Homeಚಳವಳಿದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

- Advertisement -
- Advertisement -

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಇಡೀ ಪ್ರಪಂಚವೇ ನಲುಗಿ ಹೋಗಿದೆ. ಲಕ್ಷಾಂತರ ಸಾವುಗಳು ಸಂಭವಿಸಿವೆ. ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು ಭಾರತವು ಹೆಚ್ಚು ಹೊಡೆತ ತಿಂದಿದೆ. ಜೀವನದ ಅರ್ಥವೇನು? ಬದುಕಿನ ಮಹತ್ವವೇನು ಎಂಬುದನ್ನು ಕೋವಿಡ್ ಪಾಠ ಮಾಡಿ ಹೋಗಿದೆ. ಆದರೆ ಇದರಿಂದ ಪಾಠ ಕಲಿಯದ ಬಹಳಷ್ಟು ಮಂದಿ ತಮ್ಮ ಹಿಂದಿನ ವಿಕೃತಿ, ದರ್ಪ, ಸಣ್ಣತಣಗಳಲ್ಲಿಯೇ ಮುಳುಗಿದ್ದಾರೆ. ಹಾಗಾಗಿಯೇ ಕೋವಿಡ್ ಸಂದರ್ಭದಲ್ಲಿಯೂ ಸಹ ದಲಿತರ ಮೇಲೆ ದೌರ್ಜನ್ಯ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಗಳು ಎಗ್ಗಿಲ್ಲದೆ ನಡೆಯುತ್ತಿವೆ. ಇದನ್ನು ಖಂಡಿಸಿ ಇಂದು ದಲಿತ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ಸಂಘಟನೆಯು ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಸಿದೆ.

ಬೆಳಗಾವಿಯ ರಾಮದುರ್ಗದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ, ವಿಜಯಪುರದ ಕುದುರಿ ಸಾಲವಾಡಗಿಯಲ್ಲಿ ಇಬ್ಬರು ದಲಿತ ಯುವತಿಯರ ಅತ್ಯಾಚಾರ ಮತ್ತು ಕೊಲೆ,  ಸುರಪುರದ ಶಾಖಾಪುರ ಹೆಚ್.ಎಸ್ ನಲ್ಲಿ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ.

ಅದೇ ರೀತಿಯಲ್ಲಿ ಜಗಳೂರಿನ ಕಸವನಹಳ್ಳಿ ಯುವತಿಗೆ ಫೀಸ್ ಕಟ್ಟಿಲ್ಲವೆಂದು ಪ್ರಾಂಶುಪಾಲರಿಂದಲೇ ಜಾತಿ ನಿಂದನೆ ಮಾಡಿದ್ದಾರೆ. ಅವಮಾನ ತಾಳಲಾರದೆ ಯುವತಿ ಕಾಲೇಜಿನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಚಿಕ್ಕಮಗಳೂರಿನ ಗೋಣಿಬೀಡುನಲ್ಲಿ ಪಿಎಸ್‌ಐ ಒಬ್ಬ ದಲಿತ ಯುವಕನಿಗೆ ಮೂತ್ರ ಕುಡಿಯುವಂತೆ ಮಾಡಿದ್ದಾನೆ.. ಈ ಎಲ್ಲಾ ದೌರ್ಜನ್ಯಗಳು ಕೇವಲ ಎರಡು ತಿಂಗಳ ಅವಧಿಯಲ್ಲಿ ಜರುಗಿವೆ.. ಈ ಅವಮಾನಗಳನ್ನು ಎಲ್ಲಿಯತನಕ ಸಹಿಸಿಕೊಳ್ಳಬೇಕು ಎಂದು ದಸಸಂ ಒಕ್ಕೂಟ ಪ್ರಶ್ನಿಸಿದೆ.

ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಮತ್ತು ಬಡಜನತೆಗೆ ಪ್ಯಾಕೇಜ್ ಜಾರಿಯಾಗಲಿ ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ದಸಸಂ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ದಲಿತರ ಮೇಲೆ ಹೆಚ್ಚುತ್ತಿರುವ ಜಾತಿ ದೌರ್ಜನ್ಯಗಳನ್ನು ಖಂಡಿಸಿ ಮತ್ತು
ಬಡವರೆಲ್ಲರಿಗೂ ಸಮಗ್ರ ದಿನಸಿ ಹಾಗೂ ಮಾಸಿಕ 5000 ರೂ ನೆರವು ಧನ ನೀಡಲೆಬೇಕೆಂದು ಆಗ್ರಹಿಸಿ ಇಂದು ವಿಜಯಪುರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಮಂಡ್ಯ, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಮತ್ತು ಹಕ್ಕೊತ್ತಾಯ ಸಲ್ಲಿಕೆ ನಡೆದಿದೆ.

ಅದರ ಕೆಲವು ಫೋಟೊಗಳು ಇಲ್ಲಿವೆ.


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...