Homeಅಂತರಾಷ್ಟ್ರೀಯ'ಯುದ್ಧ ನಿಲ್ಲಿಸಿ': ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

- Advertisement -
- Advertisement -

ಪ್ರತಿನಿತ್ಯ ಸಾವು-ನೋವುಗಳನ್ನು ನೋಡುತ್ತಾ ಕುಗ್ಗಿ ಹೋಗಿರುವ ಗಾಝಾದ ಜನತೆ ಹಮಾಸ್ ಗುಂಪಿನ ವಿರುದ್ದವೇ ತಿರುಗಿ ಬಿದ್ದಿದ್ದು, ಇಸ್ರೇಲ್ ಜೊತೆಗಿನ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

ಕದನ ವಿರಾಮ ಒಪ್ಪಂದ ಮುರಿದುಬಿದ್ದ ಕಾರಣ ಇಸ್ರೇಲ್ ಮತ್ತೆ ಆಕ್ರಮಣ ನಡೆಸುತ್ತಿದೆ. ಪ್ರತಿನಿತ್ಯ ನೂರಾರು ಜನರು ಸಾಯುತ್ತಿದ್ದಾರೆ. ಇಸ್ರೇಲ್‌ಗೆ ಏನೂ ಮಾಡಲು ನಮಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ , ಹಮಾಸ್ ಮೇಲೆ ಒತ್ತಡ ಹೇರಲು ಪ್ರತಿಭಟಿಸಿರುವುದಾಗಿ ಉತ್ತರ ಗಾಝಾದ ಜನತೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಜನವಸತಿ ಪ್ರದೇಶವಾಗಿದ್ದ ಉತ್ತರ ಗಾಝಾ ಇಸ್ರೇಲ್‌ನ ನಿರಂತರ ದಾಳಿಯಿಂದ ಬರೀ ಕಟ್ಟಡ ಅವಶೇಷಗಳ ರಾಶಿಯಾಗಿ ಪರಿವರ್ತನೆಗೊಂಡಿದೆ. ಇಲ್ಲಿನ ಕಂದಮ್ಮಗಳು ಸೇರಿದಂತೆ ಸಾವಿರಾರು ಜನರನ್ನು ಇಸ್ರೇಲ್‌ ಹತ್ಯೆ ನಡೆಸಿದೆ. ಕಟ್ಟಡಗಳನ್ನು ಧ್ವಂಸ ಮಾಡಿದೆ. ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹಾಳುಗೆಡವಿದೆ. ಸಾವಿರಾರು ಜನರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ಪಲಾಯನ ಮಾಡಿದ್ದಾರೆ.

ಕಳೆದ ಮಂಗಳವಾರ ಉತ್ತರ ಗಾಝಾದ ಬೈತ್ ಲಾಹಿಯಾದ ಬೀದಿಗಳಲ್ಲಿ ಜಮಾಯಿಸಿದ ನೂರಾರು ಜನರು “ದೇವರ ದಯೆಯಿಂದ ಹಮಾಸ್ ತೊಲಗಲಿ, ಹಮಾಸ್‌ನವರು ಭಯೋತ್ಪಾದಕರು, ನಾವು ಯುದ್ದವನ್ನು ಕೊನೆಗೊಳಿಸಲು ಭಯಸುತ್ತೇವೆ” ಎಂಬ ಘೋಷಣೆಗಳನ್ನು ಕೂಗಿ ನೋವು ಹೊರಹಾಕಿದ್ದಾರೆ. ಬುಧವಾರ ಮತ್ತು ಗುರುವಾರ ಕೂಡ ಪ್ರತಿಭಟನೆ ಮುಂದುವರಿದಿದೆ ಎಂದು ವರದಿಯಾಗಿದೆ.

“ಜನರು ನಿರಂತರ ಆಕ್ರಮಣದಿಂದ ಬಸವಳಿದು ಹೋಗಿದ್ದಾರೆ. ಅವರಿಗೆ ಇನ್ನು ಹೋಗಲು ಜಾಗವಿಲ್ಲ. ಹಾಗಾಗಿ, ಯುದ್ದ ನಿಲ್ಲಿಸಿ ಎಂದು ಸ್ವಯಂ ಪ್ರೇರಿತರಾಗಿ ಬೀದಿಗಿಳಿದು ಪ್ರತಿಭಟಿಸಿದ್ದಾರೆ” ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಬುಧವಾರ ಗಾಝಾದಲ್ಲಿ ಕನಿಷ್ಠ 9 ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ” ನಮ್ಮ ರಕ್ತವನ್ನು ಮಾರಿದ ಎಲ್ಲರಿಗೂ ನಮ್ಮ ಧ್ವನಿ ತಲುಪಲಿ” ಎಂಬ ಘೋಷಣೆಗಳನ್ನು ಕೂಗುತ್ತಾ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ತಿಳಿಸಿವೆ.

ಗಾಝಾದಲ್ಲಿ ಹಮಾಸ್ ವಿರುದ್ದ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು,”ದಾಳಿ ಪುನರಾರಂಭಿಸುವ ನಮ್ಮ ನಿರ್ಧಾರ ಗಾಝಾದಲ್ಲಿ ಕೆಲಸ ಮಾಡುತ್ತಿದೆ. ಹಮಾಸ್ ಕದನ ವಿರಾಮಕ್ಕೆ ಗೌರವ ಕೊಟ್ಟಿಲ್ಲ. ಒಪ್ಪಂದ ಮುರಿಯಲು ಅವರೇ ಕಾರಣ” ಎಂದು ದೂಷಿಸಿದ್ದಾರೆ.

ಅಕ್ಟೋಬರ್ 2023ರಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗ ಸಾವನ್ನಪ್ಪಿದವರ ಸಂಖ್ಯೆ 50 ಸಾವಿರ ದಾಟಿದೆ.

ಗಾಜಾ ನಗರದ ಜೈಟೌನ್ ಬಳಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಕಳೆದ 24 ಗಂಟೆಯಲ್ಲಿ ಯುದ್ಧಪೀಡಿತ ಪ್ರದೇಶದಾದ್ಯಂತ ನಡೆದ ದಾಳಿಗಳಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...