Homeಚಳವಳಿಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ತಡೆ: ಸರ್ಕಾರಿ ಸ್ವಾಮ್ಯದಲ್ಲಿ ಮುಂದುವರೆಸಲು ತೀರ್ಮಾನ

ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ತಡೆ: ಸರ್ಕಾರಿ ಸ್ವಾಮ್ಯದಲ್ಲಿ ಮುಂದುವರೆಸಲು ತೀರ್ಮಾನ

- Advertisement -
- Advertisement -

ಮಂಡ್ಯ ಜನರ ಜೀವನಾಡಿ ಎನಿಸಿಕೊಂಡಿರುವ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗೀಯವರಿಗೆ ಹಸ್ತಾಂತರಿಸುವುದು ಬೇಡ ಎಂದು ಕಳೆದ ಒಂದೂವರೆ ತಿಂಗಳುಗಳಿಂದ ಪ್ರತಿಭಟಿಸುತ್ತಿದ್ದ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಮೈಶುಗರ್ ಕಾರ್ಖಾನೆಯನ್ನು ಗುತ್ತಿಗೆ ನೀಡುವ ಕ್ರಮಕ್ಕೆ ತಡೆ ನೀಡಿ, ಮುಂದಿನ ಹಂಗಾಮಿನಿಂದ ಸರ್ಕಾರಿ ಸ್ವಾಮ್ಯದಲ್ಲಿಯೇ ಕಬ್ಬು ನುರಿಸಲು ಪ್ರಯತ್ನಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 18 ರಂದು ಮಂಡ್ಯದ ರೈತ ಪ್ರತಿನಿಧಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ ಏಕೈಕ ಸರ್ಕಾರಿ ಕಾರ್ಖಾನೆಯನ್ನು ಖಾಸಗೀಯವರಿಗೆ ಗುತ್ತಿಗೆ ನೀಡಬೇಕೆಂದು ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿತ್ತು. ಇದರ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಕಳೆದ 36 ದಿನಗಳಿಂದ ಮಂಡ್ಯದಲ್ಲಿ ರೈತ, ಪ್ರಗತಿಪರ, ಕನ್ನಡಪರ ಮತ್ತು ಎಡಪಕ್ಷಗಳು ನಿರಂತರ ಪ್ರತಿಭಟನೆ ನಡೆಸಿದ್ದವು. ಇದೆಲ್ಲದರ ಪರಿಣಾಮವಾಗಿ ಸಿಎಂ ಖಾಸಗೀಕರಣ ಪ್ರಕ್ರಿಯೆಗೆ ತಡೆಯೊಡ್ಡಿದ್ದು, ಸರ್ಕಾರದಿಂದಲೇ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ ಮಾಡುವುದಾಗಿ ತಿಳಿಸಿದ್ದಾರೆ.

ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೈಶುಗರ್ ಗೆ ಒಬ್ಬ ಅನುಭವಿ ಹಿರಿಯ ತಜ್ಞರ ನೇತೃತ್ವದಲ್ಲಿ ಸಮೀತಿ ನೇಮಕ ಮಾಡಲಾಗುವುದು. ತಜ್ಞರ ಸಮಿತಿ ಮೂರು ತಿಂಗಳಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಲಿದೆ. ಅದರ ಆಧಾರದಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಕ್ರಮಗಳನ್ನು ವಹಿಸಲಾಗುವುದು.‌ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಯಂತ್ರೋಪಕರಣಗಳ ದುರಸ್ಥಿಗೆ ಆರ್ಥಿಕ ನೆರವು ನೀಡಲಾಗುವುದು. ಬರುವ ಹಂಗಾಮಿನಿಂದ ಕಬ್ಬು ನುರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು” ಎಂದಿದ್ದಾರೆ.

ಕಾರ್ಖಾನೆ ಪುನರಾರಂಭಕ್ಕೆ ಅಗತ್ಯವಿರುವ ಹಣಕಾಸಿನ ವಿವರ ಹಾಗೂ ದುಡಿಯುವ ಬಂಡವಾಳ ಕುರಿತಂತೆ ಮಾಹಿತಿ ಒದಗಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಉನ್ನತ ಮಟ್ಟದ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ, ಮುನೇನಕೊಪ್ಪ, ಎಸ್ ಟಿ ಸೋಮಶೇಖರ್, ನಾರಾಯಣಗೌಡ, ಮಂಡ್ಯ ಜಿಲ್ಲೆ ಸಂಸದೆ ಹಾಗೂ ಎಲ್ಲಾ ಶಾಸಕರು, ಮಂಡ್ಯ ಜಿಲ್ಲಾ ಹಿತರಕ್ಷಣಾ ವೇದಿಕೆಯ ಪಧಾದಿಕಾರಿಗಳು, ಹೋರಾಟಗಾರರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಎಂ.ಪುಟ್ಟಮಾದು, ಶ್ರೀ ಮತಿ ದೇವಿ, ಎಂ.ಬಿ.ಶ್ರೀನಿವಾಸ್, ಇಂಡುವಾಳು ಚಂದ್ರಶೇಖರ್, ಸುಧೀರ್ ಕುಮಾರ್, ತಗ್ಗಳ್ಳಿ ವೆಂಕಟೇಶ್, ಕಾಳೇಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.


ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...