Homeಮುಖಪುಟಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ "ಕಿಸಾನ್ ಮೋರ್ಚಾ" ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ

- Advertisement -
- Advertisement -

ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 60 ದಿನಗಳನ್ನು ಪೂರೈಸಿದೆ. ಈ ನಡುವೆ ಒಂದೂವರೆ ವರ್ಷಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರದಕ್ಕೆ ನಿರ್ಧಾರಕ್ಕೆ ರೈತರು ಕಿವಿಗೊಟ್ಟಿಲ್ಲ. ಜನವರಿ 26 ರಂದು ಗಣರಾಜ್ಯೋತ್ಸವದಂದು ಬೃಹತ್ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಇಡಿ ವಿಶ್ವಕ್ಕೆ ತಮ್ಮ ಹೋರಾಟವನ್ನು ಪ್ರದರ್ಶಿಸುವತ್ತ ಅವರು ಗಮನ ನೀಡಿದ್ದಾರೆ. ಅಲ್ಲದೇ ರೈತ ಹೋರಾಟದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಪ್ರತಿದಿನವೂ ಒಂದೊಂದು ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದು ಇಂದು #StopChinaNotFarmers ಎಂಬ ಘೋಷಣೆ ನೀಡಿದೆ.

ಕೇಂದ್ರ ಸರ್ಕಾರ ಹೇಗಾದರೂ ಮಾಡಿ ರೈತ ಹೋರಾಟವನ್ನು ತಡೆಯಬೇಕೆಂದು ಪ್ರಯತ್ನಿಸುತ್ತಿದೆ. ಆದರೆ ಅದೇ ಸಮಯದಲ್ಲಿ ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ ಗಡಿ ಕ್ಯಾತೆ ತೆಗೆದಿದೆ. ಭಾರತದ ಪ್ರದೇಶದೊಳಕ್ಕೆ ನುಗ್ಗಿರುವ ಚೀನಾ ಅರುಣಾಚಲ ಪ್ರದೇಶದಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚೀನಾವನ್ನು ತಡೆಯಬೇಕೆ ಹೊರತು ರೈತ ಹೋರಾಟವನ್ನಲ್ಲ ಎಂದು ಕಿಸಾನ್ ಏಕ್ತಾ ಮೋರ್ಚಾ ಪ್ರತಿಪಾದಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ.

“ಯುದ್ಧದ ಸಮಯದಲ್ಲಿ, ಕಾನೂನು ಮೌನವಾಗುತ್ತದೆ. ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ. ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಾಜ್ ಸಂದು ಕಿಸಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

‘ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ “ಕಿಸಾನ್ ಮೋರ್ಚಾ” ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು’ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. ಅದರಲ್ಲಿ ಬೌಧ್ಧರು, ಸಿಖ್ಖರು, ಮುಸ್ಲಿಂ ಮತ್ತು ಹಿಂದೂಗಳು ಒಟ್ಟಿಗೆ ಹೋರಾಟದಲ್ಲಿರುವ ಚಿತ್ರಗಳನ್ನು ಷೇರ್ ಮಾಡಲಾಗಿದೆ.

ಇಂದಿನ ಹ್ಯಾಷ್‌ಟ್ಯಾಗ್ #StopChinaNotFarmers ಆಗಿದೆ. ಇದನ್ನು ಬಳಸಿ ಷೇರ್ ಮಾಡಿ, ವೈರಲ್ ಮಾಡಿ. ನಮ್ಮ ಧ್ವನಿ ಸರ್ಕಾರಕ್ಕೆ ಕೇಳಲೇಬೇಕು ಮತ್ತು ಅದು ಈ ಕರಾಳ ಕಾನೂನುಗಳನ್ನು ವಾಪಸ್ ಪಡೆಯಲೇಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರ ಕರೆ ಸಫಲ ನೀಡಿದ್ದು ಕೆಲವೇ ಗಂಟೆಗಳಲ್ಲಿ ಈ ಹ್ಯಾಷ್‌ಟ್ಯಾಗ್‌ ಇಡೀ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುತ್ತಿದೆ.

ರೈತರನ್ನು ತಡೆಯಲು ಸಿಂಗು ಗಡಿಯಲ್ಲಿ ಮರಳು ತುಂಬಿದ ಟ್ರಕ್‌ಗಳು, ಮುಳ್ಳುತಂತಿ, ಬ್ಯಾರಿಕೇಡ್‌ಗಳು ಮತ್ತು ಕಂಟೈನರ್‌ಗಳನ್ನು ಅಡ್ಡಲಾಗಿ ನಿಲ್ಲಿಸಲಾಗಿದೆ. ಮೋದಿಯವರು ಇದೇ ಕೋಪವನ್ನು ಚೀನಾದೊಂದಿಗೆ ತೋರಿಸಿದ್ದರೆ ಇಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮವೊಂದನ್ನು ನಿರ್ಮಿಸುತ್ತಿರಲಿಲ್ಲ ಎಂದು ನವಜೋತ್ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವವನ್ನು ಆಚರಿಸಲು ದೆಹಲಿಯಲ್ಲಿ ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ತಡೆಯಲು ದೆಹಲಿ ಗಡಿಯಲ್ಲಿ ಸರ್ಕಾರದ ಸಿದ್ಧತೆ ಇದು! ಅವರು ಚೀನಾ ಗಡಿಯಲ್ಲಿ ಈ ರೀತಿಯ ತಯಾರಿ ಮಾಡಿದ್ದರೆ, ಅವರು ಲಡಾಖ್ ಮತ್ತು ಅರುಣಾಚಲದಲ್ಲಿ ನಮ್ಮ ಭೂಮಿಯನ್ನು ಚೀನಾ ಆಕ್ರಮಿಸದಂತೆ ತಡೆಯಬಹುದಿತ್ತು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ವರ್ತಮಾನವು ನಮ್ಮ ಭವಿಷ್ಯದ ಹಿಂದಿನದು. ಇದು ನಮ್ಮ ಐತಿಹಾಸಿಕ ಕ್ಷಣ. ನಾವು ಅದನ್ನು ಹೇಗೆ ಗೆದ್ದೆವೆ ಎಂಬುದನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಮಣಿ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಯಾರನ್ನೂ ಗೆಲ್ಲಲು ಅಥವಾ ಸೋಲಿಸಲು ನಾವು ಇಲ್ಲಿಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ !! ಎಲ್ಲಾ 3 ಮಸೂದೆಗಳನ್ನು ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆಯೇ ಹೊರತು ಮುಂದೂಡಲೆಂದಲ್ಲ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...