕರ ಘಟನೆ ನಡೆದಿದೆ. ದೆಹಲಿಯಲ್ಲಿ ರೈತರು ಅಕ್ಷಮ್ಯ ಅಪರಾಧ ಮಾಡಿದ್ದಾರೆ ಅಂತ ಸುದ್ದಿ ಹಬ್ಬಿದೆ. ಆದರೆ, ತಾಳ್ಮೆಗೆ ಇತಿಮಿತಿ ಅನ್ನೋದು ಇರುತ್ತದೆ.

ಆದರೆ ತಾಳ್ಮೆಯ ಕಟ್ಟೆ ಹೊಡೆದರೆ ಏನಾಗುತ್ತೆ ಅನ್ನೋದಕ್ಕೆ ದೆಹಲಿಯ ರೈತರ ಹೋರಾಟ ಉದಾಹರಣೆ. ರೈತರ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ. ಕಾನೂನುಗಳನ್ನು ಅಮಾನಾತು ಮಾಡಿದ್ದೇವೆ ಅಂತ ಹೇಳಿ. ಆಗ ಎಲ್ಲವೂ ತಣ್ಣಗಾಗಲಿದೆ, ಇಲ್ಲದಿದ್ದರೆ ಈ ರೈತ ಹೋರಾಟ ನಿಲ್ಲುವುದಿಲ್ಲ” ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದನ್ನೇ ಬಿಜೆಪಿ ಯವರು ಮಾಡಿದ್ದರೆ ಈ ಮಾತುಗಳನ್ನು ಹೇಳಲು ಇವನಿಗೆ ಸಾದ್ಯವಿತ್ತಾ?
    ಇವನು ರಾಜಕೀಯ ಪ್ರವೇಶಿಸಿದ್ದೇ ಕಾಂಗ್ರೆಸ್ ಮೂಲಕ ಅಲ್ವಾ?
    ಆವತ್ತು ಹೇಳಿಲ್ಲ ಕಾಂಗ್ರೆಸ್ ಬಯೋತ್ಪಾದಕರಿಗೆ ಸಪೋರ್ಟ್ ಮಾಡುತ್ತದೆ ಎಂದು.
    ಇಂತಹವರ ಹೇಳಿಕೆಗಳೇ ರೈತರು ರೊಚ್ಚಿಗೆಳಲು ಕಾರಣ.
    ಇಂತವರನ್ನು ಮೊದಲು ಬಂಧಿಸುವ ಕಾರ್ಯ ಪೋಲೀಸರು ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...