Homeಅಂತರಾಷ್ಟ್ರೀಯ'ಯುದ್ಧ ನಿಲ್ಲಿಸಿ': ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

- Advertisement -
- Advertisement -

ಪ್ರತಿನಿತ್ಯ ಸಾವು-ನೋವುಗಳನ್ನು ನೋಡುತ್ತಾ ಕುಗ್ಗಿ ಹೋಗಿರುವ ಗಾಝಾದ ಜನತೆ ಹಮಾಸ್ ಗುಂಪಿನ ವಿರುದ್ದವೇ ತಿರುಗಿ ಬಿದ್ದಿದ್ದು, ಇಸ್ರೇಲ್ ಜೊತೆಗಿನ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

ಕದನ ವಿರಾಮ ಒಪ್ಪಂದ ಮುರಿದುಬಿದ್ದ ಕಾರಣ ಇಸ್ರೇಲ್ ಮತ್ತೆ ಆಕ್ರಮಣ ನಡೆಸುತ್ತಿದೆ. ಪ್ರತಿನಿತ್ಯ ನೂರಾರು ಜನರು ಸಾಯುತ್ತಿದ್ದಾರೆ. ಇಸ್ರೇಲ್‌ಗೆ ಏನೂ ಮಾಡಲು ನಮಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ , ಹಮಾಸ್ ಮೇಲೆ ಒತ್ತಡ ಹೇರಲು ಪ್ರತಿಭಟಿಸಿರುವುದಾಗಿ ಉತ್ತರ ಗಾಝಾದ ಜನತೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಜನವಸತಿ ಪ್ರದೇಶವಾಗಿದ್ದ ಉತ್ತರ ಗಾಝಾ ಇಸ್ರೇಲ್‌ನ ನಿರಂತರ ದಾಳಿಯಿಂದ ಬರೀ ಕಟ್ಟಡ ಅವಶೇಷಗಳ ರಾಶಿಯಾಗಿ ಪರಿವರ್ತನೆಗೊಂಡಿದೆ. ಇಲ್ಲಿನ ಕಂದಮ್ಮಗಳು ಸೇರಿದಂತೆ ಸಾವಿರಾರು ಜನರನ್ನು ಇಸ್ರೇಲ್‌ ಹತ್ಯೆ ನಡೆಸಿದೆ. ಕಟ್ಟಡಗಳನ್ನು ಧ್ವಂಸ ಮಾಡಿದೆ. ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹಾಳುಗೆಡವಿದೆ. ಸಾವಿರಾರು ಜನರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ಪಲಾಯನ ಮಾಡಿದ್ದಾರೆ.

ಕಳೆದ ಮಂಗಳವಾರ ಉತ್ತರ ಗಾಝಾದ ಬೈತ್ ಲಾಹಿಯಾದ ಬೀದಿಗಳಲ್ಲಿ ಜಮಾಯಿಸಿದ ನೂರಾರು ಜನರು “ದೇವರ ದಯೆಯಿಂದ ಹಮಾಸ್ ತೊಲಗಲಿ, ಹಮಾಸ್‌ನವರು ಭಯೋತ್ಪಾದಕರು, ನಾವು ಯುದ್ದವನ್ನು ಕೊನೆಗೊಳಿಸಲು ಭಯಸುತ್ತೇವೆ” ಎಂಬ ಘೋಷಣೆಗಳನ್ನು ಕೂಗಿ ನೋವು ಹೊರಹಾಕಿದ್ದಾರೆ. ಬುಧವಾರ ಮತ್ತು ಗುರುವಾರ ಕೂಡ ಪ್ರತಿಭಟನೆ ಮುಂದುವರಿದಿದೆ ಎಂದು ವರದಿಯಾಗಿದೆ.

“ಜನರು ನಿರಂತರ ಆಕ್ರಮಣದಿಂದ ಬಸವಳಿದು ಹೋಗಿದ್ದಾರೆ. ಅವರಿಗೆ ಇನ್ನು ಹೋಗಲು ಜಾಗವಿಲ್ಲ. ಹಾಗಾಗಿ, ಯುದ್ದ ನಿಲ್ಲಿಸಿ ಎಂದು ಸ್ವಯಂ ಪ್ರೇರಿತರಾಗಿ ಬೀದಿಗಿಳಿದು ಪ್ರತಿಭಟಿಸಿದ್ದಾರೆ” ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಬುಧವಾರ ಗಾಝಾದಲ್ಲಿ ಕನಿಷ್ಠ 9 ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ” ನಮ್ಮ ರಕ್ತವನ್ನು ಮಾರಿದ ಎಲ್ಲರಿಗೂ ನಮ್ಮ ಧ್ವನಿ ತಲುಪಲಿ” ಎಂಬ ಘೋಷಣೆಗಳನ್ನು ಕೂಗುತ್ತಾ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ತಿಳಿಸಿವೆ.

ಗಾಝಾದಲ್ಲಿ ಹಮಾಸ್ ವಿರುದ್ದ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು,”ದಾಳಿ ಪುನರಾರಂಭಿಸುವ ನಮ್ಮ ನಿರ್ಧಾರ ಗಾಝಾದಲ್ಲಿ ಕೆಲಸ ಮಾಡುತ್ತಿದೆ. ಹಮಾಸ್ ಕದನ ವಿರಾಮಕ್ಕೆ ಗೌರವ ಕೊಟ್ಟಿಲ್ಲ. ಒಪ್ಪಂದ ಮುರಿಯಲು ಅವರೇ ಕಾರಣ” ಎಂದು ದೂಷಿಸಿದ್ದಾರೆ.

ಅಕ್ಟೋಬರ್ 2023ರಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗ ಸಾವನ್ನಪ್ಪಿದವರ ಸಂಖ್ಯೆ 50 ಸಾವಿರ ದಾಟಿದೆ.

ಗಾಜಾ ನಗರದ ಜೈಟೌನ್ ಬಳಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಕಳೆದ 24 ಗಂಟೆಯಲ್ಲಿ ಯುದ್ಧಪೀಡಿತ ಪ್ರದೇಶದಾದ್ಯಂತ ನಡೆದ ದಾಳಿಗಳಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...