Homeಚಳವಳಿದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

- Advertisement -
- Advertisement -

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಇಡೀ ಪ್ರಪಂಚವೇ ನಲುಗಿ ಹೋಗಿದೆ. ಲಕ್ಷಾಂತರ ಸಾವುಗಳು ಸಂಭವಿಸಿವೆ. ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು ಭಾರತವು ಹೆಚ್ಚು ಹೊಡೆತ ತಿಂದಿದೆ. ಜೀವನದ ಅರ್ಥವೇನು? ಬದುಕಿನ ಮಹತ್ವವೇನು ಎಂಬುದನ್ನು ಕೋವಿಡ್ ಪಾಠ ಮಾಡಿ ಹೋಗಿದೆ. ಆದರೆ ಇದರಿಂದ ಪಾಠ ಕಲಿಯದ ಬಹಳಷ್ಟು ಮಂದಿ ತಮ್ಮ ಹಿಂದಿನ ವಿಕೃತಿ, ದರ್ಪ, ಸಣ್ಣತಣಗಳಲ್ಲಿಯೇ ಮುಳುಗಿದ್ದಾರೆ. ಹಾಗಾಗಿಯೇ ಕೋವಿಡ್ ಸಂದರ್ಭದಲ್ಲಿಯೂ ಸಹ ದಲಿತರ ಮೇಲೆ ದೌರ್ಜನ್ಯ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಗಳು ಎಗ್ಗಿಲ್ಲದೆ ನಡೆಯುತ್ತಿವೆ. ಇದನ್ನು ಖಂಡಿಸಿ ಇಂದು ದಲಿತ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ಸಂಘಟನೆಯು ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಸಿದೆ.

ಬೆಳಗಾವಿಯ ರಾಮದುರ್ಗದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ, ವಿಜಯಪುರದ ಕುದುರಿ ಸಾಲವಾಡಗಿಯಲ್ಲಿ ಇಬ್ಬರು ದಲಿತ ಯುವತಿಯರ ಅತ್ಯಾಚಾರ ಮತ್ತು ಕೊಲೆ,  ಸುರಪುರದ ಶಾಖಾಪುರ ಹೆಚ್.ಎಸ್ ನಲ್ಲಿ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ.

ಅದೇ ರೀತಿಯಲ್ಲಿ ಜಗಳೂರಿನ ಕಸವನಹಳ್ಳಿ ಯುವತಿಗೆ ಫೀಸ್ ಕಟ್ಟಿಲ್ಲವೆಂದು ಪ್ರಾಂಶುಪಾಲರಿಂದಲೇ ಜಾತಿ ನಿಂದನೆ ಮಾಡಿದ್ದಾರೆ. ಅವಮಾನ ತಾಳಲಾರದೆ ಯುವತಿ ಕಾಲೇಜಿನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಚಿಕ್ಕಮಗಳೂರಿನ ಗೋಣಿಬೀಡುನಲ್ಲಿ ಪಿಎಸ್‌ಐ ಒಬ್ಬ ದಲಿತ ಯುವಕನಿಗೆ ಮೂತ್ರ ಕುಡಿಯುವಂತೆ ಮಾಡಿದ್ದಾನೆ.. ಈ ಎಲ್ಲಾ ದೌರ್ಜನ್ಯಗಳು ಕೇವಲ ಎರಡು ತಿಂಗಳ ಅವಧಿಯಲ್ಲಿ ಜರುಗಿವೆ.. ಈ ಅವಮಾನಗಳನ್ನು ಎಲ್ಲಿಯತನಕ ಸಹಿಸಿಕೊಳ್ಳಬೇಕು ಎಂದು ದಸಸಂ ಒಕ್ಕೂಟ ಪ್ರಶ್ನಿಸಿದೆ.

ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಮತ್ತು ಬಡಜನತೆಗೆ ಪ್ಯಾಕೇಜ್ ಜಾರಿಯಾಗಲಿ ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ದಸಸಂ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ದಲಿತರ ಮೇಲೆ ಹೆಚ್ಚುತ್ತಿರುವ ಜಾತಿ ದೌರ್ಜನ್ಯಗಳನ್ನು ಖಂಡಿಸಿ ಮತ್ತು
ಬಡವರೆಲ್ಲರಿಗೂ ಸಮಗ್ರ ದಿನಸಿ ಹಾಗೂ ಮಾಸಿಕ 5000 ರೂ ನೆರವು ಧನ ನೀಡಲೆಬೇಕೆಂದು ಆಗ್ರಹಿಸಿ ಇಂದು ವಿಜಯಪುರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಮಂಡ್ಯ, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಮತ್ತು ಹಕ್ಕೊತ್ತಾಯ ಸಲ್ಲಿಕೆ ನಡೆದಿದೆ.

ಅದರ ಕೆಲವು ಫೋಟೊಗಳು ಇಲ್ಲಿವೆ.


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....