Homeಅಂತರಾಷ್ಟ್ರೀಯ'ಯುದ್ಧ ನಿಲ್ಲಿಸಿ': ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

- Advertisement -
- Advertisement -

ಪ್ರತಿನಿತ್ಯ ಸಾವು-ನೋವುಗಳನ್ನು ನೋಡುತ್ತಾ ಕುಗ್ಗಿ ಹೋಗಿರುವ ಗಾಝಾದ ಜನತೆ ಹಮಾಸ್ ಗುಂಪಿನ ವಿರುದ್ದವೇ ತಿರುಗಿ ಬಿದ್ದಿದ್ದು, ಇಸ್ರೇಲ್ ಜೊತೆಗಿನ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

ಕದನ ವಿರಾಮ ಒಪ್ಪಂದ ಮುರಿದುಬಿದ್ದ ಕಾರಣ ಇಸ್ರೇಲ್ ಮತ್ತೆ ಆಕ್ರಮಣ ನಡೆಸುತ್ತಿದೆ. ಪ್ರತಿನಿತ್ಯ ನೂರಾರು ಜನರು ಸಾಯುತ್ತಿದ್ದಾರೆ. ಇಸ್ರೇಲ್‌ಗೆ ಏನೂ ಮಾಡಲು ನಮಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ , ಹಮಾಸ್ ಮೇಲೆ ಒತ್ತಡ ಹೇರಲು ಪ್ರತಿಭಟಿಸಿರುವುದಾಗಿ ಉತ್ತರ ಗಾಝಾದ ಜನತೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಜನವಸತಿ ಪ್ರದೇಶವಾಗಿದ್ದ ಉತ್ತರ ಗಾಝಾ ಇಸ್ರೇಲ್‌ನ ನಿರಂತರ ದಾಳಿಯಿಂದ ಬರೀ ಕಟ್ಟಡ ಅವಶೇಷಗಳ ರಾಶಿಯಾಗಿ ಪರಿವರ್ತನೆಗೊಂಡಿದೆ. ಇಲ್ಲಿನ ಕಂದಮ್ಮಗಳು ಸೇರಿದಂತೆ ಸಾವಿರಾರು ಜನರನ್ನು ಇಸ್ರೇಲ್‌ ಹತ್ಯೆ ನಡೆಸಿದೆ. ಕಟ್ಟಡಗಳನ್ನು ಧ್ವಂಸ ಮಾಡಿದೆ. ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹಾಳುಗೆಡವಿದೆ. ಸಾವಿರಾರು ಜನರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ಪಲಾಯನ ಮಾಡಿದ್ದಾರೆ.

ಕಳೆದ ಮಂಗಳವಾರ ಉತ್ತರ ಗಾಝಾದ ಬೈತ್ ಲಾಹಿಯಾದ ಬೀದಿಗಳಲ್ಲಿ ಜಮಾಯಿಸಿದ ನೂರಾರು ಜನರು “ದೇವರ ದಯೆಯಿಂದ ಹಮಾಸ್ ತೊಲಗಲಿ, ಹಮಾಸ್‌ನವರು ಭಯೋತ್ಪಾದಕರು, ನಾವು ಯುದ್ದವನ್ನು ಕೊನೆಗೊಳಿಸಲು ಭಯಸುತ್ತೇವೆ” ಎಂಬ ಘೋಷಣೆಗಳನ್ನು ಕೂಗಿ ನೋವು ಹೊರಹಾಕಿದ್ದಾರೆ. ಬುಧವಾರ ಮತ್ತು ಗುರುವಾರ ಕೂಡ ಪ್ರತಿಭಟನೆ ಮುಂದುವರಿದಿದೆ ಎಂದು ವರದಿಯಾಗಿದೆ.

“ಜನರು ನಿರಂತರ ಆಕ್ರಮಣದಿಂದ ಬಸವಳಿದು ಹೋಗಿದ್ದಾರೆ. ಅವರಿಗೆ ಇನ್ನು ಹೋಗಲು ಜಾಗವಿಲ್ಲ. ಹಾಗಾಗಿ, ಯುದ್ದ ನಿಲ್ಲಿಸಿ ಎಂದು ಸ್ವಯಂ ಪ್ರೇರಿತರಾಗಿ ಬೀದಿಗಿಳಿದು ಪ್ರತಿಭಟಿಸಿದ್ದಾರೆ” ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಬುಧವಾರ ಗಾಝಾದಲ್ಲಿ ಕನಿಷ್ಠ 9 ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ” ನಮ್ಮ ರಕ್ತವನ್ನು ಮಾರಿದ ಎಲ್ಲರಿಗೂ ನಮ್ಮ ಧ್ವನಿ ತಲುಪಲಿ” ಎಂಬ ಘೋಷಣೆಗಳನ್ನು ಕೂಗುತ್ತಾ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ತಿಳಿಸಿವೆ.

ಗಾಝಾದಲ್ಲಿ ಹಮಾಸ್ ವಿರುದ್ದ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು,”ದಾಳಿ ಪುನರಾರಂಭಿಸುವ ನಮ್ಮ ನಿರ್ಧಾರ ಗಾಝಾದಲ್ಲಿ ಕೆಲಸ ಮಾಡುತ್ತಿದೆ. ಹಮಾಸ್ ಕದನ ವಿರಾಮಕ್ಕೆ ಗೌರವ ಕೊಟ್ಟಿಲ್ಲ. ಒಪ್ಪಂದ ಮುರಿಯಲು ಅವರೇ ಕಾರಣ” ಎಂದು ದೂಷಿಸಿದ್ದಾರೆ.

ಅಕ್ಟೋಬರ್ 2023ರಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗ ಸಾವನ್ನಪ್ಪಿದವರ ಸಂಖ್ಯೆ 50 ಸಾವಿರ ದಾಟಿದೆ.

ಗಾಜಾ ನಗರದ ಜೈಟೌನ್ ಬಳಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಕಳೆದ 24 ಗಂಟೆಯಲ್ಲಿ ಯುದ್ಧಪೀಡಿತ ಪ್ರದೇಶದಾದ್ಯಂತ ನಡೆದ ದಾಳಿಗಳಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...