Homeಚಳವಳಿಹೊಸ ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ: ಇಂದು ಟ್ವಿಟರ್ ಅಭಿಯಾನ

ಹೊಸ ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ: ಇಂದು ಟ್ವಿಟರ್ ಅಭಿಯಾನ

#StopCentralVistaStartOxygen 20 ಸಾವಿರ ಕೋಟಿ ರೂ.ಗಳನ್ನು ಮನುಷ್ಯರ ಜೀವ ಉಳಿಸಲು ವಿನಿಯೋಗಿಸಿ ಎಂದು ಕೇಂದ್ರಕ್ಕೆ ಆಗ್ರಹ ಮಾಡಲಾಗುತ್ತದೆ

- Advertisement -
- Advertisement -

‘ಕಟ್ಟಡಗಳಿಗಿಂತ ಮನುಷ್ಯ ಜೀವಗಳು ಅಮೂಲ್ಯ. ಸೆಂಟ್ರಲ್ ವಿಸ್ತಾ ನಿರ್ಮಾಣವನ್ನು ನಿಲ್ಲಿಸಿ, 20 ಸಾವಿರ ಕೋಟಿ ರೂ.ಗಳನ್ನು ಮನುಷ್ಯರ ಜೀವ ಉಳಿಸಲು ವಿನಿಯೋಗಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ #StopCentralVistaStartOxygen (ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ) ಟ್ವಿಟರ್ ಅಭಿಯಾನವು ಇಂದು ಬೆಳಿಗ್ಗೆ 10 ರಿಂದ ಪ್ರಾರಂಭವಾಗಿಲಿದೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರ ಕುಸಿದು ಹೋಗಿದೆ. ಲಾಕ್‌ಡೌನ್ ನಡುವೆಯೂ ಕೇಂದ್ರ ಸರ್ಕಾರ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿ ನಿರ್ಮಾಣವನ್ನು ಮುಂದುವರೆಸಿದ್ದು ಕ್ರೌರ್ಯದ ಪರಮಾವಧಿಯಾಗಿದೆ. ಸದ್ಯದ ತುರ್ತು ಮನುಷ್ಯ ಜೀವಗಳನ್ನು ಉಳಿಸುವುದಾಗಿದೆ. ಇದು ಜೀವಗಳ ಪ್ರಶ್ನೆಯಾಗಿದ್ದು, ನಿರ್ಜೀವ ಕಟ್ಟಡಗಳನ್ನು ಮುಂದೆ ಎಂದಾದರೂ ಕಟ್ಟಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸೆಂಟ್ರಲ್ ವಿಸ್ತಾ ಪ್ರಾಜೆಕ್ಟ್ ಹೊಸ ಸಂಸತ್ ಭವನ ಮತ್ತು ಇತರ ಕಟ್ಟಡಗಳನ್ನು ನಿರ್ಮಿಸುವ ದುಬಾರಿ ಯೋಜನೆಯಾಗಿದೆ. ಈಗಿರುವ ಸಂಸತ್ ಕಟ್ಟಡವೇ ಸಾಕಿತ್ತು. ಆದರೆ ಆ ಪ್ರದೇಶದ ಪರಿಸರ, ಐತಿಹಾಸಿಕ ಕಟ್ಟಡಗಳನ್ನು ನೆಲಕ್ಕೆ ಉರುಳಿಸಿ ಈ ಯೋಜನೆ ಜಾರಿ ಮಾಡಲಾಗುತ್ತಿದೆ.
ನಾವೆಲ್ಲರೂ ಇದನ್ನು ವಿರೋಧಿಸೋಣ. ಈ ಬಿಕ್ಕಟ್ಟಿನ ಸಮಯದಲ್ಲಿ ಯೋಜನೆಯ ಹಣದಲ್ಲಿ 20 ಸಾವಿರ ಕೋಟಿ ರೂ. ಗಳನ್ನು ಆರೋಗ್ಯ ಸೌಕರ್ಯ ವಿಸ್ತರಿಸಲು ಬಳಸಿ ಎಂದು ಆಗ್ರಹಿಸೋಣ.

ಸಾವಿರಾರು ಜನರನ್ನು ಕೊಂದು ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸಿದ ಕೋವಿಡ್ ಬಿಕ್ಕಟ್ಟು ತೀವ್ರವಾದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಯೋಜನೆಯ ಕೆಲಸಗಳನ್ನು ಮುಂದುವರೆಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಇಂದು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

“ಸೆಂಟ್ರಲ್ ವಿಸ್ತಾ- ಅನಿವಾರ್ಯವಲ್ಲ. ವಿಜನ್ ಹೊಂದಿರುವ ಕೇಂದ್ರ ಸರ್ಕಾರ ಅತ್ಯಗತ್ಯ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

“ಸೆಂಟ್ರಲ್ ವಿಸ್ತಾ ಯೋಜನೆಗೆ ಈಗಾಗಲೇ ಬಳಸಿದ ಹಣವನ್ನು ಹೆಚ್ಚಿನ ಜನರಿಗೆ ಲಸಿಕೆ ನೀಡಲು ಪ್ರತಿಪಕ್ಷಗಳು ಬಯಸಿದ್ದವು. ನಾವು ಹೆಚ್ಚು ಪಿಪಿಇ ಕಿಟ್‌ಗಳನ್ನು ಖರೀದಿಸಬಹುದಿತ್ತು, ವಲಸೆ ಕಾರ್ಮಿಕರಿಗೆ ನೇರ ವರ್ಗಾವಣೆ ಮಾಡಬಹುದಿತ್ತು” ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ’ಬ್ರಿಯೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ಆಮ್ಲಜನಕ ಸಿಗದೆ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವು, ವೈದ್ಯರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...