Homeಚಳವಳಿಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ತಡೆ: ಸರ್ಕಾರಿ ಸ್ವಾಮ್ಯದಲ್ಲಿ ಮುಂದುವರೆಸಲು ತೀರ್ಮಾನ

ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ತಡೆ: ಸರ್ಕಾರಿ ಸ್ವಾಮ್ಯದಲ್ಲಿ ಮುಂದುವರೆಸಲು ತೀರ್ಮಾನ

- Advertisement -
- Advertisement -

ಮಂಡ್ಯ ಜನರ ಜೀವನಾಡಿ ಎನಿಸಿಕೊಂಡಿರುವ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗೀಯವರಿಗೆ ಹಸ್ತಾಂತರಿಸುವುದು ಬೇಡ ಎಂದು ಕಳೆದ ಒಂದೂವರೆ ತಿಂಗಳುಗಳಿಂದ ಪ್ರತಿಭಟಿಸುತ್ತಿದ್ದ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಮೈಶುಗರ್ ಕಾರ್ಖಾನೆಯನ್ನು ಗುತ್ತಿಗೆ ನೀಡುವ ಕ್ರಮಕ್ಕೆ ತಡೆ ನೀಡಿ, ಮುಂದಿನ ಹಂಗಾಮಿನಿಂದ ಸರ್ಕಾರಿ ಸ್ವಾಮ್ಯದಲ್ಲಿಯೇ ಕಬ್ಬು ನುರಿಸಲು ಪ್ರಯತ್ನಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 18 ರಂದು ಮಂಡ್ಯದ ರೈತ ಪ್ರತಿನಿಧಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ ಏಕೈಕ ಸರ್ಕಾರಿ ಕಾರ್ಖಾನೆಯನ್ನು ಖಾಸಗೀಯವರಿಗೆ ಗುತ್ತಿಗೆ ನೀಡಬೇಕೆಂದು ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿತ್ತು. ಇದರ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಕಳೆದ 36 ದಿನಗಳಿಂದ ಮಂಡ್ಯದಲ್ಲಿ ರೈತ, ಪ್ರಗತಿಪರ, ಕನ್ನಡಪರ ಮತ್ತು ಎಡಪಕ್ಷಗಳು ನಿರಂತರ ಪ್ರತಿಭಟನೆ ನಡೆಸಿದ್ದವು. ಇದೆಲ್ಲದರ ಪರಿಣಾಮವಾಗಿ ಸಿಎಂ ಖಾಸಗೀಕರಣ ಪ್ರಕ್ರಿಯೆಗೆ ತಡೆಯೊಡ್ಡಿದ್ದು, ಸರ್ಕಾರದಿಂದಲೇ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ ಮಾಡುವುದಾಗಿ ತಿಳಿಸಿದ್ದಾರೆ.

ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೈಶುಗರ್ ಗೆ ಒಬ್ಬ ಅನುಭವಿ ಹಿರಿಯ ತಜ್ಞರ ನೇತೃತ್ವದಲ್ಲಿ ಸಮೀತಿ ನೇಮಕ ಮಾಡಲಾಗುವುದು. ತಜ್ಞರ ಸಮಿತಿ ಮೂರು ತಿಂಗಳಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಲಿದೆ. ಅದರ ಆಧಾರದಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಕ್ರಮಗಳನ್ನು ವಹಿಸಲಾಗುವುದು.‌ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಯಂತ್ರೋಪಕರಣಗಳ ದುರಸ್ಥಿಗೆ ಆರ್ಥಿಕ ನೆರವು ನೀಡಲಾಗುವುದು. ಬರುವ ಹಂಗಾಮಿನಿಂದ ಕಬ್ಬು ನುರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು” ಎಂದಿದ್ದಾರೆ.

ಕಾರ್ಖಾನೆ ಪುನರಾರಂಭಕ್ಕೆ ಅಗತ್ಯವಿರುವ ಹಣಕಾಸಿನ ವಿವರ ಹಾಗೂ ದುಡಿಯುವ ಬಂಡವಾಳ ಕುರಿತಂತೆ ಮಾಹಿತಿ ಒದಗಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಉನ್ನತ ಮಟ್ಟದ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ, ಮುನೇನಕೊಪ್ಪ, ಎಸ್ ಟಿ ಸೋಮಶೇಖರ್, ನಾರಾಯಣಗೌಡ, ಮಂಡ್ಯ ಜಿಲ್ಲೆ ಸಂಸದೆ ಹಾಗೂ ಎಲ್ಲಾ ಶಾಸಕರು, ಮಂಡ್ಯ ಜಿಲ್ಲಾ ಹಿತರಕ್ಷಣಾ ವೇದಿಕೆಯ ಪಧಾದಿಕಾರಿಗಳು, ಹೋರಾಟಗಾರರಾದ ಕೆ.ಬೋರಯ್ಯ, ಸುನಂದಾ ಜಯರಾಂ, ಎಂ.ಪುಟ್ಟಮಾದು, ಶ್ರೀ ಮತಿ ದೇವಿ, ಎಂ.ಬಿ.ಶ್ರೀನಿವಾಸ್, ಇಂಡುವಾಳು ಚಂದ್ರಶೇಖರ್, ಸುಧೀರ್ ಕುಮಾರ್, ತಗ್ಗಳ್ಳಿ ವೆಂಕಟೇಶ್, ಕಾಳೇಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.


ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...