Homeಚಳವಳಿಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ತಡೆ: ಸರ್ಕಾರಿ ಸ್ವಾಮ್ಯದಲ್ಲಿ ಮುಂದುವರೆಸಲು ತೀರ್ಮಾನ

ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ತಡೆ: ಸರ್ಕಾರಿ ಸ್ವಾಮ್ಯದಲ್ಲಿ ಮುಂದುವರೆಸಲು ತೀರ್ಮಾನ

- Advertisement -
- Advertisement -

ಮಂಡ್ಯ ಜನರ ಜೀವನಾಡಿ ಎನಿಸಿಕೊಂಡಿರುವ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗೀಯವರಿಗೆ ಹಸ್ತಾಂತರಿಸುವುದು ಬೇಡ ಎಂದು ಕಳೆದ ಒಂದೂವರೆ ತಿಂಗಳುಗಳಿಂದ ಪ್ರತಿಭಟಿಸುತ್ತಿದ್ದ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಮೈಶುಗರ್ ಕಾರ್ಖಾನೆಯನ್ನು ಗುತ್ತಿಗೆ ನೀಡುವ ಕ್ರಮಕ್ಕೆ ತಡೆ ನೀಡಿ, ಮುಂದಿನ ಹಂಗಾಮಿನಿಂದ ಸರ್ಕಾರಿ ಸ್ವಾಮ್ಯದಲ್ಲಿಯೇ ಕಬ್ಬು ನುರಿಸಲು ಪ್ರಯತ್ನಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 18 ರಂದು ಮಂಡ್ಯದ ರೈತ ಪ್ರತಿನಿಧಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ ಏಕೈಕ ಸರ್ಕಾರಿ ಕಾರ್ಖಾನೆಯನ್ನು ಖಾಸಗೀಯವರಿಗೆ ಗುತ್ತಿಗೆ ನೀಡಬೇಕೆಂದು ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿತ್ತು. ಇದರ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಕಳೆದ 36 ದಿನಗಳಿಂದ ಮಂಡ್ಯದಲ್ಲಿ ರೈತ, ಪ್ರಗತಿಪರ, ಕನ್ನಡಪರ ಮತ್ತು ಎಡಪಕ್ಷಗಳು ನಿರಂತರ ಪ್ರತಿಭಟನೆ ನಡೆಸಿದ್ದವು. ಇದೆಲ್ಲದರ ಪರಿಣಾಮವಾಗಿ ಸಿಎಂ ಖಾಸಗೀಕರಣ ಪ್ರಕ್ರಿಯೆಗೆ ತಡೆಯೊಡ್ಡಿದ್ದು, ಸರ್ಕಾರದಿಂದಲೇ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ ಮಾಡುವುದಾಗಿ ತಿಳಿಸಿದ್ದಾರೆ.

ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೈಶುಗರ್ ಗೆ ಒಬ್ಬ ಅನುಭವಿ ಹಿರಿಯ ತಜ್ಞರ ನೇತೃತ್ವದಲ್ಲಿ ಸಮೀತಿ ನೇಮಕ ಮಾಡಲಾಗುವುದು. ತಜ್ಞರ ಸಮಿತಿ ಮೂರು ತಿಂಗಳಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಲಿದೆ. ಅದರ ಆಧಾರದಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಕ್ರಮಗಳನ್ನು ವಹಿಸಲಾಗುವುದು.‌ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಯಂತ್ರೋಪಕರಣಗಳ ದುರಸ್ಥಿಗೆ ಆರ್ಥಿಕ ನೆರವು ನೀಡಲಾಗುವುದು. ಬರುವ ಹಂಗಾಮಿನಿಂದ ಕಬ್ಬು ನುರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು” ಎಂದಿದ್ದಾರೆ.

ಕಾರ್ಖಾನೆ ಪುನರಾರಂಭಕ್ಕೆ ಅಗತ್ಯವಿರುವ ಹಣಕಾಸಿನ ವಿವರ ಹಾಗೂ ದುಡಿಯುವ ಬಂಡವಾಳ ಕುರಿತಂತೆ ಮಾಹಿತಿ ಒದಗಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಉನ್ನತ ಮಟ್ಟದ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ, ಮುನೇನಕೊಪ್ಪ, ಎಸ್ ಟಿ ಸೋಮಶೇಖರ್, ನಾರಾಯಣಗೌಡ, ಮಂಡ್ಯ ಜಿಲ್ಲೆ ಸಂಸದೆ ಹಾಗೂ ಎಲ್ಲಾ ಶಾಸಕರು, ಮಂಡ್ಯ ಜಿಲ್ಲಾ ಹಿತರಕ್ಷಣಾ ವೇದಿಕೆಯ ಪಧಾದಿಕಾರಿಗಳು, ಹೋರಾಟಗಾರರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಎಂ.ಪುಟ್ಟಮಾದು, ಶ್ರೀ ಮತಿ ದೇವಿ, ಎಂ.ಬಿ.ಶ್ರೀನಿವಾಸ್, ಇಂಡುವಾಳು ಚಂದ್ರಶೇಖರ್, ಸುಧೀರ್ ಕುಮಾರ್, ತಗ್ಗಳ್ಳಿ ವೆಂಕಟೇಶ್, ಕಾಳೇಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.


ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...