Homeಮುಖಪುಟಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ "ಕಿಸಾನ್ ಮೋರ್ಚಾ" ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ

- Advertisement -
- Advertisement -

ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 60 ದಿನಗಳನ್ನು ಪೂರೈಸಿದೆ. ಈ ನಡುವೆ ಒಂದೂವರೆ ವರ್ಷಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರದಕ್ಕೆ ನಿರ್ಧಾರಕ್ಕೆ ರೈತರು ಕಿವಿಗೊಟ್ಟಿಲ್ಲ. ಜನವರಿ 26 ರಂದು ಗಣರಾಜ್ಯೋತ್ಸವದಂದು ಬೃಹತ್ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಇಡಿ ವಿಶ್ವಕ್ಕೆ ತಮ್ಮ ಹೋರಾಟವನ್ನು ಪ್ರದರ್ಶಿಸುವತ್ತ ಅವರು ಗಮನ ನೀಡಿದ್ದಾರೆ. ಅಲ್ಲದೇ ರೈತ ಹೋರಾಟದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಪ್ರತಿದಿನವೂ ಒಂದೊಂದು ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದು ಇಂದು #StopChinaNotFarmers ಎಂಬ ಘೋಷಣೆ ನೀಡಿದೆ.

ಕೇಂದ್ರ ಸರ್ಕಾರ ಹೇಗಾದರೂ ಮಾಡಿ ರೈತ ಹೋರಾಟವನ್ನು ತಡೆಯಬೇಕೆಂದು ಪ್ರಯತ್ನಿಸುತ್ತಿದೆ. ಆದರೆ ಅದೇ ಸಮಯದಲ್ಲಿ ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ ಗಡಿ ಕ್ಯಾತೆ ತೆಗೆದಿದೆ. ಭಾರತದ ಪ್ರದೇಶದೊಳಕ್ಕೆ ನುಗ್ಗಿರುವ ಚೀನಾ ಅರುಣಾಚಲ ಪ್ರದೇಶದಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚೀನಾವನ್ನು ತಡೆಯಬೇಕೆ ಹೊರತು ರೈತ ಹೋರಾಟವನ್ನಲ್ಲ ಎಂದು ಕಿಸಾನ್ ಏಕ್ತಾ ಮೋರ್ಚಾ ಪ್ರತಿಪಾದಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ.

“ಯುದ್ಧದ ಸಮಯದಲ್ಲಿ, ಕಾನೂನು ಮೌನವಾಗುತ್ತದೆ. ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ. ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಾಜ್ ಸಂದು ಕಿಸಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

‘ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ “ಕಿಸಾನ್ ಮೋರ್ಚಾ” ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು’ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. ಅದರಲ್ಲಿ ಬೌಧ್ಧರು, ಸಿಖ್ಖರು, ಮುಸ್ಲಿಂ ಮತ್ತು ಹಿಂದೂಗಳು ಒಟ್ಟಿಗೆ ಹೋರಾಟದಲ್ಲಿರುವ ಚಿತ್ರಗಳನ್ನು ಷೇರ್ ಮಾಡಲಾಗಿದೆ.

ಇಂದಿನ ಹ್ಯಾಷ್‌ಟ್ಯಾಗ್ #StopChinaNotFarmers ಆಗಿದೆ. ಇದನ್ನು ಬಳಸಿ ಷೇರ್ ಮಾಡಿ, ವೈರಲ್ ಮಾಡಿ. ನಮ್ಮ ಧ್ವನಿ ಸರ್ಕಾರಕ್ಕೆ ಕೇಳಲೇಬೇಕು ಮತ್ತು ಅದು ಈ ಕರಾಳ ಕಾನೂನುಗಳನ್ನು ವಾಪಸ್ ಪಡೆಯಲೇಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರ ಕರೆ ಸಫಲ ನೀಡಿದ್ದು ಕೆಲವೇ ಗಂಟೆಗಳಲ್ಲಿ ಈ ಹ್ಯಾಷ್‌ಟ್ಯಾಗ್‌ ಇಡೀ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುತ್ತಿದೆ.

ರೈತರನ್ನು ತಡೆಯಲು ಸಿಂಗು ಗಡಿಯಲ್ಲಿ ಮರಳು ತುಂಬಿದ ಟ್ರಕ್‌ಗಳು, ಮುಳ್ಳುತಂತಿ, ಬ್ಯಾರಿಕೇಡ್‌ಗಳು ಮತ್ತು ಕಂಟೈನರ್‌ಗಳನ್ನು ಅಡ್ಡಲಾಗಿ ನಿಲ್ಲಿಸಲಾಗಿದೆ. ಮೋದಿಯವರು ಇದೇ ಕೋಪವನ್ನು ಚೀನಾದೊಂದಿಗೆ ತೋರಿಸಿದ್ದರೆ ಇಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮವೊಂದನ್ನು ನಿರ್ಮಿಸುತ್ತಿರಲಿಲ್ಲ ಎಂದು ನವಜೋತ್ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವವನ್ನು ಆಚರಿಸಲು ದೆಹಲಿಯಲ್ಲಿ ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ತಡೆಯಲು ದೆಹಲಿ ಗಡಿಯಲ್ಲಿ ಸರ್ಕಾರದ ಸಿದ್ಧತೆ ಇದು! ಅವರು ಚೀನಾ ಗಡಿಯಲ್ಲಿ ಈ ರೀತಿಯ ತಯಾರಿ ಮಾಡಿದ್ದರೆ, ಅವರು ಲಡಾಖ್ ಮತ್ತು ಅರುಣಾಚಲದಲ್ಲಿ ನಮ್ಮ ಭೂಮಿಯನ್ನು ಚೀನಾ ಆಕ್ರಮಿಸದಂತೆ ತಡೆಯಬಹುದಿತ್ತು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ವರ್ತಮಾನವು ನಮ್ಮ ಭವಿಷ್ಯದ ಹಿಂದಿನದು. ಇದು ನಮ್ಮ ಐತಿಹಾಸಿಕ ಕ್ಷಣ. ನಾವು ಅದನ್ನು ಹೇಗೆ ಗೆದ್ದೆವೆ ಎಂಬುದನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಮಣಿ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಯಾರನ್ನೂ ಗೆಲ್ಲಲು ಅಥವಾ ಸೋಲಿಸಲು ನಾವು ಇಲ್ಲಿಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ !! ಎಲ್ಲಾ 3 ಮಸೂದೆಗಳನ್ನು ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆಯೇ ಹೊರತು ಮುಂದೂಡಲೆಂದಲ್ಲ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...