Homeಮುಖಪುಟಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ "ಕಿಸಾನ್ ಮೋರ್ಚಾ" ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ

- Advertisement -
- Advertisement -

ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 60 ದಿನಗಳನ್ನು ಪೂರೈಸಿದೆ. ಈ ನಡುವೆ ಒಂದೂವರೆ ವರ್ಷಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರದಕ್ಕೆ ನಿರ್ಧಾರಕ್ಕೆ ರೈತರು ಕಿವಿಗೊಟ್ಟಿಲ್ಲ. ಜನವರಿ 26 ರಂದು ಗಣರಾಜ್ಯೋತ್ಸವದಂದು ಬೃಹತ್ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಇಡಿ ವಿಶ್ವಕ್ಕೆ ತಮ್ಮ ಹೋರಾಟವನ್ನು ಪ್ರದರ್ಶಿಸುವತ್ತ ಅವರು ಗಮನ ನೀಡಿದ್ದಾರೆ. ಅಲ್ಲದೇ ರೈತ ಹೋರಾಟದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಪ್ರತಿದಿನವೂ ಒಂದೊಂದು ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದು ಇಂದು #StopChinaNotFarmers ಎಂಬ ಘೋಷಣೆ ನೀಡಿದೆ.

ಕೇಂದ್ರ ಸರ್ಕಾರ ಹೇಗಾದರೂ ಮಾಡಿ ರೈತ ಹೋರಾಟವನ್ನು ತಡೆಯಬೇಕೆಂದು ಪ್ರಯತ್ನಿಸುತ್ತಿದೆ. ಆದರೆ ಅದೇ ಸಮಯದಲ್ಲಿ ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ ಗಡಿ ಕ್ಯಾತೆ ತೆಗೆದಿದೆ. ಭಾರತದ ಪ್ರದೇಶದೊಳಕ್ಕೆ ನುಗ್ಗಿರುವ ಚೀನಾ ಅರುಣಾಚಲ ಪ್ರದೇಶದಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚೀನಾವನ್ನು ತಡೆಯಬೇಕೆ ಹೊರತು ರೈತ ಹೋರಾಟವನ್ನಲ್ಲ ಎಂದು ಕಿಸಾನ್ ಏಕ್ತಾ ಮೋರ್ಚಾ ಪ್ರತಿಪಾದಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ.

“ಯುದ್ಧದ ಸಮಯದಲ್ಲಿ, ಕಾನೂನು ಮೌನವಾಗುತ್ತದೆ. ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ. ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಾಜ್ ಸಂದು ಕಿಸಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

‘ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ “ಕಿಸಾನ್ ಮೋರ್ಚಾ” ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು’ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. ಅದರಲ್ಲಿ ಬೌಧ್ಧರು, ಸಿಖ್ಖರು, ಮುಸ್ಲಿಂ ಮತ್ತು ಹಿಂದೂಗಳು ಒಟ್ಟಿಗೆ ಹೋರಾಟದಲ್ಲಿರುವ ಚಿತ್ರಗಳನ್ನು ಷೇರ್ ಮಾಡಲಾಗಿದೆ.

ಇಂದಿನ ಹ್ಯಾಷ್‌ಟ್ಯಾಗ್ #StopChinaNotFarmers ಆಗಿದೆ. ಇದನ್ನು ಬಳಸಿ ಷೇರ್ ಮಾಡಿ, ವೈರಲ್ ಮಾಡಿ. ನಮ್ಮ ಧ್ವನಿ ಸರ್ಕಾರಕ್ಕೆ ಕೇಳಲೇಬೇಕು ಮತ್ತು ಅದು ಈ ಕರಾಳ ಕಾನೂನುಗಳನ್ನು ವಾಪಸ್ ಪಡೆಯಲೇಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರ ಕರೆ ಸಫಲ ನೀಡಿದ್ದು ಕೆಲವೇ ಗಂಟೆಗಳಲ್ಲಿ ಈ ಹ್ಯಾಷ್‌ಟ್ಯಾಗ್‌ ಇಡೀ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುತ್ತಿದೆ.

ರೈತರನ್ನು ತಡೆಯಲು ಸಿಂಗು ಗಡಿಯಲ್ಲಿ ಮರಳು ತುಂಬಿದ ಟ್ರಕ್‌ಗಳು, ಮುಳ್ಳುತಂತಿ, ಬ್ಯಾರಿಕೇಡ್‌ಗಳು ಮತ್ತು ಕಂಟೈನರ್‌ಗಳನ್ನು ಅಡ್ಡಲಾಗಿ ನಿಲ್ಲಿಸಲಾಗಿದೆ. ಮೋದಿಯವರು ಇದೇ ಕೋಪವನ್ನು ಚೀನಾದೊಂದಿಗೆ ತೋರಿಸಿದ್ದರೆ ಇಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮವೊಂದನ್ನು ನಿರ್ಮಿಸುತ್ತಿರಲಿಲ್ಲ ಎಂದು ನವಜೋತ್ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವವನ್ನು ಆಚರಿಸಲು ದೆಹಲಿಯಲ್ಲಿ ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ತಡೆಯಲು ದೆಹಲಿ ಗಡಿಯಲ್ಲಿ ಸರ್ಕಾರದ ಸಿದ್ಧತೆ ಇದು! ಅವರು ಚೀನಾ ಗಡಿಯಲ್ಲಿ ಈ ರೀತಿಯ ತಯಾರಿ ಮಾಡಿದ್ದರೆ, ಅವರು ಲಡಾಖ್ ಮತ್ತು ಅರುಣಾಚಲದಲ್ಲಿ ನಮ್ಮ ಭೂಮಿಯನ್ನು ಚೀನಾ ಆಕ್ರಮಿಸದಂತೆ ತಡೆಯಬಹುದಿತ್ತು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ವರ್ತಮಾನವು ನಮ್ಮ ಭವಿಷ್ಯದ ಹಿಂದಿನದು. ಇದು ನಮ್ಮ ಐತಿಹಾಸಿಕ ಕ್ಷಣ. ನಾವು ಅದನ್ನು ಹೇಗೆ ಗೆದ್ದೆವೆ ಎಂಬುದನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಮಣಿ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಯಾರನ್ನೂ ಗೆಲ್ಲಲು ಅಥವಾ ಸೋಲಿಸಲು ನಾವು ಇಲ್ಲಿಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ !! ಎಲ್ಲಾ 3 ಮಸೂದೆಗಳನ್ನು ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆಯೇ ಹೊರತು ಮುಂದೂಡಲೆಂದಲ್ಲ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...