Homeಚಳವಳಿಪ್ರೇಮ ಪತ್ರ ಬರೆಯುವುದು ನಿಲ್ಲಿಸಿ: ಕೇಂದ್ರಕ್ಕೆ ಹೋರಾಟ ನಿರತ ರೈತರು

ಪ್ರೇಮ ಪತ್ರ ಬರೆಯುವುದು ನಿಲ್ಲಿಸಿ: ಕೇಂದ್ರಕ್ಕೆ ಹೋರಾಟ ನಿರತ ರೈತರು

ಕೇಂದ್ರ ಸರ್ಕಾರದೊಂದಿಗೆ ಮುಕ್ತ ಮಾತುಕತೆಗೆ ನಾವು ತಯಾರಿದ್ದೇವೆ ಆದರೆ ಸರ್ಕಾರ ನಾವು ಈಗಾಗಲೇ ತಿರಸ್ಕರಿಸಿದ ’ಅರ್ಥಹೀನ’ ಪ್ರಸ್ತಾಪಗಳನ್ನು ಪುನರಾವರ್ತಿಸಬಾರದು ಎಂದು ಹೇಳಿದ್ದಾರೆ

- Advertisement -
- Advertisement -

ಕೇಂದ್ರದ ಹೊಸ ಕೃಷಿ ನೀತಿಗಳನ್ನು ವಿರೋಧಿಸಿ ಕಳೆದ 28 ದಿನಗಳಿಂದ ದೆಹಲಿ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರು ತಮ್ಮ ನಿಲುವನ್ನು ಇನ್ನೂ ಗಟ್ಟಿಗೊಳಿಸಿದ್ದು, ಕೇಂದ್ರ ಸರ್ಕಾರ ಒಂದು ಹೆಜ್ಜೆ ಇಟ್ಟರೆ ನಾವು ಎರಡು ಹೆಜ್ಜೆ ಇಡುತ್ತೇವೆ, ಆದರೆ ’ಪ್ರೇಮ ಪತ್ರ’ ಬರೆಯುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.

ಕೇಂದ್ರ ಸರ್ಕಾರದೊಂದಿಗೆ ಮುಕ್ತ ಮಾತುಕತೆಗೆ ನಾವು ತಯಾರಿದ್ದೇವೆ ಆದರೆ ಸರ್ಕಾರ ನಾವು ಈಗಾಗಲೇ ತಿರಸ್ಕರಿಸಿದ ’ಅರ್ಥಹೀನ’ ಪ್ರಸ್ತಾಪಗಳನ್ನು ಪುನರಾವರ್ತಿಸಬಾರದು, ಮಾತುಕತೆಗೆ ಪುನರಾರಂಭಕ್ಕಾಗಿ ದೃಡವಾವಾದ ಪ್ರಸ್ತಾಪವನ್ನು ತರಬೇಕು, ಆದರೆ ಕೃಷಿ ಕಾನೂನನ್ನು ರದ್ದು ಪಡಿಸುವುದಕ್ಕಿಂತ ಕಡಿಮೆಯಾಗಿ ನಾವು ಏನನ್ನೂ ಒಪ್ಪಿಕೊಳ್ಳುವುದಿಲ್ಲ ಎಂದು ಸ್ಫಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 25 ವಾಜಪೇಯಿ ಜನ್ಮದಿನ: ‘ಆಯ್ದ’ ರೈತರೊಂದಿಗೆ ಪ್ರಧಾನಿ ಮೋದಿ ಸಂವಹನ!

ಪ್ರತಿಭಟನೆ ಕೊನೆಗೊಳ್ಳುವ ಸಲುವಾಗಿ ರೈತರನ್ನು ದಣಿಸಲು ಸರ್ಕಾರ ಬಯಸಿದೆ, ಸರ್ಕಾರವು ರೈತರನ್ನು ತನ್ನ “ರಾಜಕೀಯ ವಿರೋಧಿಗಳು” ಎಂದು ಪರಿಗಣಿಸುತ್ತಿದೆ. ಯಾವುದೇ ಕಾರಣಕ್ಕೆ ಪ್ರತಿಭಟನಾ ನಿರತ ರೈತರು ತಿದ್ದುಪಡಿಗಳನ್ನು ಸ್ವೀಕರಿಸುವುದಿಲ್ಲ ಎಂದು ನಾವು ಈಗಾಗಲೇ ಗೃಹ ಸಚಿವ ಅಮಿತ್ ಷಾಗೆ ತಿಳಿಸಿದ್ದೇವೆ ಎಂದು ರೈತರು ತಿಳಿಸಿದ್ದಾರೆ.

“ನಮ್ಮ ಮೂಲಭೂತ ಆಕ್ಷೇಪಣೆಗಳನ್ನು ಅರ್ಥಮಾಡಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂಬುದು ನಮಗೆ ಆಶ್ಚರ್ಯವಾಗಿದೆ. ರೈತರ ಪ್ರತಿನಿಧಿಗಳು ಈ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಸರ್ಕಾರ ರೈತರು ಮಾತುಕತೆ ನಡೆಸಲು ಸಿದ್ಧರಿಲ್ಲ ಎಂಬುದನ್ನು ಯೋಜಿಸಲು ಬಯಸಿದೆ, ರೈತರು ಇದೆಲ್ಲಕ್ಕೂ ಸಿದ್ಧರಾಗಿರುವುದರಿಂದಲೆ ಚೆಂಡು ಸರ್ಕಾರದ ಅಂಗಳದಲ್ಲಿದೆ” ಎಂದು ಸ್ವರಾಜ್ ಅಭಿಯಾನದ ನಾಯಕ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಕೇಂದ್ರ ಮತ್ತು ರೈತರ ನಡುವಿನ ಬಿಕ್ಕಟ್ಟಿನ ಬಗ್ಗೆ ಅರ್ಜಿಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು. ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಇದನ್ನೂ ಓದಿ: ಕೃಷಿ ಕಾನೂನಿನ ಪ್ರಚಾರಕ್ಕೆ ತನ್ನ ಫೋಟೋ ಬಳಸಿದ ಬಿಜೆಪಿಗೆ ಲೀಗಲ್ ನೋಟಿಸ್ ನೀಡಿದ ರೈತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...